Advertisement

Tag: ಅಂಜಲಿ ರಾಮಣ್ಣ

ಮಹಿಳಾ ಯುದ್ಧಸ್ಮಾರಕಗಳ ಹುಡುಕುತ್ತಾ ಕಂಡ ಸತ್ಯಗಳು

ಯುದ್ಧಗಳೇಕೆ ನಡೆಯುತ್ತವೆ ಎಂದು ಯೋಚಿಸುತ್ತಾ, ಸ್ಕಾಟ್‍ ಲ್ಯಾಂಡ್‍ನಲ್ಲಿ  ಯಾಂತ್ರಿಕವಾಗಿ ಆ ವಸ್ತು ಸಂಗ್ರಹಾಲಯವನ್ನು ನೋಡುತ್ತಿದ್ದಾಗ ‘ಹಾಲ್ ಆಫ್ ಆನರ್’ ಎನ್ನುವ ಇಪ್ಪತ್ತು ಅಡಿ ಉದ್ದ ಅಗಲವಿದ್ದ ಕೋಣೆಯಲ್ಲಿ ಕೆಂಪು ಬಣ್ನದ ಲೆದರ್ ಬೈಂಡಿಂಗ್ ಹೊಂದಿದ್ದ ವಿಪರೀತ ದಪ್ಪವಾದ ಒಂದು ಪುಸ್ತಕ ಕಂಡಿತು. ಅದರ ಹಿಂದೆಯೇ ಅದಕ್ಕೇ ಆತುಕೊಂಡಿದ್ದಂತೆ ನಿಂತಿದ್ದ ಗಾಜಿನ ಗೋಡೆ ಕಣ್ಣಿಗೆ ಬಿತ್ತು. ಹತ್ತಿರ ಹೋಗಿ ನೋಡಿದರೆ ಅದರಲ್ಲಿದ್ದ ಅಕ್ಷರಗಳನ್ನು ಓದಿ ಒಂದು ಕ್ಷಣ ದಂಗುಬಿಡಿದೆ.

Read More

ಶಿವನೆನ್ನಿ…. ಶಂಕರನೆನ್ನಿ.. ಎಲ್ಲವೂ ಅವನೇ!

ಶಿವ ಪಾರ್ವತಿಯರು ಸಪ್ತಪದಿ ತುಳಿದುದರ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಅದೇ ಅಗ್ನಿಯನ್ನು ಅಂದಿನಿಂದ ಈ ಘಳಿಗೆಯವರೆಗೂ ಆರದಂತೆ ಕಾಯುತ್ತಿರುವ ಭಕ್ತರ ನಂಬಿಕೆ ಮತ್ತು ಕೈಂಕರ್ಯಗಳು ಹಾಗು ಅಲ್ಲಿ ಆವರಿಸಿಕೊಂಡಿದ್ದ ಮುಡಿವಾಳದ ಘಮ. ಅಲ್ಲಿಂದ ಮುಖ ಮಾಡಿದ್ದೆ ಕೇದಾರನಾಥನ ತಪ್ಪಲಿಗೆ. ಕಪರ್ದಿಯ ದರ್ಶನಕ್ಕೆ ಮೊದಲು ಭಕ್ತರನ್ನು ಮೀಯಿಸಿ ಶುಚಿಗೊಳಿಸುವ ಬಿಸಿನೀರಿನ ಬುಗ್ಗೆಯ ಗೌರಿಕುಂಡ ಈ ತಪ್ಪಲಿಗೆ ಆತುಕೊಂಡಿದೆ. ರಸ್ತೆ ಯಾನ ಕೊನೆಯಾಗುವುದು ಇಲ್ಲೇ.

Read More

ಒಬರಮೆರ್ಗಾವ್ ನಗರದಲ್ಲಿ ‘ಸಾತ್ವಿಕತೆ’ಯ ವ್ಯಾಖ್ಯಾನ

ಮೇರಿ ಮಾತೆಯ ಪಾತ್ರದಲ್ಲಿ ನಟಿಸಲು ಆಯ್ಕೆಯಾಗ ಬೇಕಾದರೆ ಆಕೆ ಕನ್ಯೆಯಾಗಿರಬೇಕು. ಗಂಡುಗಳ ಸ್ನೇಹ ಬೆಳೆಸದೆ, ಹೆಚ್ಚಿನ ಗೆಳತಿಯರೊಡನೆ ಸೇರದೆ, ನಾಟಕ ಸಿನೆಮಾಗಳನ್ನು ನೋಡದೆ, ಉಪ್ಪು ರಹಿತ ಊಟ ಮಾಡುತ್ತಾ, ಸದಾ ಕಾಲವೂ ಆಧ್ಯಾತ್ಮಿಕವಾಗಿ ಜೀವನ ನಡೆಸುತ್ತಾ, ಬೈಬಲ್ ಓದುತ್ತಾ, ರಸ್ತೆಗಳಲ್ಲಿ ನಡೆಯುವಾಗ ತಲೆಯೆತ್ತದೆ ಸಾತ್ವಿಕವಾಗಿ 10 ವರ್ಷಗಳನ್ನು ಕಳೆದರೆ ಆಕೆ ಆಯ್ಕೆ ಪ್ರಕ್ರಿಯೆಯ ಸರದಿಗೆ ಬರಲು ಅರ್ಹಳಾಗುತ್ತಾಳೆ.

Read More

ಬಾಬ್ಬಿ ಎಂಬ ಪ್ರೇಮದ ಕುರುಹನ್ನು ಹುಡುಕಿಕೊಂಡು…

ತಲೆಯೊಳಗೆ ಬಲ್ಬಿನ ಥಕಪಕ ಕುಣಿತ. ‘ಅರೆ, ಇವನು ಅವನೇ ಅಲ್ವಾ? ಎಲ್ಲಿದ್ದಾನೆ? ನಾನು ಯಾಕೆ ಅವನನ್ನು ನೋಡದೆಯೇ, ಭೇಟಿ ಮಾಡದೆ ವಾಪಸ್ಸು ಬಂದುಬಿಟ್ಟೆ? ಛೆ ಛೆ, ಅವನೂರಿಗೆ ಬಂದು ಅವನನ್ನು ಮುದ್ದು ಮಾಡದೆ, ಅಪ್ಪಿಕೊಳ್ಳದೆ… ಓಹ್…’ ಸ್ವಾಗತ ಕೊಠಡಿಗೆ ಕರೆ ಮಾಡಿದೆ. ಅವನ ವಿಳಾಸ ಸಿಕ್ಕಿತು. ಅಯ್ಯೋ, ಅವನನ್ನು ನೋಡದೆಯೇ ಆ ರಾತ್ರಿ ಕಳೆಯಬೇಕಿತ್ತು. ಸೂರ್ಯ ಕರೆಗಂಟೆ ಒತ್ತಿದ್ದೆ ತಡ, ಗಡಿಬಿಡಿಸಿಕೊಂಡು ಬೆಚ್ಚನೆಯ ಬಟ್ಟೆ ತೊಟ್ಟು ಅವನಲ್ಲಿಗೆ ಓಡತೊಡಗಿದೆ.
‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಬಾಬ್ಬಿ…

Read More

ನೂರು ಕಲ್ಲುಗಳಲ್ಲಿ ಒಂದು ಮುತ್ತು ಹುಡುಕುವ ಬಿರ್ಜು ಮಹಾರಾಜ್

ಸಿನೆಮಾ ರಂಗಕ್ಕೆ ಹೋಗಬೇಡ ಎಂದ ತಾಯಿಯ ಮಾತನ್ನು ಪಕ್ಕಕ್ಕಿಟ್ಟು ಮುಂಬೈಗೆ ಬಂದಾಗ ಜೇಬಿನಲ್ಲಿ ಕಿರುಗಾಸು ಇಲ್ಲದ ಬಿರ್ಜು ಮಹಾರಾಜ್ ಮಾಧುರಿ ದೀಕ್ಷಿತ್ ರಿಂದ ಹಿಡಿದು  ದೀಪಿಕಾಳವರೆಗೂ ನೂರಕ್ಕೂ ಹೆಚ್ಚು ಸಿನೆಮಾಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಆದರೂ ಪ್ರೀತಿ ಮಾಡುವುದು ಮಾತ್ರ ಕಮಲಹಾಸನ್‌ನನ್ನು. ವಿಶ್ವರೂಪಂ ಸಿನೆಮಾ ಸಮಯದಲ್ಲಿ ‘ಆತ ತರಬೇತಿ ಸಮಯದಲ್ಲಿ ನೃತ್ಯ ಮಾಡುತ್ತಿದ್ದನ್ನು ನೋಡಿ ಎಷ್ಟೋ ಬಾರಿ ನಾನೇ ನರ್ತಿಸುತ್ತಿದ್ದೇನೆ ಎನ್ನಿಸಿಬಿಡುತ್ತಿತ್ತು’ ಎನ್ನುವಾಗ ಬಿರ್ಜು ಅವರ ಉಸಿರಿನಲ್ಲಿ ಜೀವ ಆಡಿದಂತೆನಿಸಿತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ