Advertisement

Tag: ಅಂಕಣ

ಒಂದು ಸುಳ್ಳು ಒಂದು ಸತ್ಯ: ಆಶಾ ಜಗದೀಶ್ ಅಂಕಣ

ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ

Read More

ಅವನ ಸಂಗೀತದ ಸರಪಳಿಯಲ್ಲಿ…: ಆಶಾ ಜಗದೀಶ್ ಅಂಕಣ

ಒಂದು ತಾನ್ ನಿಂದ ಮತ್ತೊಂದಕ್ಕೆ ಸಂಚರಿಸುವಾಗ ಒಂದು ಸೆಕೆಂಡ್ ಮಾತ್ರದಲ್ಲಿ ನಿನ್ನ ಧ್ವನಿ ಹೊರಳುತ್ತದಲ್ಲ ಆ ನಾದ ಅದೆಷ್ಟು ಚಂದ… ಅದಕ್ಕೆ ಮುಲಾಮಿನ ಗುಣವಿದೆ. ಕ್ಷಣ ಮಾತ್ರದಲ್ಲಿ ಭಾರವಾದ ಎದೆಯನ್ನು ಹಾರಿ ನಲಿಯುವಂತೆ ಮಾಡಿಬಿಡಬಲ್ಲ ಶಕ್ತಿಯಿದೆ ಅಂತಲೇ ನನಗೆ ಬಲವಾಗಿ ಅನಿಸುತ್ತದೆ. ಆ ಕ್ಷಣ ನಾನು ಯಾರು ಎನ್ನುವುದು ನನಗೆ ಮರೆತು ಹೋಗುತ್ತದೆ. ಯಾವ ವಿಳಾಸ, ನಾಮಧೇಯವಿರದ ಶಕ್ತಿಯ ಸಣ್ಣದೊಂದು ಚೂರಿನಂತೆ ಹೊಳೆಯುತ್ತಿದ್ದೇನೆ ಎಂದು ಭಾಸವಾಗುತ್ತದೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಕ್ಲಾಸು ಮಾತ್ರ ಮೂರು; ಕಲಿತ ಪಾಠ ನೂರಾರು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಭಾನುವಾರದಂದು ಹಸಿರು ಜೀರುಂಡೆಯನ್ನು ಒಂದು ಬೆಂಕಿಪೊಟ್ಟಣದಲ್ಲಿ ಇಟ್ಟುಕೊಂಡು ಅದಕ್ಕೆ ಚೆಂಡು ಹೂವಿನ ಎಲೆಗಳನ್ನು ತಿನ್ನಲು ಇಟ್ಟು ಆಗಾಗ್ಗೆ ಅದು ಎಷ್ಟು ತಿಂದಿತು ಎಂದು ನೋಡುತ್ತಿದ್ದೆ. ನಾನು ಅದನ್ನು ಸಾಕುತ್ತಿದ್ದೇನೆ. ಇಲ್ಲ ಅಂದ್ರೆ ಅದು ಬದುಕಲು ಕಷ್ಟ ಇತ್ತು ಎಂಬ ಭಾವದಿಂದ ಅದನ್ನು ಇಟ್ಟುಕೊಂಡಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ