Advertisement

Tag: ಅನುವಾದಿತ ಕಾವ್ಯ

ಚಿಲೆ ದೇಶದ ಕವಿ ಎಲಿಕುರಾ ಚಿವಾಯ್‌ಲಾಫ಼್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಚಿವಾಯ್‌ಲಾಫ಼್ ಅವರ ಅನೇಕ ಕವಿತೆಗಳು ಆ ಭೂಮಿಯಲ್ಲಿ ರೂಪಕಾತ್ಮಕವಾಗಿ ವಾಸಿಸುವ ತುರ್ತು ಬಯಕೆಗೆ ಸಾಕ್ಷಿಯಾಗಿವೆ. ಅವರ ಬುಡಕಟ್ಟಿನ ಪೂರ್ವಜರ ಮರೆತುಹೋದ ಅಥವಾ ನಿಗ್ರಹಿಸಲ್ಪಟ್ಟ ಉಪಸ್ಥಿತಿಯನ್ನು ಮಾತ್ರವಲ್ಲದೆ, ‘ಮಾಪುಚೆ’ ಸಂಸ್ಕೃತಿಯಲ್ಲಿ ಪವಿತ್ರವೆಂದು ಪರಿಗಣಿಸಲಾದ ಮತ್ತು ಸಾಂಪ್ರದಾಯಿಕ ಮಾಪುಚೆ ಭೂಮಿಯಲ್ಲಿ ಕೈಗಾರಿಕಾ ಯೋಜನೆಗಳಿಂದ ಹೆಚ್ಚಾಗಿ ಬೆದರಿಕೆಗೆ ಒಳಗಾಗುವ ಪ್ರಕೃತಿಯ ಧ್ವನಿಯನ್ನು ಸಹ ಅವರು ಮರಳಿ ಪಡೆಯುವ ಗುರಿಯನ್ನು ಹೊಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಚಿಲೆ (Chile) ದೇಶದ ಮಾಪುಚೆ ಬುಡಕಟ್ಟಿಗೆ ಸೇರಿದ ಮಾಪುಜುಗುನ್‌ (Mapuzugun) ಭಾಷಾ ಕವಿ ಎಲಿಕುರಾ ಚಿವಾಯ್‌ಲಾಫ಼್-ರವರ (Elicura Chihuailaf, 1953) ಕಾವ್ಯದ ಕುರಿತ ಬರಹ

Read More

ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಗ್ಯೋರ್ಗಿ ಗೊಸ್ಪೊಡಿನೊವ್ ಅನೇಕ ವಿಧಗಳಲ್ಲಿ ಒಬ್ಬ ವಿಶಿಷ್ಟ ಬರಹಗಾರ. ನಾನು ಅವರ ಬರಹಗಳನ್ನು ಮೊದಲಿನಿಂದಲೂ ಓದುತ್ತಿದ್ದೇನೆ ಹಾಗೂ ಕುತೂಹಲಕಾರಿ ಪರಿಕಲ್ಪನೆ, ಅದ್ಭುತ ಕಲ್ಪನೆ ಮತ್ತು ನಿಖರವಾದ ಬರವಣಿಗೆಯ ತಂತ್ರವನ್ನು ಅವರ ಹಾಗೆ ಬೇರೆ ಯಾರಿಂದಲೂ ಸಂಯೋಜಿಸಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್-ರವರ(Georgi Gospodinov) ಕಾವ್ಯದ ಕುರಿತ ಬರಹ

Read More

ಎಕೆಲೋಫ಼್ ಎಂಬ “ಸರ್ರಿಯಲಿಸ್ಟ್‌” ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಎಕೆಲೋಫ಼್ ಅವರ ವೃತ್ತಿಜೀವನದ ಪ್ರತಿಯೊಂದು ತಿರುವಿನಲ್ಲೂ ಇದೇ ಕಥೆ ಪುನರಾವರ್ತನೆಯಾಗುತ್ತಿತು. ಮೂವತ್ತರ ದಶಕದ ಉತ್ತರಾರ್ಧದಲ್ಲಿ ಎಕೆಲೋಫ಼್ ಮಾನವ ವ್ಯಕ್ತಿನಿಷ್ಠೆಗೆ ಆಮೂಲಾಗ್ರ ಮತ್ತು ಹೆಚ್ಚು ಅಮೂರ್ತವಾದ ದೃಷ್ಟಿಕೋನದೆಡೆಗೆ ತಮ್ಮ ಕಾವ್ಯಪ್ರಯೋಗ ನಡೆಸುತ್ತಿದ್ದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಗುನ್ನಾರ್ ಎಕೆಲೋಫ಼್-ರವರ (Gunnar Ekelof, 1907-1968) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಕನ್ನಡಿಗೆ ಗೊತ್ತಿಲ್ಲ. ಕಡಲಿಗೆ ಗೊತ್ತು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರು ರಮಣೀಯ ದೃಶ್ಯಗಳನ್ನು ಕಲ್ಪಿಸಿಕೊಳ್ಳುವುದಿಲ್ಲ; ಬದಲಿಗೆ ದಿನನಿತ್ಯದ ವಿದ್ಯಮಾನಗಳ ಜತೆಗೆ ನಗರ ಮತ್ತು ಅದರ ನಿವಾಸಿಗಳ ಜತೆ ಜರಗಿದ ಮಾತುಕತೆಗಳಲ್ಲಿ ಅವರು ಪಡೆದ ಸಂತೋಷಕ್ಕೆ ಒತ್ತು ನೀಡುತ್ತಾರೆ. ಈ ಕವಿತೆಗಳ ವಿಶಿಷ್ಟ ಛಾಪು ಕವಿಯ ಮೌಖಿಕ ವಾಕ್ಚಾತುರ್ಯವೂ ಆಗಿದೆ; ಲಯ ಮತ್ತು ಮನವಿ ಜತೆಯಾಗಿರುವ ಕವಿತೆಗಳಿವು, ಮತ್ತು ಈ ಕವನಗಳು ವೋಲ್ಡ್‌ ಅವರಿಗೆ ವಿಶಾಲವಾದ ಮತ್ತು ನಿಷ್ಠಾವಂತ ಓದುಗರ ಸಮೂಹವನ್ನು ತಂದುಕೊಟ್ಟಿತ್ತು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ನೋರ್ವೇ (Norway) ದೇಶದ ಕವಿ ಯಾನ್ ಎರಿಕ್ ವೊಲ್ಡ್-ರ (Jan Erik Vold) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಪಂಜರದ ಹಕ್ಕಿ ಹಾಡುವುದು ಯಾಕೆ!: ಚೈತ್ರಾ ಶಿವಯೋಗಿಮಠ ಸರಣಿ

ತಾಯಿ ಶ್ರೀಮಂತೆ, ಮೈ ತುಂಬಾ ವಜ್ರದೊಡವೆ, ಬಂಗಲೆ ಕಾರು ಇದ್ದರೂ ಸಹಿತ ಮಾಯಾ ಎಂತಹ ಸ್ವಾಭಿಮಾನಿ ಎಂದರೆ ಅಮ್ಮನಿಂದ ಒಂದು ಪೈಸೆಯನ್ನೂ ತೆಗೆದುಕೊಳ್ಳಲಿಲ್ಲ. ತಿಂಗಳಿಗೊಮ್ಮೆ ಅಮ್ಮನ ಕೈಯಡುಗೆ ಉಂಡು ಅವಳೊಂದಿಗೆ ಒಂದಿಷ್ಟು ಆಪ್ತ ಸಮಯ ಕಳೆಯುವುದನ್ನು ಬಿಟ್ಟರೆ ತಾಯಿಯಿಂದ ಏನನ್ನೂ ಅಪೇಕ್ಷಿಸಲಿಲ್ಲ ಮಾಯಾ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ