Advertisement

Tag: ಆಸ್ಟ್ರೇಲಿಯಾ ಪತ್ರ

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ವಸತಿ ಸಮಸ್ಯೆ, ರಾಜಕೀಯ ಪ್ರಶ್ನೆಗಳ ಕಥೆಗಳು

ಆಸ್ಟ್ರೇಲಿಯಾದಲ್ಲಿ ಕೋವಿಡ್-೧೯ ನಂತರದ ಪರಿಸ್ಥಿತಿ ಸುಧಾರಿಸಿದೆ, ಜನರ ಹರಿದಾಟ ಸುಗಮವಾಗಿದೆ. ಆದರೆ ಧುತ್ತೆಂದು ದೇಶದಾದ್ಯಂತ, ಅದರಲ್ಲೂ ನಮ್ಮ ರಾಣಿರಾಜ್ಯದಲ್ಲಿ ಇನ್ನೂ ನಿಚ್ಚಳವಾಗಿ, ವಸತಿ ಸಮಸ್ಯೆ ಎನ್ನುವುದು ಹೊಸದಾಗಿ ತಲೆದೋರಿದೆ. ಪ್ರಪಂಚದ ಬೇರೆಬೇರೆ ಭಾಗಗಳಿಂದ ದೇಶದೊಳಕ್ಕೆ ಬರುತ್ತಿರುವವರ ಮತ್ತು ಅಂತರಾಜ್ಯ ವಲಸೆಗಾರರ ಸಂಖ್ಯೆ ಹೆಚ್ಚಾಗಿದೆ. ಕಳೆದ ಕೆಲ ವರ್ಷಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದ ಕೇಂದ್ರ ಸರಕಾರವು ಇತ್ತೀಚೆಗೆ ಹೆಚ್ಚು ಸಂಖ್ಯೆಯ ವಿದ್ಯಾರ್ಥಿ ಮತ್ತು ಉದ್ಯೋಗ ವೀಸಾಗಳನ್ನು ಕೊಡುತ್ತ ಉತ್ತೇಜನಕಾರಿಯಾಗಿದೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ