Advertisement

Tag: ಎಸ್ ನಾಗಶ್ರೀ ಅಜಯ್

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಎದೆ ಹಿಂಡುವ ನೆನಪು…: ಎಸ್. ನಾಗಶ್ರೀ ಅಜಯ್ ಅಂಕಣ

ಮಧ್ಯಾಹ್ನದ ಊಟಕ್ಕೆ ಆರಾಮಾಗಿ ಮನೆಗೆ ಹೋಗಿ ಬರಬಹುದಿತ್ತು. ಕೆಲವು ಮಕ್ಕಳ ತಾಯಂದಿರು ಮಾತ್ರ ಪ್ರತಿದಿನ ತಮ್ಮ ಮಕ್ಕಳ ಡಬ್ಬಿ ಹಿಡಿದು ಮಧ್ಯಾಹ್ನ ಶಾಲೆಗೆ ಬಂದು ತಿನ್ನಿಸಿ ಹೋಗುತ್ತಿದ್ದರು. ಒಂದು ಮಳೆಮಧ್ಯಾಹ್ನ ನನ್ನ ಅಮ್ಮನೂ ಡಬ್ಬಿ ತಂದು, ತಿನ್ನುವವರೆಗೂ ಜೊತೆಯಿದ್ದು ಹೋದಾಗ ಒಂದು ಬಗೆಯ ಜಂಬ. ಸಂತೋಷ. ನನ್ನ ಗೆಳತಿಯೊಬ್ಬಳನ್ನು ಕೇಳಿದ್ದೆ, “ಇವತ್ತು ನಮ್ಮಮ್ಮ ಬಂದಿದ್ರು. ನೋಡಿದ್ಯೇನೇ?” ಅವಳು ಅಷ್ಟೇ ಸಹಜವಾಗಿ, “ಎಷ್ಟು ಜೋರು ಮಳೆ ಬಂದರೂ ನಮ್ಮಮ್ಮ ಬರಲ್ಲ ಕಣೆ. ನಾನು ಹುಟ್ಟಿದಾಗಲೇ ಅವರು ಸತ್ತೋದ್ರು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ

ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಹಂಚಿ ಹಗೂರಾಗಿ, ಬೇಗುದಿಗಳನೆಲ್ಲ…

ಎಲ್ಲದರಲ್ಲೂ ಹುಳುಕು ಹುಡುಕುತ್ತಾ, ಗೋಳುಗುಟ್ಟುತ್ತಾ, ಆಪಾದಿಸುತ್ತಾ, ಕೊಂಕು ತೆಗೆಯುತ್ತಾ ಕೂರುವುದು ಸರಿಯಲ್ಲ. ಆದರೆ ಬದುಕೆಂದರೆ ಸಿಹಿ-ಕಹಿಗಳೆರಡೂ ಇರುವಾಗ, ಸಿಹಿಯ ಮಾತನ್ನೇ ಹಂಚುತ್ತಾ, ಕಹಿಯನ್ನೆಲ್ಲಾ ಒಳಗೇ ನುಂಗಿ ನುಂಗಿ ನಂಜುಂಡರಾಗುವುದು ನಮ್ಮ ಮೇಲೆ ನಾವೇ ಹೊರೆಸಿಕೊಳ್ಳುವ ಭಾರ. ಹತ್ತರಲ್ಲಿ ಒಂದು ಸಲವಾದರೂ ನೋವನ್ನು ನೋವಾಗಿ, ಅಳುವನ್ನು ಅಳುವಾಗಿ, ಸೋಲನ್ನು ಸೋಲಾಗಿ ತೋರಿಸಿಕೊಳ್ಳುವ ಸ್ವಾತಂತ್ರ್ಯ ನಾವು ರೂಢಿಸಿಕೊಳ್ಳಬೇಕಿದೆ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More
  • 1
  • 2

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ.... ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು…

Read More

ಬರಹ ಭಂಡಾರ