Advertisement

Tag: ಕತೆ

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು ಅಥವಾ ಮನೆಯ ಜಂತಿ ಕಾಣುತ್ತ ಸುಮ್ಮನಿರುತ್ತಿದ್ದಳು. ಶಾಕ್ ಆಗಿದೆ ಅವಳಿಗೆ, ಕ್ರಮೇಣ ಸರಿಯಾತ್ತ್ ಅಂದಿದ್ದರು ಲತಕ್ಕ. ಹೊತ್ತು ಕಂತುವುದನ್ನೇ ಕಾದು ಕೂತು ಮಿಣ್ಕು ಸಾಸ್ಮೆ, ಉಪ್ಪು, ಬೆಳ್ಳುಳ್ಳಿ ಸಿಪ್ಪೆ, ಈರುಳ್ಳಿ ಸಿಪ್ಪೆ, ಒಣಮೆಣಸಿನ ಚೊಟ್ಟು, ಎಲ್ಲ ಒಟ್ಟು ಮಾಡಿಕೊಂಡು ಮೊಮ್ಮಗಳಿಗೆ ಸುಳಿದು ಒಲೆಗೆ ಹಾಕಿ ಚಟಪಟಗುಟ್ಟಿಸಿ ದೃಷ್ಟಿ ತೆಗೆಯುತ್ತಿದ್ದಳು.
ವಿಜಯಶ್ರೀ ಹಾಲಾಡಿ ಕಥಾ ಸಂಕಲನ “ಉಮ್ಮಲ್ತಿ ಗುಡಿಯ ಸಾಕ್ಷಿ”ಯ ಕತೆ “ಚನ್ನೆಮಣೆ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

Read More

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ