Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

Read More

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ಆನಂದ ಈ. ಕುಂಚನೂರ ಬರೆದ ಈ ಭಾನುವಾರದ ಕತೆ

ನಿದ್ರೆಯಿಲ್ಲದೆ ಬಳಲಿಕೆಯಲ್ಲಿ ಅಸಾಧ್ಯ ಆಕಳಿಕೆ ಬರುತ್ತಿದ್ದರೂ ಕಣ್ರೆಪ್ಪೆ ಒಂದನ್ನೊಂದು ತಾಕುತ್ತಿರಲಿಲ್ಲ. ಯಾವಾಗಲೂ ನುಂಗುವ ನಿದ್ದೆ ಗುಳಿಗೆ ಕೂಡ ಈಗೀಗ ಕೆಲಸ ಮಾಡುತ್ತಿಲ್ಲ. ಹೀಗೆ ಎಲ್ಲ ಅಸಂಖ್ಯ ಕಾರ್ಮೋಡಗಳ ಮಧ್ಯೆ ಬೆಳ್ಳಿರೇಖೆಯೊಂದು ಮಿಂಚಿದಂತಾಗಿ ಗೆಲುವಾದರು. ತಮಗೆ ಹೊಳೆದ ವಿಚಾರಕ್ಕೆ ಖುಷಿಯಾಯಿತು.
ಆನಂದ ಈ. ಕುಂಚನೂರ ಹೊಸ ಕಥಾ ಸಂಕಲನ “ನಿರೂಪ”ದ ಒಂದು ಕತೆ “ನಕ್ಷತ್ರ ದಾನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ