Advertisement

Tag: ಅಂಕಣ

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು

ನನಗೆ ನನ್ನ ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲವುಂಟಾಗಿ ನನ್ನ ಅಂಗೈಯನ್ನು ಅವನ ಮುಂದೆ ಮಾಡಿದೆ. ಆ ಭವಿಷ್ಯಗಾರ ಇಡಿ ನನ್ನ ಅಂಗೈ ಜಾಲಾಡಿ ‘ನಿನ್ನ ವಿದ್ಯಾಭ್ಯಾಸ ಇಲ್ಲಿಗೆ ಕೊನೆ ಆಗತೈತಿ. ಇನ್ ಮುಂದಾ ಓದಾಕ ಹೋಗಬ್ಯಾಡ. ಓದಿದ್ರೂ ತಲಿಗೆ ಹತ್ತಾಂಗಿಲ್ಲ. ಈ ಲಾರಿನ ನಿನಗ ಗತಿ ಆಗ್ತೇತಿ’ ಅಂತ ಹೇಳಿ ಇಳಿದು ಹೋಗಿಬಿಟ್ಟ. ಅಂಗೈ ಮೇಲಿನ ಭವಿಷ್ಯ ನಿಜಾನೋ ಸುಳ್ಳೋ ಒಂದು ತಿಳಿಯದ ವಯಸ್ಸದು. ಯಾರಾದ್ರೂ ಏನಾದ್ರೂ ಹೇಳಿಬಿಟ್ಟರೆ ನಂಬಿಬಿಡುವ ಮುಗ್ಧತೆಯೋ ದಡ್ಡತನವೋ ಆಗ ನನ್ನಲ್ಲಿತ್ತು. ಇಸ್ಮಾಯಿಲ್‌ ತಳಕಲ್‌ ಅಂಕಣ

Read More

ಇಂಟರ್‌ನೆಟ್‌ ಸೃಷ್ಟಿಸುತ್ತಿರುವ ಆಧುನಿಕ ಪುರಾಣಗಳು

ಭೂಲೋಕದಲ್ಲಿರುವ ಬೆರಗು ಹುಟ್ಟಿಸುವ ಎಲ್ಲ ಕೆಲಸಗಳನ್ನು ಅನ್ಯಲೋಕದ ಜೀವಿಗಳು ಬಂದು ಮಾಡಿದ್ದಾರೆ ಅಂತ ಎಲ್ಲವನ್ನೂ ಏಲಿಯನ್‌ ಟೆಕ್ನಾಲಜಿಗೆ ಒಪ್ಪಿಸುವ ಅಸಂಬದ್ಧತೆ ಈಗ ಎಲ್ಲಾ ಕಡೆಗಳಲ್ಲಿ ಢಾಳಾಗಿ ಕಾಣಿಸುತ್ತಿದೆ. ಅದು ಎಷ್ಟರ ಮಟ್ಟಿಗೆ ಜನರನ್ನು ನಂಬಿಸಿದೆ ಅಂದರೆ ಇತ್ತೀಚೆಗೆ ಒಬ್ಬರು ನನ್ನೊಂದಿಗೆ ಯಾರಾದರೂ ಮನುಷ್ಯರು ಅಷ್ಟು ಚೆನ್ನಾಗಿ ಕೆತ್ತಲು ಸಾಧ್ಯವೇ ಇಲ್ಲ ಅಂತ ವಾದಿಸುತ್ತಿದ್ದರು. ಅವರಿಗೆ ಈಗಲೂ ಕೆತ್ತನೆ ಮಾಡುವ ಸ್ಥಪತಿಗಳಿರುವುದು ತಿಳಿದಂತಿಲ್ಲ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..

ಭೂಮಿಯ ಗರ್ಭಕ್ಕಿಳಿದ ಬೀಜಗಳು ಮೊಳಕೆಯೊಡೆದು ಸಸಿಯಾಗಿ, ಹೂಬಿಟ್ಟು ನೂರಾರು ಕಾಯಿಗಳಾಗಿ, ಹಣ್ಣಾಗಿ, ತೆನೆಗಳಾಗಿ ಹಸಿದ ಹೊಟ್ಟೆಗಳನ್ನು ತಣಿಸುವುದು ಇದೆಯಲ್ಲ, ಇದಕ್ಕಿಂತ ಸೃಜನಾತ್ಮಕವಾದದ್ದು ಪ್ರಪಂಚದಲ್ಲಿ ಬೇರೆ ಯಾವುದೂ ನನ್ನ ಕಣ್ಣಿಗೆ ಕಾಣುವುದಿಲ್ಲ. ಈ ಮಣ್ಣಿನ ಅಂತಃಕರಣವಾದರೂ ಎಂತಹದ್ದು?
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ