Advertisement

Tag: ಆಸ್ಟ್ರೇಲಿಯಾ

ಅಬೊರಿಜಿನಲ್ ಗಳ ಭರವಸೆ, ಟೆನಿಸ್ ಮಿನುಗು ತಾರೆ ಆಶ್ ಬಾರ್ಟಿ

ಆಶ್ ಬಾರ್ಟಿ ಮೆಲ್ಬೋರ್ನ್ ನಗರದಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಪಂದ್ಯವನ್ನು ಗೆದ್ದಾಗ ಅಪ್ಪಅಮ್ಮಂದಿರು, ಆಪ್ತ ಗೆಳತಿಯರು ಅಲ್ಲದೆ ಇವೊನ್ ಗೂಲಗೊಂಗ್ ಕಾಲಿ ಕೂಡ ಹಾಜರಿದ್ದರು. ಜೊತೆಗೆ ಹೆಸರಾಂತ ಆಸ್ಟ್ರೇಲಿಯನ್ ಅಬೊರಿಜಿನಲ್ ಅಥ್ಲೀಟ್ ಕ್ಯಾಥಿ ಫ್ರೀಮನ್ ಪ್ರೇಕ್ಷಕ ವೃಂದದಲ್ಲಿ ಕೂತು ಪಂದ್ಯವನ್ನು ವೀಕ್ಷಿಸಿದ್ದರು. ತಾನು ಆಟವಾಡಿದ ಸ್ಥಳದಲ್ಲೇ ಇವರೆಲ್ಲರನ್ನು ಕಂಡು ಅವರೆಲ್ಲನ್ನು ಅಪ್ಪಿಕೊಂಡದ್ದೇ ಒಂದು ಮಹಾನ್ ಸಂತೋಷದ ಕ್ಷಣವೆಂದು ಆಶ್ ಹೇಳಿದಳು. ಅಬೊರಿಜಿನಲ್ ಮನೆಮನೆಗಳಲ್ಲಿ ಎದ್ದ ಹರ್ಷೋದ್ಗಾರ ಇನ್ನೂ ಕೇಳುತ್ತಿದೆ. ಡಾ. ವಿನತೆ ಶರ್ಮಾ ಬರೆದ ಆಸ್ಟ್ರೇಲಿಯ ಪತ್ರ

Read More

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

Read More

ಸಮಬೆಸಗಳ ಸರಿಗಮ ತಪ್ಪಿದ್ದಲ್ಲ

ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಕೊರೋನ ಕಾಲದ ಕಮಂಗಿಗಳು: ವಿನತೆ ಶರ್ಮಾ ಅಂಕಣ

“ಮೆಲ್ಬೋರ್ನ್ ನಗರದಿಂದ ಉತ್ತರಕ್ಕೆ ಎರಡು ಸಾವಿರ ಕಿಲೋಮೀಟರಿಗೂ ಜಾಸ್ತಿ ದೂರದಲ್ಲಿರುವ ನಮ್ಮ ಬ್ರಿಸ್ಬನ್ ನಗರನಿವಾಸಿಗಳಿಗೆ ಕೆಳಗಡೆ ಲೋಕದಲ್ಲಿ ನಡೆಯುತ್ತಿರುವ ಅವಾಂತರಗಳನ್ನು ಕೇಳುವುದು ಅಭ್ಯಾಸವಾಗಿದ್ದು, ಅಯ್ಯೋ ಪಾಪ ಎಂದು ಲೊಚ್ ಲೊಚ್ ಅನ್ನೋದು ನಡೆಯುತ್ತಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ