ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ
ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ. ಪಾಲಿಗೆ ಬಂದ ಕರ್ತವ್ಯವನ್ನು ಮಾಡಿ ಮುಗಿಸುವುದೊಂದೇ ನಮ್ಮ ಧರ್ಮ’ ಎಂದು ಎಷ್ಟು ಸಲ ನೊಂದು ಹೇಳುತಿದ್ದರೋ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

