Advertisement

Category: ಸಾಹಿತ್ಯ

ಒಂದೇ ಮನೆಯ ಹಲವು ಮನಗಳು….

ಫೋನಿನಲ್ಲಿ ವಿನಯನ ಜತೆ ಮಾತಾಡುತ್ತಿದ್ದವನು ಅಲಿಶಾ ಉಸಿರಾಡುತ್ತಿದ್ದಾಳಾ? ಆಕೆ ಮಾತಾಡುತ್ತಿದ್ದಾಳಾ? ಮೂವತ್ತು ಸೆಕಂಡುಗಳ ಕಾಲ ಆಕೆಯ ಉಸಿರಾಟ ಮತ್ತು ನಾಡಿಬಡಿತ ನೋಡಿ ಹೇಳು ಎಂದು ಅವನ ಪ್ರೋಟೊಕಾಲಿನಲ್ಲಿದ್ದಂತೆ ವಿನಯನಿಗೆ ಹೇಳುತ್ತಿದ್ದ. ವಿನಯ ‘ನಾನೂ ಒಬ್ಬ ಡಾಕ್ಟರು. ನನ್ನ ಹೆಂಡತಿಯೂ ಡಾಕ್ಟರು. ಅವಳಿಗೇನೂ ಆಗಿಲ್ಲ. ಅವಳಿಗೆ ತಕ್ಷಣ ಹೆರಿಗೆಯಾಗಬೇಕು. ನೀನು ತಕ್ಷಣ ಆ್ಯಂಬುಲೆನ್ಸ್ ಕಳಿಸಲಿಲ್ಲ ಎಂದರೆ ನಾನೇ ಡ್ರೈವ್ ಮಾಡಿಕೊಂಡು ಆಸ್ಪತ್ರೆಗೆ ಹೋಗುತ್ತೇನೆ’…
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಏಳನೆಯ ಕಂತು ನಿಮ್ಮ ಓದಿಗಾಗಿ

Read More

ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

Read More

ದಡ ಮುಟ್ಟದ ದೋಣಿಗಳಲ್ಲಿ ಕೂತು…

ಒಂದಾದ ನಂತರ ಒಂದರಂತೆ ಮೂರು ಮಕ್ಕಳನ್ನು ಮಾಡಿಕೊಂಡು ನಂತರ ತಮ್ಮತಮ್ಮ ಕೆಲಸ, ಕಾರ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕೇವಲ ಒಂದು ದಿನದ ಹಿಂದೆ ಮಾತಾಡಿದ್ದಷ್ಟೇ ಅಲ್ಲ, ಮನೆಗೆ ಬಂದು ಸಹಾಯ ಮಾಡಬೇಕು ಎಂದು ನನ್ನನ್ನು ದುಂಬಾಲುಬಿದ್ದ ಅಪ್ಪಟ ಶ್ರೀಸಂಸಾರಿಯಂತೆ ಕಾಣುವ ವಿನಯ, ಅಲಿಶಾ ಜತೆ ನಿಜವಾಗಿಯೂ ಒಂದು ಬದ್ಧ ಸಂಬಂಧದಲ್ಲಿದ್ದಾನೆಯೇ?
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಆರನೆಯ ಕಂತು ನಿಮ್ಮ ಓದಿಗಾಗಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ

ಕಂತುಗಳನ್ನು ಸರಿಯಾಗಿ ಕಟ್ಟಲಿಲ್ಲವೆಂದು ಮನೆಯನ್ನು, ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕಿನವರು ಬಂದಾಗ ಆಶ್ಚರ್ಯವೆಂಬಂತೆ ತಾನೇ ಮುಂದೆ ನಿಂತು ಅವನ್ನೆಲ್ಲಾ ಅವರಿಗೆ ಬಿಟ್ಟುಕೊಟ್ಟ. ಅಡ್ಡಬಂದ ಹೆಂಡತಿಗೆ, ‘ಇಲ್ಲಿಗೆ ಬರುವಾಗ ಏನನ್ನೂ ತಂದಿರಲಿಲ್ಲ, ಹೋಗುವಾಗಲೂ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ..
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ “ಜೀ ಗಾಂಧಿ” ನಿಮ್ಮ ಓದಿಗೆ

Read More

‘ವಾಟ್ ದ ಹೆಕ್’ ಅಮ್ಮಾ…

‘ನೀವೇ ಸರಿ, ಅರವಿಂದರಾಯರೇ. ಮಕ್ಕಳನ್ನು ಬಹಳ ಚೆನ್ನಾಗಿ ಬೆಳೆಸಿದ್ದೀರಿ’ ಇನ್ನೂ ಅವರ ಮಾತು ಮುಗಿದಿಲ್ಲ. ಎಲ್ಲಿಂದ ಬಂತೋ ಒಂದು ದೊಡ್ಡ ಅಲೆ, ಅಲ್ಲಿ ಕೂತಿದ್ದವರನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿಬಿಟ್ಟಿತು. ಕಣ್ಣು ಮುಚ್ಚಿ ಬಿಡುವುದರಲ್ಲಿ ಎಲ್ಲ ಮರಳು, ಎಲ್ಲೆಲ್ಲೂ ನೀರು. ಜನರ ಕೂಗು, ಹಾಹಾಕಾರ. ಸುಕನ್ಯ ಕಣ್ಣು ಬಿಟ್ಟಾಗ ಹತ್ತಿರ ಯಾರೂ ಕಾಣುತ್ತಿಲ್ಲ. ‘ವಿನೂ, ವಿಶೂ’ ಜೋರಾಗಿ ಕೂಗುತ್ತಾ ಇಡೀ ಸಮುದ್ರದ ದಡದಲ್ಲಿ ಹುಚ್ಚು ಹಿಡಿದಂತೆ ಓಡುತ್ತಿದ್ದಾಳೆ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ