Advertisement

Tag: ಎಚ್. ಗೋಪಾಲಕೃಷ್ಣ

ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ

ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ

Read More

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

Read More

ಗೃಹಪ್ರವೇಶದ ಸೀನುಗಳು….: ಎಚ್. ಗೋಪಾಲಕೃಷ್ಣ ಸರಣಿ

ಬೆಳಕಿಗೆ ಅಂತ ಲಾಟೀನು, ಮೊಂಬತ್ತಿ ಬೆಂಕಿ ಪೆಟ್ಟಿಗೆ ತಂದಿಟ್ಟು ಪೆಟ್ರೋಮಾಕ್ಸ್‌ಗೆ ಹೊರಟೆ. ಅದು ಮೂರುನಾಲ್ಕು ಕಿಮೀ ದೂರದಲ್ಲಿ ನೋಡಿದ್ದೆ. ಆದರೆ ಅದನ್ನ ಯಾವತ್ತೂ ಹಚ್ಚಿ ಉಪಯೋಗಿಸಿರಲಿಲ್ಲ. ಅಂಗಡಿಗೆ ಹೋಗಿ ನಾಲ್ಕು ಪೆಟ್ರೋಮಾಕ್ಸ್ ಬಾಡಿಗೆ ತಗೊಂಡೆ. ಹೇಗೆ ಹಚ್ಚೋದು ಅಂತ ಅವನು ಅಂದರೆ ಅಂಗಡಿ ಓನರ್ ತೋರಿಸಿಕೊಟ್ಟ. ನಾಲ್ಕೂ ತಗೊಂಡು ಎರಡು ಶೌರಿ ನಮ್ಮ ವಾಚ್ಮನ್ನು, ಎರಡು ಸೈಕಲ್ ಹ್ಯಾಂಡಲ್‌ಗೆ ನೇತು ಹಾಕಿ ಮನೆ ಸೇರಿದೇವಾ? ಅವತ್ತು ರಾತ್ರಿ ಎಂಟಕ್ಕೆ ಎಲ್ಲರೂ ಸೇರಿ ನಮ್ಮ ಕಲಿತ ವಿದ್ಯೆ ಎಲ್ಲವನ್ನೂ ಖರ್ಚು ಮಾಡಿದರೂ ಒಂದೇ ಒಂದು ಪೆಟ್ರೋಮಾಕ್ಸ್ ಹತ್ತಲಿಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ