Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೃಷ್ಣ ದೇವಾಂಗಮಠ ಬರೆದ ಕತೆ

ಹೋಗುತ್ತಾ ನನಗೆನೋ ಕೊಟ್ಟು ಒಂದಷ್ಟು ಕಸಿದುಕೊಂಡು ಟಾಟಾ ಬೈಬೈ ಹೇಳುತ್ತಾ ಕಣ್ಮರೆಯಾಯಿತು. ಮತ್ತೆ ಮನಸ್ಸಿಗೆ ಹೊಸ ತಳಮಳ. ಯಾವ್ಯಾವುದೋ ಮನುಷ್ಯ ಸಹಜ ಆಸೆಗಳು ಮೈತಳೆಯುತ್ತಿದ್ದವು. ಆದರೆ ಎಲ್ಲವೂ ಅಸ್ಪಷ್ಟ ಆಕೃತಿಗಳು. ಬಸಿರಿನಲ್ಲಿ ಕೈ ಕಾಲು ಮೂಡದ ಭ್ರೂಣಾವಸ್ತೆಯ ಹಂತದವು. ಕನಸಿನ ಮಂಜು ಮಂಜಾದ ಚಿತ್ರಪಟಗಳಂತಹವು. ಮನಸ್ಸು ಮತ್ತಷ್ಟು ಗೊಂದಲದ ಗೂಡಾಯಿತು. ಅಲ್ಲಿ ನನ್ನ ಜನರ ಮಧ್ಯದಿಂದ ಸುಂಯ್ಯ ಎಂದು ಹಾರಿದ ವಿಮಾನ ಇಲ್ಲಿ ನನ್ನವರಲ್ಲದ ಮತ್ತು ನನ್ನವರಾಗಲಿರುವವರ ಮಧ್ಯೆ ಸದ್ದಿಲ್ಲದೆ ಇಳಿಸಿತು.
ಕೃಷ್ಣ ದೇವಾಂಗಮಠ ಬರೆದ ಕತೆ “ಪೇಯಿಂಟಿಂಗ್ “

Read More

ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ಈಗ ಗೋಡೆಯ ಮೇಲಿನ ಚಿತ್ರಗಳು ಬದಲಾಗಿ ವಿಶಾಲವಾದ ಸಮುದ್ರ ಗೋಚರಿಸತೊಡಗಿದೆ. ಸಮುದ್ರದ ನಟ್ಟನಡುವೆ ಹಡಗಿನಲ್ಲಿ ರಮೇಶ, ಶೇಖರ ಹಾಗೂ ಹೆಂಗಸೊಬ್ಬಳು ನಿಂತಿದ್ದಾರೆ! ಹೆಂಗಸಿನ ಅಣತಿಯನ್ನು ಶಿರಸಾವಹಿಸಿ ಪಾಲಿಸುವಂತೆ ರಮೇಶ, ಶೇಖರನನ್ನು ಹಡಗಿನಿಂದ ಸಮುದ್ರಕ್ಕೆ ದೂಡಿದ! ಉರವಣಿಸಿ ಬಂದ ಅಲೆಗಳು ಶೇಖರನನ್ನು ತಮ್ಮೊಳಗೆ ಕರಗಿಸಿಕೊಂಡವು. ಶೇಖರ ಇನ್ನಿಲ್ಲವಾದ! ‘ಇಲ್ಲಾ, ಇಲ್ಲಾ! ನಾನು ಮದುವೇನೇ ಆಗಲ್ಲ!’ ಎಂದು ಚೀರಿ ಕನಸಿನ ಭ್ರಮಾಲೋಕದಿಂದ ವಾಸ್ತವ ಪ್ರಪಂಚಕ್ಕೆ ಮರಳಿದ ರಮೇಶ!
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ “ಸಹೋದರರ ಕನಸು” ಹೊಸ ವರ್ಷದ ಮೊದಲ ಓದಿಗೆ

Read More

ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ರೂಡಿ ಯಾರು, ಏನು, ಎತ್ತ ಎಂಬುವುದು ಗೊತ್ತೇ ಇರದಿದ್ದರೂ ಯಾವುದೋ ಅಸಹಾಯಕತೆಯೊಂದು ಅವನನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಅವಳಿಗೆ ಆಗಾಗ ಅನ್ನಿಸುತ್ತಿತ್ತು. ಪ್ರತಿ ಬೆಳಗೂ ‘ಈವತ್ತು ಹೇಗಾದರೂ ಸರಿ, ಅವನನ್ನು ಕೇಳಲೇಬೇಕು’ ಎಂಬ ಪ್ರತಿಜ್ಞೆಯೊಂದಿಗೆ ಹಾಸಿಗೆಯಿಂದ ಏಳುತ್ತಿದ್ದಳು. ಆದರೆ ಹಾಗೆ ಕೇಳಬೇಕೆಂದು ಹೊರಟಾಗೆಲ್ಲಾ ಗಂಟಲಲ್ಲಿ ಒಂದು ಮುಳ್ಳು ಸಿಕ್ಕಿಹಾಕಿಕೊಂಡಂತಾಗಿ ಕೇಳಲಾಗದೆ ಇದ್ದುಬಿಡುತ್ತಿದ್ದಳು. ಹೋಗಲಿ, ತಾನು‌ ನಲವತ್ತರ ಹೊಸ್ತಿಲು ದಾಟಿದವಳು…
ಫಾತಿಮಾ ರಲಿಯಾ ಬರೆದ ಕತೆ “ರೂಡಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಹೊಸ ಜೀವಸೆಲೆ ಮತ್ತು ಹೊಸ ಹೊಳಹುಗಳು….

ರಾತ್ರಿ ನಿದ್ದೆಗೆಟ್ಟಿದ್ದಕ್ಕೆ ಬಂದಿದ್ದ ತಲೆಸುತ್ತೋ, ಹೊಟ್ಟೆಗಿಲ್ಲದೇ ಆದ ಆಯಾಸವೋ ಅಥವಾ ಹ್ಯಾಂಗೋವರೋ ಒಟ್ಟು ತಲೆ ಗಿಂ ಎಂದು ಬಹಳ ಜೋರಾಗಿ ಚಕ್ಕರ್ ಬಂದು ವಾಂತಿ ಬರುವ ಹಾಗಾಯಿತು. ಇನ್ನು ಒಂದೇ ಒಂದು ಕ್ಷಣ ನಿಂತಿದ್ದರೂ ಬಿದ್ದೇಬಿಡುತ್ತೇನೆ ಎಂದನಿಸಿತು. ಕೈಯಲ್ಲಿ ಹಸುಗೂಸಿದೆ ಎನ್ನುವುದನ್ನೂ ಮರೆತು ಮಗುವಿನ ತಲೆಯನ್ನು ಎದೆಗೆ ಅವುಚಿಸಿಕೊಂಡಿದ್ದ ಎಡಗೈಯಿಂದ ಅರವಿಂದನ ತೋಳನ್ನು ಹಿಡಿದುಕೊಳ್ಳಲು ಹೋದಳು. ಮಗುವಿನ ತಲೆಗೆ ಯಾವ ಆಧಾರವೂ ಇಲ್ಲದಂತಾಗಿ ಹಿಮ್ಮೀಟಿದಂತಾಗಿ ಜೋರಾಗಿ ಅಳತೊಡಗಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಕೊನೆಯ ಕಂತು ನಿಮ್ಮ ಓದಿಗಾಗಿ

Read More

ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕತೆ

ಏನೊ ಆತಂಕ. ಒಂಟಿತನ. ಈ ಓದು ಕೂಡ ಉಪಯೋಗ ಇಲ್ಲ. ಬುದ್ದಿಗೆ ಬೆಲೆ ಇಲ್ಲ. ದಡ್ಡರಿಗೇ ಎಲ್ಲೆಡೆ ದೊಡ್ಡ ದೊಡ್ಡ ಪದವಿ. ಮೂರ್ಖರು ಮೂರ್ಖರನ್ನೆ ಬೆಳೆಸುತ್ತಾರೆ. ಈ ಜಾತಿ ಕೂಪದಲ್ಲಿ ನಾನು ಏನೇ ಆಗಿದ್ದರೂ ಅದೇ ಆಗಿರುತ್ತೇನೆ. ಅದಕ್ಕಾಗಿ ಯಾಕೆ ಇಷ್ಟೆಲ್ಲ ಹೋರಾಟ? ವಿದ್ವತ್ತು? ಮನುಷ್ಯತ್ವ… ಕೊನೆಗೂ ನನಗೇನು ಉನ್ನತ ಕೆಲಸ ಸಿಗುವುದಿಲ್ಲವಲ್ಲಾ ಎಂದು ಮಂಕಾಗಿದ್ದೆ. ವಿಶ್ವಾಸ ಕುಗ್ಗುತ್ತಿತ್ತು. ಅವನು ನನ್ನ ಅಪ್ಪ ನಾಲ್ಕನೆ ಬಾರಿಗೆ ಯಾವುದೊ ಒಂದು ಹೆಂಗಸ ಒಪ್ಪಿಸಿ ಕರೆತಂದು ಮನೆಯಲ್ಲಿ ಇಟ್ಟುಕೊಂಡಿದ್ದನಂತೆ.
ಮೊಗಳ್ಳಿ ಗಣೇಶ್ ಬರೆದ ಕಥೆ “ಅವಳು ಚಿಲುಮೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ