ಕುಣಿಯಬೇಕಿದ್ದ ಕಾಲುಗಳ ಕಟ್ಟಿ…: ಜುಲೇಖಾ ಬೇಗಂ ಜೀವನ ವೃತ್ತಾಂತ
ಸರಿ, ಮಳೆ ನಿಂತು ಮನೆ ತಲುಪುವ ಹೊತ್ತಿಗೆ ರಾತ್ರಿ ಎಂಟರ ಹೊತ್ತು. ದೊಡ್ಡ ರಾದ್ಧಾಂತವೇ ಆಗಿತ್ತು. ‘ಯಾಕಿಷ್ಟು ತಡವಾಯ್ತು?’ ಪ್ರಶ್ನೆ ಗಡುಸಾಗಿಯೇ ಕೇಳಿಸಿತು. ಏನು ಉತ್ತರಿಸಬೇಕೆಂದು ತೋರದೆ, ಬೇಬಿಯಕ್ಕನೊಂದಿಗೆ ಪಿಚ್ಚರ್ ನೋಡುವುದಕ್ಕೆ ಹೋಗಿದ್ದೆ ಎಂದುಬಿಟ್ಟೆ. ನಂತರ ಕೇಳಿದ್ದು, ಕೆನ್ನೆಯ ಮೇಲೆ ಬಿದ್ದ ಛಟಾರ್ ಎಂಬ ಏಟಿನ ದನಿಯಷ್ಟೇ! ‘ಹೇಳದೆ ಕೇಳದೆ ಇನ್ನೆಲ್ಲಿಯೂ ಹೋಗಕೂಡದು. ಡಾನ್ಸ್ ಕ್ಲಾಸ್ ಸೇರಿಸಿಯೇ ತಪ್ಪು ಮಾಡಿದೆ’ ಎಂದು ಹೇಳಿದ್ದರೆ ಅತ್ತು ಸುಮ್ಮನಾಗುತ್ತಿದ್ದೆ. ಆದರೆ ನುಡಿದಂತೆ ನಡೆದೇಬಿಟ್ಟರು!
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹದಿನಾರನೆಯ ಕಂತು


