Advertisement

ಕರುಣಾಳು ಬಾ ಬೆಳಕೆ-ನವೋದಯ ಕನ್ನಡ ಕಾವ್ಯದಲ್ಲಿ ಪ್ರಾರ್ಥನೆ: ಸುಕನ್ಯಾ ಕನಾರಳ್ಳಿ ಅಂಕಣ

ನಾಗರಿಕತೆಯ ಇತಿಹಾಸ ಬರ್ಬರತೆಯ ಇತಿಹಾಸವೂ ಹೌದು ಎಂದು ಕಾರ್ಲ್ ಮಾರ್ಕ್ಸ್ ಹೇಳುತ್ತಾನೆ. ವೈಚಾರಿಕತೆ, ವಿಜ್ಞಾನ, ತಂತ್ರಜ್ಞಾನಗಳು ಹೊರಗಿಂದ ಬಂದು ಎರಡು ದಿನವಿದ್ದು ಮರಳಿ ಹೋದ ನೆಂಟರಾಗಿರಲಿಲ್ಲ. ಬದಲಿಗೆ ನಮ್ಮ ದೃಷ್ಟಿಕೋನಗಳನ್ನೇ ಪಲ್ಲಟಿಸಿದ, ಅಸಹನೆ ಮತ್ತು ಕ್ರೌರ್ಯಗಳನ್ನು ಸಾಮಾನ್ಯವಾಗಿಸಿದ ಪ್ರಚಂಡ ಶಕ್ತಿಯವು. ಯಂತ್ರವೇ ಬೃಹತ್ತಾಗಿ ಬೆಳೆದು ಮನುಷ್ಯ ಕುಲವನ್ನು ಆತ್ಮಹೀನವಾಗಿಸುವ ನಾಗರಿಕತೆ ಎಂಬ ದಮನಶಕ್ತಿಯ ಬಗ್ಗೆ ಎಚ್ಚರಿಸಲು ಇಂಗ್ಲೀಷ್ ರೊಮ್ಯಾಂಟಿಕ್ಕರು ಪ್ರಕೃತಿಯ ದನಿಯಾದ ಕಾವ್ಯವನ್ನೇ ಬಳಸಿಕೊಂಡರು. ಚಾರ್ಲಿ ಚಾಪ್ಲಿನ್ ತನ್ನ ಆ ಸತ್ಯವನ್ನೇ ತನ್ನ ‘ಮಾಡರ್ನ್ ಟೈಮ್ಸ್’ ಎಂಬ ದೃಶ್ಯಕಾವ್ಯದಲ್ಲಿ ಸಾರಿದ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಏಳನೆಯ ಬರಹ

Loading

ಅಂಕಣ

Latest

ಜೋಡಿಯ ಜೊತೆ, ಪ್ರಧಾನಿಯ ಮದುವೆ: ವಿನತೆ ಶರ್ಮ ಅಂಕಣ

ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ. ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

ಸರಣಿ

ನಾಟಕರಂಗದ ತಮಾಷೆ ಪ್ರಸಂಗಗಳು: ಚಿತ್ರಾ ವೆಂಕಟರಾಜು ಸರಣಿ

ಬರುವಾಗ ಸುಳ್ಯ, ಪುತ್ತೂರಿನ ಸಮೀಪ ಬೆಳಗಿನ ಜಾವ ಸುಮಾರು ೪ ಗಂಟೆಗೆ ಮೂತ್ರವಿಸರ್ಜನೆಗಾಗಿ ಗಾಡಿ ನಿಲ್ಲಿಸಿದರು. ನಂತರ ಹೊರಟು ಇನ್ನೇನು ಮೈಸೂರು ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಸಂಪೂರ್ಣ ಎ‍ಚ್ಚರವಾಯಿತು. ಇದ್ದಕ್ಕಿದ್ದಂತೆ ಯಾರೋ 'ರಾಜಪ್ಪ ಎಲ್ಲಿ' ಅಂತ ಕೇಳಿದರು. ಟೆಂಪೋ ಎಲ್ಲಾ ಹುಡುಕಿದರೂ ರಾಜಪ್ಪ ಇಲ್ಲ. ಎಲ್ಲಿ ಬಿಟ್ಟು ಬಂದ್ವಿ ಗೊತ್ತಿಲ್ಲ. ಅವರು ಪಾಪ ಒಂದು ಪಟಾಪಟಿ ಲುಂಗಿ ಬನಿಯನ್ ಮತ್ತು ಟವೆಲ್ ಸುತ್ತಿಕೊಂಡು ಇಳಿದವರು ವಾಪಸ್ ಬರುವ ಹೊತ್ತಿಗೆ ಟೆಂಪೋ ಹೊರಟಾಗಿತ್ತು. ಕಾಲಲ್ಲಿ ಚಪ್ಪಲಿಯೂ ಇಲ್ಲದಂತೆ ಯಾರದ್ದೋ ಸಹಾಯ ಕೇಳಿ ಕೊನೆಗೆ ಚಾಮರಾಜನಗರದಲ್ಲಿ ಕಾಣಿಸಿಕೊಂಡರು. ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

ಪ್ರವಾಸ

ಅಂಡಮಾನ್ ಪ್ರವೇಶ ಬಿಂದು ಪೋರ್ಟ್ ಬ್ಲೇರ್ ದ್ವೀಪದಲ್ಲಿ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು. ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

ವ್ಯಕ್ತಿ ವಿಶೇಷ

ಹೋಗುತ್ತಾ ಹೋಗುತ್ತಾ.. ಕಳೆದೇ ಹೋಗಿದ್ದೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಹಾಗೆ ನಡೆದುಕೊಂಡು ಹೋಗುವಾಗ, ಊರಿನ ಪಡ್ಡೆ ಹುಡುಗರೆಲ್ಲ ‘ಸೋಗಲಾಡಿ ಸುಬ್ಬಿ, ಸೋಗಲಾಡಿ ಸುಬ್ಬಿ’ ಎಂದು ತಮಾಷೆ ಮಾಡುತ್ತಿದ್ದರು. ಆರು ವರ್ಷದವಳಾಗಿದ್ದ ನಾನು, ಇವ್ಯಾವ ಮಾತು ನನಗೆ ಬೇಕಿಲ್ಲವೆಂಬಂತೆ ಅವರೆಡೆಗೆ ಕಣ್ಣು ಹಾಯಿಸಿ, ಹುಬ್ಬೇರಿಸಿ ಮುಂದೆ ಹೆಜ್ಜೆ ಹಾಕುತ್ತಿದ್ದೆ. ಶಾಲೆಗೆ ಬಂದರೆ ಕೇಳಬೇಕೇ! ಕೆಲವರು ‘ನೀನು ಮಲ್ಲವ್ವನೋ ಸಿಂಗಾರವ್ವನೋ?’ ಎಂದರೆ, ಎಲ್ಲ ಟೀಚರ್ ಸೇರಿ ‘ನಿಮ್ಮವ್ವಗ ಕೆಲ್ಸ ಇಲ್ಲ, ನಿಂಗ್ ಬ್ಯಾಸರಿಲ್ಲ ತಗ’ ಎಂದು ನಾನು ಮಾಡಿಕೊಂಡ ಸಿಂಗಾರದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ"

ಸಂಪಿಗೆ ಸ್ಪೆಷಲ್

‘ಡಿಸೆಂಬರ್ ಬಂದಿತು, ಚಳಿಯಾಕೆ ಬಂದಳು’: ಮಹಾಲಕ್ಷ್ಮೀ ಕೆ.ಎನ್.‌ ಬರಹ

ಈ ಬೆಟ್ಟಕ್ಕೆ, ಆ ಮರಕ್ಕೆ, ಹೆಂಚಿನ ಪುಟ್ಟ ಮನೆಗೆ ಹಿಮದ ಹೊದಿಕೆ ಬಂದುಬಿಡುತ್ತೆ. ನಮ್ಮನ್ನೂ ಆ ಹೊದಿಕೆ ಆವರಿಸಿಬಿಡುತ್ತದೆ. ವಿಸ್ಮೃತ ದೃಶ್ಯವನ್ನು ತಂದಿಟ್ಟುಬಿಡುತ್ತದೆ. ಹೆಜ್ಜೆ ಇಟ್ಟಲ್ಲೆಲ್ಲಾ ಹಿಮಮಣಿ ಕಾಲಿಗೆ ಮುತ್ತಿಡುತ್ತದೆ. ಎಳೆಕೂಸಿನ ಕೈ ಕಾಲುಗಳ ಮೆತ್ತಗೆ ಹಿಡಿದು ತೊಳೆಯುವಂತೆ ನಮ್ಮನ್ನು ತಣ್ಣಗೆ ಸೋಕಿ ತೊಳೆಯುತ್ತದೆ ಮಂಜು. ಹಿಮವು ನೆಲದ ಮೇಲೆ ಆವರಿಸಿದಾಗ ಧ್ವನಿ ಹೀರಿಕೊಳ್ಳುವ ಸಾಧನವಾಗಿ ಕಾರ್ಯನಿರ್ವಹಿಸುವುದರಿಂದ ಇಷ್ಟು ದಿನದ ಸದ್ದು ಸಪ್ಪಳ ಸುಮ್ಮನಾಗುತ್ತದೆ. ಡಿಸೆಂಬರ್‌ ಚಳಿಯ ಕುರಿತು ಮಹಾಲಕ್ಷ್ಮೀ ಕೆ.ಎನ್.‌ ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

"ಆ ಶಿವನು ವಿಲ ವಿಲನೇ ಒದ್ದಾಡಿ.. ಅವ್ವನ ನಂಬಿಕೆಯ ಜೊತೆಗೆ ಗುದ್ದಾಡಿ..  ಸೋತ ಶಿವ ನಾನು ಚೇತರಿಸಿ ಕೊಂಡಂತೆಯೂ... ಮಾಡಿಬಿಡುತ್ತಾನೆ..."- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ. ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ