Advertisement

Tag: ಎಸ್. ಸಿರಾಜ್ ಅಹಮದ್

ಕಾವ್ಯದಿಂದ ಏನನ್ನು ನಿರೀಕ್ಷಿಸುತ್ತೇವೆ?: ಕಮಲಾಕರ ಕಡವೆ ಕೃತಿಗೆ ಸಿರಾಜ್‌ ಅಹಮದ್‌ ಮುನ್ನುಡಿ 

‘ಮುಗಿಯದ ಮಧ್ಯಾಹ್ನʼ ಸಂಕಲನದಲ್ಲಿ ಸೂಚಿಸುವ ಹಾಗೆ ನಿಧಾನ ನಿಧನದತ್ತ ಸಾಗಿರುವ ಸುತ್ತಲಿನ ಜಗತ್ತಿನ ಬಗೆಗೆ ಕವಿ ಬಹಳ ವ್ಯಾಕುಲನಾಗಿದ್ದಾನೆ. ಇನ್ನೊಂದು ಬಗೆಯಲ್ಲಿ ಇದರಿಂದ ಅವನ ಅಂತರಂಗವೂ ಕ್ರಮೇಣ ವಿಕೃತಗೊಂಡಿರುವ ಸೂಚನೆಗಳು ಇಲ್ಲಿ ಸಿಗುತ್ತವೆ. ಹಕ್ಕಿ ಕಂಡರೂ ಅದು ಏರುವ ವಿಸ್ತಾರವನ್ನು ಕಾಣದ ಅದರ ಹಾರಾಟವನ್ನು ಶಂಕಿಸುವ ಮನಸುಗಳಿಗೆ ಮೊದಲು ಅವರದೇ ಎದೆಯೊಳಗಿನ ಹಕ್ಕಿಯೊಂದು ಸೊರಗಿ ಹೋಗುವ ದುರಂತವನ್ನು ಕವಿ ಕಾಣಿಸುತ್ತಾನೆ.
ಕಮಲಾಕರ ಕಡವೆ “ವಲಸೆ ಹಕ್ಕಿಗಳ ಹುಯಿಲು” ಕವನ ಸಂಕಲನಕ್ಕೆ ‌ಎಸ್ ಸಿರಾಜ್‌ ಅಹಮದ್‌ ಮುನ್ನುಡಿ

Read More

ಕವಿಜೋಡಿಯ ದುರಂತಗೀತ

ಕವಿಜೋಡಿಯ ದುರಂತ ಅಂತ್ಯವೂ ಬಹಳ ಪರಿಣಾಮಕಾರಿಯಾಗಿ ನಿರೂಪಿತವಾಗಿದೆ. ಕಾವ್ಯದೇವಿಯೇ ಹೇಳಿ ಮಾಡಿಸಿದಂಥ ಜೋಡಿಯೊಂದು ಪರಸ್ಪರರ ವಿಶ್ವಾಸ ನಂಬಿಕೆಗಳನ್ನು ಉಳಿಸಿಕೊಳ್ಳಲಾಗುವುದಿಲ್ಲ. ತನ್ನ ಗಂಡ ಆಸಿಯಾ ಎಂಬುವವಳ ಜೊತೆ ಸಲಿಗೆಯಿಂದ ಇರುವುದನ್ನು ಸಹಿಸಲಾಗದೆ ತಮ್ಮಿಬ್ಬರ ಪ್ರೇಮದ ಕುರುಹಾಗಿದ್ದ ಕವಿಕುಟೀರದಿಂದ ಅವನ ಕವಿತೆ-ಟಿಪ್ಪಣಿಗಳ ಪುಸ್ತಕವನ್ನು ಸುಟ್ಟು ಟೆಡ್ ನನ್ನು ಹೊರಹಾಕುವುದು..
ಎಸ್. ಸಿರಾಜ್‌ ಅಹಮದ್‌ ಬರೆಯುವ ಅಂಕಣ

Read More

ಕಿಕ್ಕಿರಿದ ಭಾಷೆಗಳ ಕಾಡಿನಲ್ಲಿ ಓಡಾಡಿದ ಜಿ.ಎನ್.ದೇವಿ ಅವರೊಡನೆ ಮಾತುಕತೆ

ಪ್ರೊ. ಜಿ. ಎನ್. ದೇವಿ ಅಂತರರಾಷ್ಟ್ರೀಯ ಖ್ಯಾತಿಯ ಭಾಷಾ ವಿದ್ವಾಂಸರು. ಬರೋಡಾದ ಸಯ್ಯಾಜಿರಾವ್ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ದೇವಿಯವರು ಮೂಲತಃ ಸಾಹಿತ್ಯ ವಿಮರ್ಶಕರು. ತಮ್ಮ‌ ವೃತ್ತಿಗೆ ರಾಜೀನಾಮೆ ನೀಡಿ, ಆದಿವಾಸಿಗಳ ಭಾಷೆಗಳ ಅಧ್ಯಯನವನ್ನು ಕೈಗೆತ್ತಿಕೊಂಡವರು. ಪ್ರಪಂಚದ ಎಲ್ಲಾ ಬುಡಕಟ್ಟು ಭಾಷೆಗಳ ಗಣತಿ ಮಾಡುವ ಬೃಹತ್ ಕಾರ್ಯಯೋಜನೆಯ ಜವಾಬ್ದಾರಿಯನ್ನು ದೇವಿಯವರಿಗೆ  ಯುನೆಸ್ಕೋ ವಹಿಸಿದೆ. ಭಾಷೆಗಳ ಕುರಿತು…

Read More

ಗಾಲಿಬ್ : ದಿಲ್ಲಿಯ ವೈಭವ ಮತ್ತು ದುರಂತ

ಎಲ್ಲ ಬಗೆಯ ಅಧಿಕಾರ, ದರ್ಪವನ್ನು ಧಿಕ್ಕರಿಸುವ ಕಾರಣಕ್ಕಾಗಿಯೇ ಗಾಲಿಬ್ ಕುಡಿತ, ಜೂಜು ಮತ್ತು ಸಾಂಪ್ರದಾಯಿಕ ಇಸ್ಲಾಮಿಗೆ ಹೊರತಾದ ಪಾಷಂಡಿತನವನ್ನು ಬೆಳೆಸಿಕೊಂಡ. ದಿಲ್ಲಿಯಿಂದ ಕಲ್ಕತ್ತೆಗೆ ಹೋದರೂ ಪಿಂಚಣಿ ಸಿಗದೆ ಫಕೀರನಾಗಿದ್ದ ಗಾಲಿಬ್ ಪರ್ಶಿಯನ್ ಫ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿದ್ದ. ಆ ಹುದ್ದೆಯ ಸಂದರ್ಶನಕ್ಕೆ ಹೋದಾಗ ನಡೆದ ಘಟನೆ ಗಾಲಿಬ್‌ನ ಆತ್ಮಾಭಿಮಾನ-ಸ್ವಂತಿಕೆಗೆ ಸಂಕೇತದಂತಿದೆ.”

Read More

ಕನಕದಾಸರ ರಾಮಧಾನ್ಯ ಚರಿತೆ: ಭಿನ್ನತೆ ಮತ್ತು ವೈವಿಧ್ಯತೆ

“ಲೂಸ್ ಇರಿಗೆರೆ, ಹೆಲೆನ್ ಸಿಝೂ ಮೊದಲಾದ ಫೆಮಿನಿಸ್ಟ್ ಚಿಂತಕರು ಮಹಿಳಾ ಸ್ವಾಂತಂತ್ರ್ಯದ ಸಂದರ್ಭದಲ್ಲಿ ಕೇಳುವ ಸಮಾನತೆ ಅಥವಾ ವೈವಿಧ್ಯತೆಯ ಪ್ರಶ್ನೆಯನ್ನು ಇಲ್ಲಿಯೂ ಕೇಳುವುದಾದರೆ ಕನಕದಾಸರು ತಮ್ಮ ಕಾವ್ಯದಲ್ಲಿ ಸಮಾನತೆಯನ್ನು ಎತ್ತಿ ಹಿಡಿಯುವ, ವೈವಿಧ್ಯತೆಯನ್ನು ಗುರುತಿಸುವ ಬಹು ಆಯಾಮದ ನೋಟವನ್ನು ತೋರಿದ್ದಾರೆ ಅನ್ನಿಸುತ್ತದೆ.”
ಎಸ್. ಸಿರಾಜ್ ಅಹಮದ್ ಅಂಕಣದಲ್ಲಿ ರಾಮಧಾನ್ಯ ಚರಿತೆ ಕುರಿತ ಬರಹ:

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ