Advertisement

Tag: ಅಂಕಣ

ಕ್ರಿಕೆಟ್ ಮೈದಾನಗಳು ಮತ್ತು ಕಾಮೆಂಟೇಟರ್ಸ್‌

ಭಾರತದಲ್ಲಿ ಮುಂಚೆ ಟೆಸ್ಟ್ ಮ್ಯಾಚುಗಳು ಆಡುವುದಕ್ಕೆ ಇದ್ದ ಮೈದಾನಗಳು ಕೇವಲ 5. ದೆಹಲಿ, ಮುಂಬೈ, ಕಲ್ಕತ್ತಾ, ಕಾನ್ಪುರ ಮತ್ತು ಮದ್ರಾಸ್ ನಗರಗಳಲ್ಲಿ. ದೆಹಲಿಯ ಫಿರೋಜ್ ಕೋಟ್ಲ, ಮುಂಬೈಯ ಬ್ರೇಬರ್ನ್‌ ಸ್ಟೇಡಿಯಂ, ಕಲ್ಕೊತಾದ ಈಡನ್ ಗಾರ್ಡನ್ಸ್, ಕಾನ್ಪುರದ ಗ್ರೀನ್ ಪಾರ್ಕ್‌, ಮತ್ತು ಚೆನ್ನೈನ ಚೆಪಾಕ್ ಸ್ಟೇಡಿಯಂ. ಆಮೇಲೆ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಹೈದರಾಬಾದಿನ ಲಾಲ್ ಬಹದ್ದೂರ್ ಸ್ಟೇಡಿಯಂ ಇತ್ಯಾದಿ ಬಂದವು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಕುಂಭಮೇಳದ ನೆನಪುಗಳು….

ನನಗೆ ತಣ್ಣಗಿನ ನೀರೆಂದರೆ ನಡುಕ. ಹಾಗಾಗಿ ನೀರಿನಲ್ಲಿ ಮುಳುಗಲು ಹಿಂದು ಮುಂದು ನೋಡುತ್ತಿದ್ದೆ. ಹಾಗೇ ನೋಡಿ ವಾಪಸ್‌ ಬರುವುದು ಅಂತ ನನ್ನ ಇರಾದೆ ಇತ್ತು. ನನ್ನ ಸ್ನೇಹಿತೆ ಸಂಗಮದಲ್ಲಿ ಸ್ನಾನ ಮಾಡುವೆ ಎಂದಾಗ ಅವರ ಜೊತೆ ಹೋದೆ. ಒಂದು ದೋಣಿ ನದಿಯ ಸಂಗಮದ ಜಾಗಕ್ಕೆ ಕರೆದುಕೊಂಡು ಹೋಯಿತು. ಅಲ್ಲಿ ಬಟ್ಟೆ ಬದಲಿಸಲು ಒಂದು ತಡಿಕೆಯನ್ನು ಮಾಡಿದ್ದರು ದೋಣಿಯ ಮೇಲೆಯೇ. ನಾನೂ ನೀರಿನಲ್ಲಿ ಇಳಿದು ಮುಳುಗು ಹಾಕಿ ಬರುತ್ತೀನಿ ಅಂದುಕೊಂಡರೂ ಯಾಕೋ ಆಗುತ್ತಲೇ ಇರಲಿಲ್ಲ.
‘ದೇವಸನ್ನಿಧಿ’ ಅಂಕಣದಲ್ಲಿ ಕುಂಭಮೇಳಕ್ಕೆ ಭೇಟಿ ನೀಡಿದ ಅನುಭವದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು

ನನಗೆ ನನ್ನ ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲವುಂಟಾಗಿ ನನ್ನ ಅಂಗೈಯನ್ನು ಅವನ ಮುಂದೆ ಮಾಡಿದೆ. ಆ ಭವಿಷ್ಯಗಾರ ಇಡಿ ನನ್ನ ಅಂಗೈ ಜಾಲಾಡಿ ‘ನಿನ್ನ ವಿದ್ಯಾಭ್ಯಾಸ ಇಲ್ಲಿಗೆ ಕೊನೆ ಆಗತೈತಿ. ಇನ್ ಮುಂದಾ ಓದಾಕ ಹೋಗಬ್ಯಾಡ. ಓದಿದ್ರೂ ತಲಿಗೆ ಹತ್ತಾಂಗಿಲ್ಲ. ಈ ಲಾರಿನ ನಿನಗ ಗತಿ ಆಗ್ತೇತಿ’ ಅಂತ ಹೇಳಿ ಇಳಿದು ಹೋಗಿಬಿಟ್ಟ. ಅಂಗೈ ಮೇಲಿನ ಭವಿಷ್ಯ ನಿಜಾನೋ ಸುಳ್ಳೋ ಒಂದು ತಿಳಿಯದ ವಯಸ್ಸದು. ಯಾರಾದ್ರೂ ಏನಾದ್ರೂ ಹೇಳಿಬಿಟ್ಟರೆ ನಂಬಿಬಿಡುವ ಮುಗ್ಧತೆಯೋ ದಡ್ಡತನವೋ ಆಗ ನನ್ನಲ್ಲಿತ್ತು. ಇಸ್ಮಾಯಿಲ್‌ ತಳಕಲ್‌ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ