Advertisement

Tag: ಒಲವು

ಹರಿಸಲಾರದ ಸಮುದ್ರವಿದೆ ಅವನಲ್ಲೂ..: ಆಶಾ ಜಗದೀಶ್ ಅಂಕಣ

ಇಷ್ಟೆಲ್ಲ ಗೊಂದಲ, ಪ್ರಶ್ನೆಗಳ ನಡುವೆಯೂ ನಾನೇಕೆ ಪತಿಪೂಜೆ ಮಾಡುತ್ತೇನೆ ಎಂದರೆ ಅದು ಧಾರ್ಮಿಕ ಕಟ್ಟಳೆಯಲ್ಲ ಅದು ಹೃದಯದ ನಿವೇದನೆ. ನನ್ನವನೆದುರು ನನ್ನ ಪ್ರೀತಿಯನ್ನು ತೋರಿಸಿಕೊಳ್ಳುವ ಒಂದು ವಿಧಾನ. ನಾವು ಹೆಣ್ಣುಮಕ್ಕಳಿಗೆ ಇಂತಹ ಹಲವಾರು ದಾರಿಗಳಿವೆ. ನಾವು ಯಾವುದನ್ನೂ ಮುಚ್ಚಿಟ್ಟುಕೊಳ್ಳಲಾರೆವು. ಕೋಪ, ಅಸಹನೆ, ನೋವು, ನಗು, ಅಳು… ಎಲ್ಲವನ್ನೂ ತೋರಿಸಿಕೊಂಡುಬಿಡುತ್ತೇವೆ. ಆದರೆ ಗಂಡಿಗೆ ಹಾಗಲ್ಲ. ಅವನು ತನ್ನ ನೋವನ್ನಾಗಲೀ, ಅಳುವನ್ನಾಗಲೀ, ಕಣ್ಣೀರನ್ನಾಗಲೀ ತೋರಿಸುವಂತೆಯೇ ಇಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ನಾವು ಅದೆಷ್ಟು ತೀವ್ರವಾಗಿ ಅತ್ತಿದ್ದೇವೆ, ಒಬ್ಬರನ್ನೊಬ್ಬರು ಹಂಬಲಿಸಿದ್ದೇವೆ, ಬಿಟ್ಟು ಬದುಕಲು ಸಾಧ್ಯವೇ ಇಲ್ಲ ಎನಿಸುವಷ್ಟು ಹಚ್ಚಿಕೊಂಡಿದ್ದೇವೆ. ಜೊತೆಯಲ್ಲಿರುವಂತೆ ಭ್ರಮಿಸಿದ್ದೇವೆ. ಭ್ರಮೆಯಿಂದ ತಿಳಿದೆದ್ದು ವಿಹ್ವಲಗೊಂಡಿದ್ದೇವೆ. ಅದೊಂದು ದಿನ ನಡುರಾತ್ರಿ, ಒಂದು ಕನಸು ಅರಳತೊಡಗಿತ್ತು; ನೈಜವೆನಿಸುವಷ್ಟೇ ಸಹಜವಾಗಿ. ನಾವಿಬ್ಬರೂ ಎರೆಡು ಪುಟ್ಟ ಗಿಳಿಗಳಂತೆ ಒಟ್ಟೊಟ್ಟಾಗಿ ಒತ್ತಿಕೊಂಡು ಕೂತು, ನಿಂತು, ಮಲಗಿ ಆಟವಾಡುತ್ತಿದ್ದೆವು. ಮುದ ಮತ್ತು ಮುಗ್ಧ… ಯಾರ ಸಂಚೋ ತಿಳಿಯದು. ಕನಸು ಒಡೆಯಿತು. ಕಣ್ಣು ತೆರೆದಾಗ ನೀನಿಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ