Advertisement

Tag: ಎಚ್. ಗೋಪಾಲಕೃಷ್ಣ

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

Read More

ಟೆಂಟ್ ಸಿನಿಮಾನೂ ಮತ್ತು ಪೊರಕೆ ನ್ಯೂಸೂ

ಮಲ್ಲೇಶ್ವರದ ಹದಿನೆಂಟನೇ ಕ್ರಾಸಿನಲ್ಲಿ ಅವರ ಮನೆಗೆ ಯಾವುದೋ ಸಮಾರಂಭಕ್ಕೆ ಹೋದ ನೆನಪಿದೆ. ಅಲ್ಲಿ ಅಪ್ಪ ಮಡಿಯಲ್ಲಿ ಪುಟ್ಟ ಪಂಚೆ ಕಚ್ಚೆ ಹಾಕಿಕೊಂಡು ಊಟ ಬಡಿಸಿದ ನೆನಪು; ಅಲ್ಲಿ ಮೊಟ್ಟ ಮೊದಲಬಾರಿಗೆ ಊಟದ ಎಲೆಗೆ ಹಳದಿ ಕೆಂಪು ಮಿಶ್ರಣದ ದೊಡ್ಡದಾಗಿ ಹೆಚ್ಚಿದ ಮಾವಿನ ಹಣ್ಣಿನ ಸಿಪ್ಪೆ ಇಲ್ಲದ ಹೋಳು ಬಡಿಸಿದ್ದು, ಅದನ್ನು ನಾನು ಗಬಗಬಾ ತಿಂದಿದ್ದು, ಎದುರು ಕೂತ ರೇಷ್ಮೆ ಸೀರೆ ಉಟ್ಟಿದ್ದ ಚಿಕ್ಕಮ್ಮನ ಹಾಗೆ ಕಾಣಿಸುತ್ತಿದ್ದ ದಪ್ಪನೆ ಹೆಂಗಸರೊಬ್ಬರು ಬಡಿಸುವವರನ್ನು ಕರೆದು ಮಗೂಗೆ ಇನ್ನೊಂದು ಸ್ವಲ್ಪ ಹಣ್ಣು ಬಡಿಸಿ ಅಂತ ಹೇಳಿದ್ದು…. ಎಚ್. ಗೋಪಾಲಕೃಷ್ಣ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ