Advertisement

Tag: ಅಂಕಣ

 ಕನ್ನಡ ಕಲಿಕೆಯ ಮೂರು ಪ್ರಸಂಗಗಳು: ಎಲ್.ಜಿ.ಮೀರಾ ಅಂಕಣ

ನಾನು ಈ ಹುಡುಗಿಗೆ “ನಿನ್ನ ಗುರುತಿನ ಚೀಟಿ ಕೊಡಮ್ಮ” ಅಂದೆ. ಅವಳು ಗಾಬರಿಯಿಂದ “ಅದು ಇಲ್ಲ ಮ್ಯಾಮ್” ಅಂದಳು. ಪಾಪ, ಅದು ಅವಳ ಕುತ್ತಿಗೆಯಲ್ಲೇ ತೂಗುತ್ತಿತ್ತು. ಈ ಘಟನೆಯು ಘಟಿಸುತ್ತಿದ್ದಾಗ ನಮ್ಮ ಕೋಣೆಯಲ್ಲೇ ಕುಳಿತಿದ್ದ ಇಂಗ್ಲಿಷ್ ಅಧ್ಯಾಪಕಿಯೊಬ್ಬರು ಮುಗುಳ್ನಗುತ್ತಾ “ಅದು ನಿನ್ನ ಮೈಮೇಲೇ ಇದೆಯಲ್ಲಮ್ಮ” ಅಂದರು. ಆದರೂ ಆ ಹುಡುಗಿಗೆ ಗುರುತಿನ ಚೀಟಿ ಅಂದರೆ ಏನೆಂದು ಗೊತ್ತಾಗಲಿಲ್ಲ. ಏನು ಒತ್ತಡ ಇತ್ತೋ ಏನೋ ಪಾಪ ಅವಳಿಗೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತನೆಯ ಬರಹ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

ನಮ್ಮ ಪುರಾಣಗಳನ್ನು ಕೆದಕುತ್ತಾ ಹೋದರೆ ಇಂತಹ ಬಹಳಷ್ಟು ಮಾದರಿಗಳು ಸಿಗಬಹುದು. ಪ್ರತಿಯೊಬ್ಬರ ಪರಿಸ್ಥಿತಿಗಳು ಪ್ರತಿಯೊಬ್ಬರ ಋಣದ ಬೇರುಗಳು ಭಿನ್ನವಾಗಿರಬಹುದು. ಆದರೆ ಧರ್ಮಸಂಕಟದ ಆ ಉತ್ಕಟ ಕ್ಷಣಗಳಲ್ಲಿ ಅವರು ತೆಗೆದುಕೊಂಡ ನಿರ್ಧಾರಗಳು ಖಂಡಿತವಾಗಿಯೂ ನಮ್ಮ ಬದುಕಿನ ಸಮಸ್ಯೆಗಳಿಗೂ ಒಂದು ದಾರಿಯನ್ನು ತೋರಿಸಬಹುದು. ಬದುಕಿನ ಅನಾಮಿಕ ತಿರುವಿನಲ್ಲಿ ಎದುರಾಗುವ ದ್ವಂದ್ವಗಳಲ್ಲಿ ಇಲ್ಲಿದ್ದು ಇಲ್ಲಿಲ್ಲ; ಅಲ್ಲಿದ್ದು ಅಲ್ಲಿಲ್ಲ ಅನ್ನುವಂತಾಗಿ ಇದು ಅಥವಾ ಅದು ಅನ್ನುವ ಆಯ್ಕೆ ಮಾಡಲೇಬೇಕಾದ ಪರಿಸ್ಥಿಗಳಲ್ಲಿ ನಮ್ಮ ಮುಂದೆ ಇವರು ಕೊಟ್ಟು ಹೋದ ಮಾದರಿಗಳಿವೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ