Advertisement

Tag: ಅನುಭವ ಕಥನ

ಚಿಕ್ಕಯನಾಕನಹಳ್ಳಿಯ ತಾತಯ್ಯನ ಗೋರಿ ಮತ್ತದರ ಕುದುರೆ: ಎಸ್. ಗಂಗಾಧರಯ್ಯ ಅನುಭವ ಕಥನ

ನಮ್ಮ ಇಂಥ ದೈನೇಸಿ ಸ್ಥಿತಿಯ ಅರಿವಾಯಿತು ಎಂಬಂತೆ ಹುಚ್ಚೆದ್ದು ಓಡುತ್ತಿದ್ದ ಕುದುರೆ ಓಟದ ಬಿರುವನ್ನು ಕೊಂಚ ಕುಗ್ಗಿಸಿಕೊಂಡು ಎತ್ತಿ ಕುಕ್ಕಿದಂತೆ ಒಮ್ಮೆಗೇ ಕೆನೆದು ಮತ್ತೆ ಮಾಮೂಲಿ ಓಟಕ್ಕಿಟ್ಟುಕೊಂಡಿತು. ಇದನ್ನು ನಿರೀಕ್ಷಿಸದಿದ್ದ ಹಿಂದೆ ಕುಳಿತಿದ್ದ ನಾನು ಹೇಳದೇ ಕೇಳದೇ ಅಂತಾರಲ್ಲ ಹಂಗೆ ದೊಪ್ಪನೆ ಕೆಳಗೆ ಬಿದ್ದುಬಿಟ್ಟೆ. ಬಿದ್ದ ರಭಸಕ್ಕೆ ಕುಂಡಿಗಳನ್ನು ಗುಂಡು ಕಲ್ಲೊಂದರಿಂದ ಜಜ್ಜಿದಂತಾಯ್ತು. ತಕ್ಷಣ ಏನು ಮಾಡಬೇಕೆಂದು ತೋಚದೆ ಕೂತಲ್ಲೇ ಬಿಕ್ಕಳಿಸತೊಡಗಿದೆ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಹನ್ನೊಂದನೆಯ ಕಂತು

Read More

ಮಾಕಳ್ಳಿಯ ಮಾಂತ್ರಿಕ ಕಥಿಕರು: ಎಸ್. ಗಂಗಾಧರಯ್ಯ ಅನುಭವ ಕಥನ

ಮುಂದೆ ಬುಡುಗೊಚ್ಚ ತಮಗೆ ಬೇಕಾದಾಗಲೆಲ್ಲಾ ಎಡಬಿಡದೆ ಹಾಗೇ ಮಾಡಿದರಂತೆ. ಅದರಂತೆ ಸಾವಿರಾರು ಬೆಳ್ಳಿ ರೂಪಾಯಿಗಳನ್ನು ಮಾಡಿಕೊಂಡರಂತೆ. ಒಂದು ದಿನ ಹೀಗೆ ಅಜ್ಜ ಹತ್ತಾರು ಹೂಗಳನ್ನು ಒಟ್ಟಿಗೇ ಬೊಗಸೆಯಲ್ಲಿ ಹಿಡಿದುಕೊಂಡು ಬೆಳ್ಳಿ ರೂಪಾಯಿಗಳನ್ನು ಮಾಡಿಕೊಳ್ಳುತ್ತಿರಬೇಕಾದರೆ, ಆ ಹೂಗಳು `ಇನ್ನು ನಿನ್ನ ಹಿತ್ತಲಿನಲ್ಲಿ ನಮ್ಮ ಸರದಿ ಮುಗಿಯಿತು, ನಾವಿನ್ನು ಹೊರಡುತ್ತೇವೆ,’ ಅಂದವಂತೆ. ಅಜ್ಜನಿಗೆ ವಿಪರೀತ ದುಃಖವಾಗಿ ಪರಿ ಪರಿಯಾಗಿ ಬೇಡಿಕೊಂಡರಂತೆ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಹತ್ತನೆಯ ಕಂತು

Read More

ಹೀನ ಸುಳಿ ಹೋರಿಕರ ಮತ್ತು ಸಾಟಿಬುಗುರಿಯವರು: ಎಸ್. ಗಂಗಾಧರಯ್ಯ ಅನುಭವ ಕಥನ

ಅವತ್ತು ಹೊಲದಲ್ಲಿ ಆ ಪುಣ್ಯಾತ್ಮ ಕರುವಿನ ಮೈಲ್ಲಿ ಹೀನಸುಳಿಯನ್ನು ಪತ್ತೆ ಹಚ್ಚಿದ ಲಾಗಾಯ್ತಿನಿಂದ ಅದನ್ನು ಮಾರಾಟ ಮಾಡುವುದು ಕಷ್ಟವಂತೂ ಆಯ್ತು. ನೋಡಲು ಬಂದವರು `ಹೇಳಂಗಿದ್ರೆ ಈ ಕರ ಐತಲ್ಲ ಇದ್ರ ಯಾಪಾರ ಹೇಳಿ’ ಅಂತ ಇನ್ನೊಂದು ಕರುವನ್ನು ತೋರಿಸುತ್ತಿದ್ದರು. ಯಾರೋ ಅಪರೂಪಕ್ಕೊಬ್ಬ `ಹಣೇಲಿ ಬರ್ದದ್ದು ಆಗ್ಲಿ ತಗಂತೀನಿ. ನೋಡಿ ಸರ್ಯಾಗಿ ಗಿಟ್ಟಂಗೆ ಹೇಳು ಮತ್ತೆ ಯಾಪಾರಾನಾ’ಅಂತ ಆರಕ್ಕೆ ಮೂರರಂಗೆ ಬೇಕಾಬಿಟ್ಟಿ ಕೇಳುತ್ತಾ ರೋಸುತ್ತಿದ್ದರು. ಹಿಂಗೆ ಹೋರಿಗೆ ಹೀನಸುಳಿಯ ಇದೆ ಅಂತ ತಿಳಿಯುತ್ತಲೇ ಯಂಗಾರಾ ಮಾಡಿ ಸಸ್ತಕ್ಕೆ ಅಮಿಕ್ಕಂಡು ಬಿಡಬಹುದು ಅಂತ ಸುಮಾರು ಜನ ಸಾಟಿ ಬುಗುರಿಯವರು ಬಂದು ಬಂದು ನೋಡಿಕೊಂಡು ಹೋಗುತ್ತಿದ್ದರು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More

ಕಣಗಾಲ ಮತ್ತು ಕಳ್ಳರು: ಎಸ್. ಗಂಗಾಧರಯ್ಯ ಅನುಭವ ಕಥನ

ಮೂರ್ತಿ ಚಕ್ಕನೆ ಎದ್ದವನೇ ನನ್ನನ್ನು `ಲೇ ಆ ಕಡಿಂದ ಓಡಿ ಬಾರೋ’ ಅಂತ ನನಗೆ ಕೂಗಿ ಹೇಳುತ್ತಾ ಕಳ್ಳನ ಹಿಂದೆ ಬಿದ್ದ. ನಾನು ಕೂತಲ್ಲಿಂದ ಬೇಗನೇ ಮೇಲೆದ್ದರೂ ಇದು ನಾನು ನೋಡಿದ್ದ ಮೊದಲ ಕಳ್ಳ ಹಾಗೂ ಕಳ್ಳತನವಾದ್ದರಿಂದ ಒಂಚೂರು ಗಲಿಬಿಲಿಗೊಂಡು ಅವರತ್ತ ತಕ್ಷಣ ಓಡಲಾಗಲಿಲ್ಲ. ಅವರಿಬ್ಬರೂ ಆಗಲೇ ನಮ್ಮ ಹೊಲವನ್ನು ದಾಟಿದ್ದರು. ಪಕ್ಕದ ಹೊಲದಲ್ಲಿ ಮೂರ್ತಿಯ ಕೂಗು ಕೇಳಿಸುತ್ತಿತ್ತು. ನಾನು ಉಸುರುಯ್ದುಕೊಂಡು ನಮ್ಮ ಹೊಲದ ಬದಿಗೆ ಬರುವಷ್ಟರಲ್ಲಿ ಮೂರ್ತಿ ಹಿಂದಿರುಗಿ ಬರುತ್ತಿದ್ದ. `
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎಂಟನೆಯ ಕಂತು

Read More

ಮಿಂಚುಳಗಳು ಮತ್ತು ಕಲ್ಬಾವಿ: ಎಸ್. ಗಂಗಾಧರಯ್ಯ ಅನುಭವ ಕಥನ

ಇವರು ಯಾರೊಬ್ಬರನ್ನು ಬೈದದ್ದಾಗಲಿ, ಯಾರ ಮೇಲೆ ಆಗಲಿ ಸಿಟ್ಟು ಮಾಡಿಕೊಂಡಿದ್ದನ್ನಾಗಲಿ ನಾನು ಯಾವತ್ತೂ ಕಂಡಿರಲಿಲ್ಲ. ಚಂದದ ನಗು ಹಾಗೂ ಮೌನ ಇವರ ಬಲು ದೊಡ್ಡ ಶಕ್ತಿಗಳಾಗಿದ್ದವು. ಇನ್ನೊಬ್ಬರಿಗೆ ಭಾರವಾಗದಂತೆ ಬದುಕಬೇಕು ಅಂತ ಯಾವಾಗಲೂ ಹೇಳುತ್ತಿದ್ದ ಗೋವಿಂದಪ್ಪ ತನ್ನ ಕೈಲಾದ ಕೆಲಸವನ್ನು ಮಾಡುತ್ತಿದ್ದರು. ಅಂತೆಯೇ ಯಾರಾದರೂ ಯಾವುದಾದರೂ ಕೆಲಸವನ್ನು ಹೇಳಿದರೆ ಒಂಚೂರೂ ಬೇಸರವಿಲ್ಲದೆ ಪಾಲಿಸುತ್ತಿದ್ದರು. ಒಂಥರಾ ನಿರುಮ್ಮಳ ಜೀವಿ. ಆದರೆ ಇಂಥ ಗೋವಿಂದಪ್ಪ ನಿದ್ದೆಗೆ ಜಾರಿದಾಗ ಮಾತ್ರ ಸಹಿಸಲಸಾಧ್ಯದ ವ್ಯಕ್ತಿಯಾಗಿಬಿಡುತ್ತಿದ್ದರು. ಏಕೆಂದರೆ ಇವರು ಹೊಡೆಯುತ್ತಿದ್ದ ಗೊರಕೆಯ ಸದ್ದು ಅವರು ಮಲಗಿದ್ದ ಮನೆಯವರಿಗೆ ಮಾತ್ರವಲ್ಲ ಸುತ್ತಲ ಯಾವ ಜೀವಿಯನ್ನೂ ಬಡಪಟ್ಟಿಗೆ ಬಿಡುತ್ತಿರಲಿಲ್ಲ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ