Advertisement

Tag: ಆಶಾ ಜಗದೀಶ್

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

Read More

ಆಶಾ ಜಗದೀಶ್ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ…

ಪ್ರೀತಿ ಮಾತ್ರ ಪೂರ್ಣ ಸತ್ಯ. ಮೋಸ ಎಂಬುದು ಅರ್ಧ ಸತ್ಯ. ನಾವು ಯಾರನ್ನೂ ಮೋಸಗೊಳಿಸಲು ಸಾಧ್ಯವಿಲ್ಲ. ನಮ್ಮಿಂದ ನಾವೇ ಪದೇ ಪದೇ ಮೋಸಹೋಗುತ್ತೇವೆ. ಅದೂ ಹೃದಯವಿದ್ರಾವಕವಾಗಿ. ನಮ್ಮನ್ನು ನಾವೇ ನೋಯಿಸಿಕೊಂಡು ಇತರರನ್ನು ದೂರುತ್ತೇವೆ… ನಿನ್ನನ್ನು ಪ್ರೀತಿಸದಿರಲು ಸಾಧ್ಯವಾಗುವುದಾ…
ಆಶಾ ಜಗದೀಶ್ ಬರೆಯುವ ಬದುಕೆಂಬ ಭಾವಗೀತೆಯ ಕುರಿತ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ ಮಂಗಳವಾರಗಳಂದು ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ವೇಷ ಕಳಚಿ ನಡೆಯಬೇಕು…: ಆಶಾ ಜಗದೀಶ್ ಬರಹ

ನಿಜ ಏನೆಂದರೆ, ನಾವು ಸತ್ಯವನ್ನು ಎದುರಿಸುವ ಶಕ್ತಿಯನ್ನು ಪಡೆಯಬೇಕಿದೆ. ನಾವು ಒಳಗೆ ಹೇಗಿದ್ದೇವೋ ಹೊರಗೂ ಅದೇ ಆಗಿ ತೋರಿಸಿಕೊಳ್ಳುವ ಧಾರ್ಷ್ಟ್ಯವನ್ನು ಬೆಳೆಸಿಕೊಳ್ಳಬೇಕಿದೆ. ಇಲ್ಲವಾದರೆ ವೇಷ ಕಳಚುವುದು ಎಷ್ಟು ಹೊತ್ತಿನ ಕೆಲಸ! ನಾವು ಯಾವುದು ಅಲ್ಲವೋ ಅದಾಗಿ ನಮ್ಮನ್ನು ನಾವು ತೋರಿಸಿಕೊಳ್ಳಲಿಕ್ಕೆ ನಮಗೆ ಹೆಚ್ಚು ಪ್ರಯತ್ನ ಬೇಕಾಗಬಹುದು. ಆದರೆ ನಾವು ನಾವಾಗಿರುವುದಕ್ಕೆ ಅಷ್ಟೊಂದು ಪ್ರಯತ್ನ ಬೇಕಿರುವುದಿಲ್ಲ. ನಾವು ನಾವಾಗಲ್ಲದೆ ನಾವು ಬಯಸಿದ ನಾವಲ್ಲದ ಪಾತ್ರವಾಗಿ ಜಗತ್ತನ್ನು ನಂಬಿಸಲು ಸದಾ ಎಚ್ಚರದಿಂದ ಇರಬೇಕಾಗಿರುತ್ತದೆ.
ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಕಪ್ಪುಹಲಗೆಯ ಮೇಲಿನ ಬಣ್ಣದ ಅಕ್ಷರಗಳು…: ಆಶಾ ಜಗದೀಶ್‌ ಪ್ರಬಂಧ

ಒಮ್ಮೆ ಸೀರಿಯಸ್ಸಾಗಿ ನೋಟ್ಸ್ ಕರೆಕ್ಷನ್ ಮಾಡುತ್ತಾ ಕುಳಿತಿದ್ದೆ. ಆಗ ಇದ್ದಕ್ಕಿದ್ದಂತೆ ಜಗದೀಶ, ಜೋರು ಧ್ವನಿಯಲ್ಲಿ ಟೇಬಲ್ ಬಡಿಯುತ್ತಾ “ಚೆಲ್ಲಿದರೂ ಮಲ್ಲಿಗೆಯಾ… ಬಾಣಾಸೂರೇರೀ ಮ್ಯಾಲೆ…” ಅಂತ ಹಾಡತೊಡಗಿದ. ತಲೆ ಎತ್ತಿ ನೋಡಿದರೆ, ಅವ ಈ ಲೋಕದಲ್ಲಂತು ಇರಲಿಲ್ಲ. ಇದ್ದಕ್ಕಿದ್ದಂತೆ ಅವ ಪೆಚ್ಚಾದ. ಮಕ್ಕಳೆಲ್ಲ ಗೊಳ್ ಎಂದು ನಗತೊಡಗಿದರು. ಬಹುಶಃ ಬೇರೆಯ ಹೊತ್ತಾಗಿದ್ದರೆ ನಾನೂ ಅವನೊಂದಿಗೆ ಸೇರಿ ಯುಗಳ ಗೀತೆ ಹಾಡುತ್ತಿದ್ದೆನೇನೋ.
ಶಾಲಾ ಮಕ್ಕಳ ಜೊತೆಗಿನ ಅನುಭವದ ಕುರಿತು ಆಶಾ ಜಗದೀಶ್‌ ಪ್ರಬಂಧ ನಿಮ್ಮ ಓದಿಗೆ

Read More

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ