Advertisement

Tag: ಅಬ್ದುಲ್ ರಶೀದ್

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”

Read More

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಸೈಕಲ್ಲಿನ ಜೊತೆಗಿದ್ದ ಲೇಡೀಸು ಸೈಕಲ್ಲು!

“ಅಲೆಯುವ ಮನಕ್ಕೆ ಲೋಕದ ಯಾವ ಸದ್ದುಗಳೂ ಕೇಳಿಸುವುದಿಲ್ಲವಂತೆ. ಅಲೆಮಾರಿಗಳು ಲೋಕದ ಗೊಡವೆಗಿಂತ ತಮ್ಮ ತಮ್ಮ ಸ್ವವ್ಯಸನಗಳಲ್ಲೇ ಹೆಚ್ಚು ಮುಳುಗಿರುತ್ತಾರಂತೆ. ಹಾಗಾಗಿ ಅವರು ಆಯಾಸಗೊಳ್ಳದೆ ಚಲಿಸುತ್ತಲೇ ಇರುತ್ತಾರಂತೆ. ಇದು ಹಿಂದೆ ಬದುಕಿದ್ದ ಮಿತ್ರರೂ ಆಗಿದ್ದ ಹಿರಿಯರೊಬ್ಬರು ಹೇಳಿದ್ದ ಮಾತು. ಅವರ ಪ್ರಕಾರ ಅಲೆಮಾರಿಗಳಷ್ಟು ಸ್ವರತಿ ಪ್ರಿಯರು ಬೇರೆ ಯಾರೂ ಇಲ್ಲ. ಹಾಗೆಯೇ ನನ್ನ ಕಥೆಯೂ ಎಂದು ಅನಿಸುತ್ತಿತ್ತು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಏಳನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ