[widget id=”annual_archive_widget-2″]
[widget id=”polls-widget-2″]
ವೈಶಿಷ್ಟ್ಯದ ಲೇಖನಗಳು
ಬರ ನೀಗುವ ಕೆರೆಗೇಕೆ ಬರೆ: ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ
ಇದನ್ನೆಲ್ಲಾ ಕೇಳುತ್ತಿದ್ದ ವಿದ್ಯಾರ್ಥಿಗಳಿಗಂತೂ, ತಮ್ಮ ತಮ್ಮ ಊರನ್ನು ಉಳಿಸಿಕೊಳ್ಳಲು, ತಮ್ಮ ಊರಿನ ಪರಿಸರ, ಕೆರೆ-ಕಟ್ಟೆಗಳನ್ನು ಕಾಪಾಡಲು ಪಣತೊಡಲೇಬೇಕು, ಕೈಲಾದದ್ದು ಮಾಡಲೇಬೇಕೆಂಬ ಉತ್ಕಟ ಉಮೇದು ಹುಟ್ಟಿತು. ವಿಚಾರ ಸಂಕಿರಣದ ಮುಖ್ಯ ಭಾಗವಾಗಿ ವಿದ್ಯಾರ್ಥಿಗಳಿಂದ ವಿಚಾರ ವಿನಿಮಯ, ತಮ್ಮ ಯೋಜನೆಗಳ ವಿವರಣೆ, ಸಾಕ್ಷ್ಯಚಿತ್ರ ಪ್ರದರ್ಶನ ಬಾಕಿಯಿತ್ತು. ಇಂತಹ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಮನಸ್ಪೂರ್ತಿಯಾಗಿ ಸಂಜೆಯವರೆಗೂ ಭಾಗವಹಿಸಿದ ಕಾವ್ಯ, ತನ್ನ ಮುಂದಿನ ಲೇಖನದಲ್ಲಿ ಕೆರೆಗಳ ಬಗ್ಗೆ ಏನು ಬರೆಯಬೇಕೆಂದು ತನ್ನ ನೋಟ್ ಬುಕ್ಕಿನಲ್ಲಿ ಗುರುತುಹಾಕಿಕೊಂಡಳು.
ಕ್ಷಮಾ ವಿ. ಭಾನುಪ್ರಕಾಶ್ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ಯಲ್ಲಿ ಐದನೆಯ ಕತೆ
ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು”
ನೆತ್ತಿಯ ಮೇಲಿನ ಕಣ್ಣ ಸ್ವಾಮೀಜಿ ಈಗ ಸಮಾಧಾನದಲ್ಲಿದ್ದು ಬೆವರುವುದನ್ನು ನಿಲ್ಲಿಸಿದ್ದರು. ಉಂಗುರಗಳನ್ನು ಹಾಕಿದ್ದ ಹಿತ್ತಾಳೆ ಚೊಂಬಿನ ನೀರನ್ನು ಇಬ್ಬರಿಗೂ ತೀರ್ಥದಂತೆ ಕೊಟ್ಟು ತಾವೂ ಬಲಗೈ ಗೆ ಬಗ್ಗಿಸಿಕೊಂಡರು. ಸ್ವಾಮೀಜಿ ಏನು ಮಾಡುತ್ತಾರೋ ಅದನ್ನೇ ಮಾಡಲು ತಯಾರಾದ ದಂಪತಿಗಳು ಅವರನ್ನೇ ನೋಡುತ್ತಿದ್ದರು. ಸ್ವಾಮೀಜಿ ನೀರಿದ್ದ ಕೈಯನ್ನು ಎರಡೂ ಕಣ್ಣುಗಳಿಗೆ ಒತ್ತಿಕೊಂಡು ಗಟಕ್ಕೆಂದು ಆ ನೀರನ್ನು ಕುಡಿದರು. ನಂತರ ಅಂಗೈಯನ್ನು ಮುಂಡಾಸಿನ ಬಳಿ ತಗೊಂಡುಹೋದರು. “ಅಯ್ಯೋ, ಪೇಟವನ್ನ ತೆರೆದು ಮೂರನೇ ಕಣ್ಣಿಗೆ ಒರಸಿಬಿಡುತ್ತಾರೇನೋ?”
ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು” ನಿಮ್ಮ ಓದಿಗೆ
ಆಸ್ಟ್ರೇಲಿಯಾ-ಭಾರತೀಯರ ಕತೆಗಳ ಜುಗಲ್ ಬಂದಿ: ಡಾ. ವಿನತೆ ಶರ್ಮ ಅಂಕಣ
ಒಮ್ಮೊಮ್ಮೆ ಇಲ್ಲಿ ಬಂದು ಸಂದ ಮೇಲೆ ಅಲ್ಲಿನ ತವರಿಗೆ ಭೇಟಿ ಕೊಟ್ಟಾಗ ಅಲ್ಲೂ ಇಲ್ಲ ಇಲ್ಲೂ ಇಲ್ಲ ಅನ್ನೋ ಎಡಬಿಡಂಗಿತನ ಧುತ್ತನೆ ಎದುರು ನಿಲ್ಲುತ್ತದೆ. ಆದರೆ ಆ ಎಡಬಿಡಂಗಿತನದಲ್ಲಿದೆ ಒಂದಷ್ಟು ನಗು, ಹರ್ಷ, ಉಲ್ಲಾಸ, ಪರಸ್ಪರತೆ, ಜೊತೆಯಾಗುವುದು. ಕುತೂಹಲ ಮೂಡಿಸುವುದು ಕಿರಿವಯಸ್ಸಿನ ಕತೆಗಾರರ ಅನುಭವ ಮೂಸೆಯಲ್ಲಿ ಪರಿಮೂಡುವ ಆಸ್ಟ್ರೇಲಿಯನ್-ಭಾರತೀಯತೆ ಕಲ್ಪನೆ ಮತ್ತು ಹೊಂದಾಣಿಕೆ. ಇವಷ್ಟೇ ಅಲ್ಲ. ಮಧ್ಯಮ ಮತ್ತು ಹಿರಿವಯಸ್ಸಿನ ಕತೆಗಾರರ ದನಿಯಲ್ಲಿ ಚಿತ್ರಿತವಾಗುವ ಹೊಸದೇಶ, ಅಪರಿಚಿತ ಸಮಾಜದ, ಅಲ್ಲಿನ ವ್ಯವಸ್ಥೆಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಯತ್ನಗಳು, ಅವಲ್ಲಿರುವ ಸಾಹಸಗಳು, ಸೋಲು-ಗೆಲುವು, ಆಂತರಿಕ ಒಳನೋಟಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಕಮಲಾದಾಸ್, ಅನುವಾದ ಹಾಗೂ ಬರಹವೆಂಬ ಬಿಡುಗಡೆ….: ಡಾ. ಎಲ್.ಜಿ. ಮೀರಾ ಅಂಕಣ
ಆಧುನಿಕ ಭಾರತೀಯ ಸಾಹಿತ್ಯಚರಿತ್ರೆಯ ಲೇಖಕಿಯರ ಪಟ್ಟಿಯೆಂಬ ಆಕಾಶಗಂಗೆಯಲ್ಲಿ ಎದ್ದು ಕಾಣುವ ಒಂದು ವಿಭಿನ್ನ ನಕ್ಷತ್ರವೆಂದರೆ ಅದು ಕಮಲಾದಾಸ್. ಕೇರಳದ ಮಗಳಾದ ಈ ಹೆಣ್ಣುಮಗಳು ಲೋಕವನ್ನು ಕುರಿತ ತನ್ನ ಸೂಕ್ಷ್ಮ ಗ್ರಹಿಕೆಯಿಂದ ಬೇರೆ ಲೇಖಕ, ಲೇಖಕಿಯರು ಹೋಗಲು ಹೆದರುವ ಭಾವಲೋಕಗಳಿಗೆ ದಿಟ್ಟವಾಗಿ ಕಾಲಿಟ್ಟರು. ಪ್ರೀತಿ, ಮದುವೆ, ಜೀವನ, ಸಂಬಂಧಗಳು ಇವೆಲ್ಲವನ್ನೂ ಪುರುಷ ಪ್ರಧಾನ ಜಗತ್ತಿನಲ್ಲಿ ಹುಟ್ಟಿದ್ದರೂ ಅದರ ಬಂಗಾರದ ಸರಪಳಿಗಳಲ್ಲಿ ಬಂಧಿಯಾಗಲೊಪ್ಪದ ಧೈರ್ಯದ ಹೆಣ್ಣಿನ ಕಣ್ಣಿಂದ ನೋಡಿದರು, ಬರೆದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೊಂಭತ್ತನೆಯ ಬರಹ

ಇತ್ತೀಚಿನ ಲೇಖನ
[pt_view id=”1078996jn2″]
Twitter Feeds
[fts_twitter twitter_name=@CodeWebber tweets_count=3 twitter_height=300px cover_photo=no stats_bar=no show_retweets=no show_replies=no]
Facebook Feeds
[fts_facebook type=page id=codewebber posts=3 height=300px posts_displayed=page_only]


