Advertisement

Tag: ಎಂ. ಜವರಾಜ್‌

ರಾಜ್ಕುಮಾರ್ ಅಂದ್ರ ಏನಂದ್ಕಂಡೆ?: ಎಂ. ಜವರಾಜ್‌ ಹೊಸ ಕಾದಂಬರಿಯ ಆಯ್ದ ಭಾಗ

ಪಂಚಾಯ್ತಿ ಆಫೀಸ್ ಮಗ್ಗುಲು ಬೀದಿಲಿದ್ದ ಕುಂಟ ಸಿದ್ದಪ್ಪನ ಮನೆಯ ಅಂಗಳದಲ್ಲಿ ಒಂದಷ್ಟು ಜನ ಮಾತಾಡ್ತ ನಿಂತಿದ್ದರು. ಅಲ್ಲಿಗೆ ನಾಕಾರು ಪೇಪರು ಬರುತ್ತಿದ್ದವು. ಕುಂಟ ಸಿದ್ದಪ್ಪ ಬಿಳಿಪಂಚೆ ಬಿಳಿ ಶರ್ಟು ಹಾಕೊಂಡು ಕ್ರಾಪ್ ತಲೆ ಬಾಚ್ಕೊಂಡು ಕಾಲಿನ ಮೇಲೆ ಕಾಲು ಹಾಕಿಕೊಂಡು “ಇದು ಗೋಕಾಕ್ ಚಳುವಳಿ ಅಂತ. ಅವ್ರೊಬ್ಬ ದೊಡ್ ಕವಿ. ಅವ್ರು ಸರ್ಕಾರಕ್ಕೆ ಬರ್ದ ಪತ್ರನ ಇಟ್ಕೊಂಡು ನಡಿತಿರ ಹೋರಾಟ ಇದು. ಏಯ್‌ ನೋಡ್ರಪ್ಪ, ಬಾಯಿಲ್ಲಿ” ಅಂತ ಕರೆದು, “ನೀನು ಐದ್ನೆ ಕ್ಲಾಸಾ? ನಾಕ್ನೆ ಕ್ಲಾಸಾ?” ಅಂದ. ನಾನು, ʼಹುʼ” ಎನ್ನುವವನಂತೆ ತಲೆದೂಗಿದೆ. “ಹೌದಾ? ಹೋಗು, ಇನ್ಮೇಲ ಇಂಗ್ಲಿಸ್ ಗಿಂಗ್ಲಿಸ್ ಓದಂಗಿಲ್ಲ, ಬರೀ ಕನ್ನಡ. ನಿನ್ತವು ಇಂಗ್ಲಿಸ್ ಬುಕ್ಸ್ ಇದ್ರ ತೂದು ಬಿಸಾಕಿ ಕನ್ನಡ ಇಟ್ಗ” ಅಂದ. ಅಲ್ಲೊಬ್ಬ ಕೇಳ್ತಿದ್ದವನು “ಇದ್ಕ ರಾಜ್ಕುಮಾರ್ ಯಾಕ್ ಮದ್ಯಕ್ ಬಂದ?” ಅಂತ ಕೇಳಿದ.
ಎಂ. ಜವರಾಜ್‌ ಹೊಸ ಕಾದಂಬರಿ “ಪೋಸ್ಟ್‌ಮ್ಯಾನ್‌ ಗಂಗಣ್ಣ” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಮಾನವೀಯ ಮೌಲ್ಯಗಳ ಪ್ರಯೋಗಶೀಲ ಕಾವ್ಯ: ಪ್ರಶಾಂತ್ ಬೆಳತೂರು

ಕತ್ತಲ ಸಾಮ್ರಾಜ್ಯದಲ್ಲಿ ಹುಟ್ಟಿನ ಜಾಡು ಹಿಡಿದು ಕತೆ ಹೇಳುವ ಮೆಟ್ಟಿನ ಕತೆ ಬರೀ ಕತೆಯಾಗದೆ ಕಾವ್ಯವಾಗುವ ಪರಿಯೇ ಒಂದು ವೈಶಿಷ್ಟ್ಯಪೂರ್ಣ. ತನ್ನ ಕತ್ತಲ ಸಾಮ್ರಾಜ್ಯದ ಕತೆಯನ್ನು ದೇಶಕ್ಕೆ, ಪ್ರಪಂಚಕ್ಕೆ, ಇಡೀ ಭೂಮಂಡಲಕ್ಕೆ ವಿಸ್ತರಿಸಿ ಹೇಳುತ್ತೇನೆನ್ನುವ ಅದರ ತುಡಿತ ಎಲ್ಲರನ್ನೂ ಒಳಗೊಳ್ಳುವ ಸಾಂಸ್ಕೃತಿಕ ಪ್ರಕ್ರಿಯೆಯೂ ಆಗಿದೆ. ಈ ನಿಟ್ಟಿನಲ್ಲಿ ಕವಿಗೆ ತನ್ನ ಕಾವ್ಯದ ಉದ್ದೇಶಗಳ ಕುರಿತು ಸ್ಪಷ್ಟತೆ ಇದೆ. ಈ ದಿಶೆಯಲ್ಲಿ ಇದೊಂದು ಅಪಾರವಾದ ಮಾನವೀಯ ಮೌಲ್ಯಗಳ ತಾಯ್ತನ ತುಡಿತದ ಪ್ರಯೋಗಶೀಲ ಕಾವ್ಯ ಅನ್ನಬಹುದು. ಈ ಅಂಶ ಕಾವ್ಯದ ಉದ್ದಕ್ಕೂ ಓದುಗನನ್ನು ಮನಮುಟ್ಟುತ್ತದೆ.
ಎಂ. ಜವರಾಜ್‌ ಕಥನ ಕಾವ್ಯ “ಮೆಟ್ಟು ಹೇಳಿದ ಕಥಾ ಪ್ರಸಂಗ”ದ ಕುರಿತು ಪ್ರಶಾಂತ್‌ ಬೆಳತೂರು ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ