ಸಾಮರಸ್ಯವೇ ಇಲ್ಲಿ ಸಲ್ಲುವುದು: ವಿನತೆ ಶರ್ಮ ಅಂಕಣ
ಆಸ್ಟ್ರೇಲಿಯಾದಲ್ಲಿ ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳು ಬರಲಿವೆ. ಬಹುಸೂಕ್ಷ್ಮವಾಗಿ ಅವಲೋಕಿಸಿದರೆ ದಾಳಿಗೀಡಾದ ಧರ್ಮದ ಜನಸಮುದಾಯದ ದನಿಗೆ ಈಗಾಗಲೇ ಒಂದು ನಿರ್ದಿಷ್ಟ ಬಲ ಬಂದಿದೆ. ಇದು ಮತ್ತಷ್ಟು ಬೆಳೆಯುವ ಸೂಚನೆಗಳಿವೆ. ದೂರದ ಅಮೆರಿಕೆಯಲ್ಲಿ ಈ ಜನಸಮುದಾಯವು ಎಲ್ಲಾ ಮಟ್ಟಗಳಲ್ಲೂ ಆಳವಾದ ಪ್ರಭಾವ ಮತ್ತು ಹಿಡಿತವನ್ನು ಹೊಂದಿದೆ. ಮತ್ತೊಂದು ವಸಾಹತುಶಾಹಿ ಸಮಾಜವಾದ ಆಸ್ಟ್ರೇಲಿಯಾದಲ್ಲೂ ಹಾಗಾಗಬಹುದೆ? ದಾಳಿ ನಡೆಸಿದ ಅಪ್ಪ-ಮಗ ಜೋಡಿಯಲ್ಲಿ, ಅಪ್ಪನ ಬಳಿ ಇದ್ದದ್ದು ಭಾರತೀಯ ಪಾಸ್ಪೋರ್ಟ್. ಆತ ಭಾರತದ ಹೈದರಾಬಾದ್ ಮೂಲದವರು. ಈ ಮಾಹಿತಿಯಿಂದ ಆಸ್ಟ್ರೇಲಿಯಾ-ಭಾರತ ದೇಶಗಳ ಮಧ್ಯೆ ಹೊಸ ಮಾತುಕತೆ ಉಂಟಾಗಬಹುದೆ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

