Advertisement

Tag: ಇತಿಹಾಸ

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಕಲ್ಲು ಕಲ್ಲಿನಲಿ… ಆನೆ ಕುದುರೆ…

ಎರಡನೇ ಪ್ರತಾಪರುದ್ರ ಯಾ ರುದ್ರದೇವ ರುದ್ರಾಂಬಳ ಮೊಮ್ಮಗನಾಗಿದ್ದು, ಆಕೆಯ ಅನಂತರ ಪಟ್ಟಕ್ಕೆ ಬಂದು ಅಕ್ಕ ಪಕ್ಕದ ದಂಗೆಗಳನ್ನು ಅಣಗಿಸಿ ಪ್ರಬಲನಾದನು. ದೆಹಲಿಯ ಸುಲ್ತಾನರು ದಕ್ಷಿಣವನ್ನು ಪ್ರವೇಶಿಸಿದುದು ಇವನ ಕಾಲದಲ್ಲೇ. ವಾರಂಗಲ್ಲಿಗೆ ಲಗ್ಗೆಯಿಟ್ಟ ಮುಸ್ಲಿಮ್ ಸೈನ್ಯವನ್ನು ಮೂರು ಬಾರಿ ಅವನು ಎದುರಿಸಬೇಕಾಯಿತು. 1309ರಲ್ಲಿ ಅಲ್ಲಾ ಉದ್ದೀನ ಖಿಲ್ಜಿಯಿಂದ ದಂಡನಾಯಕನಾಗಿ ನಿಯುಕ್ತನಾದ ಮಾಲಿಕ್ ಕಾಫಿರನು ವಾರಂಗಲ್ಲಿನ ಮೇಲೆ ಲಗ್ಗೆಯಿಟ್ಟನು. ಇದರಲ್ಲಿ ಜಯಶಾಲಿಯಾದ ಕಾಫಿರನು ನಗರವನ್ನೆಲ್ಲ ಲೂಟಿ ಮಾಡಿದನು.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಮತ್ತೊಂದು ಬರಹ ಇಲ್ಲಿದೆ.

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ