Advertisement

Tag: ಕತೆಗಳು

ಕ್ಷಮಾ ವಿ. ಭಾನುಪ್ರಕಾಶ್‌ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ

“ನಮ್ಮ ತೋಟದಲ್ಲಿ ಎಲ್ಲೆಡೆಯೂ ಕಾಣುವ ಹನಿನೀರಾವರಿ ಪೈಪುಗಳಂತೆ ಈ ಜಲವಾಹಕ ಮತ್ತು ಆಹಾರವಾಹಕ ಕೊಳವೆಗಳೂ, ಸಸ್ಯದ ತುಂಬೆಲ್ಲಾ ಇರತ್ವೆ ಅಲ್ವಾ? ತಮ್ಮ ಪಾಡಿಗೆ ತಮ್ಮ ಕೆಲಸ ಮಾಡುತ್ತಾ ಗಿಡಮರಗಳನ್ನ ಚೆನ್ನಾಗಿಡತ್ವೆ” ಎಂದಳು ನಗುತ್ತಾ. “ಹೌದು ಕಣೋ, ಹಾಗೇನೇ. ಇಲ್ಲಿ ನೋಡು, ಈ ಎಲೆಯನ್ನ!” ಎಂದು ತನ್ನ ಅಂಗಳದಲ್ಲೇ ಸೊಂಪಾಗಿ ಬೆಳೆದಿದ್ದ ಮಲ್ಲಿಗೆಯ ಬಳ್ಳಿಯಿಂದ ಎಲೆಯೊಂದನ್ನು ತೋರಿಸುತ್ತಾ! “ಈ ಎಲೆಯಲ್ಲಿ ಆಚೀಚೆ ಕಾಣುವ ಗೆರೆಗಳನ್ನ ಗಮನಿಸು; ಅದೇ ರೀತಿ ಇಲ್ಲಿ ಅಂಗಳದಲ್ಲಿರುವ ಎಲ್ಲಾ ಗಿಡಗಳನ್ನೂ ಗಮನಿಸು. ಎಲ್ಲಾ ಎಲೆಗಳಲ್ಲೂ ಹೀಗೆ ಗೆರೆಗಳು ಕಾಣಿಸುತ್ತಲ್ವಾ? ಅದೇ ಈ ಜಲವಾಹಕ-ಆಹಾರವಾಹಕಗಳ ಕಂತೆ.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ದುಃಖಾಂತ ಪಾತ್ರಗಳ ಬಿಕ್ಕುಗಳ ಸಂಕಲನ: ಶುಭಶ್ರೀ ಕಥಾಸಂಕಲನಕ್ಕೆ ವಿಕಾಸ ನೇಗಿಲೋಣಿ ಮುನ್ನುಡಿ

ಶುಭಶ್ರೀ ಬಳಸುವ ಭಾಷೆ ಬಹುತೇಕ ಉತ್ತರ ಕನ್ನಡದ ಕೆಳ ಸಮುದಾಯದ್ದು. ಜೊತೆಗೆ ಮಕ್ಕಳಾಗದವರ ಬಿಕ್ಕು, ಗಂಡನ ದೌರ್ಬಲ್ಯದ ನೆರಳಲ್ಲಿ ನರಳುವ ಹೆಣ್ಮಕ್ಕಳ ಬಿಕ್ಕು, ಮನೆ ತೊರೆದು ಹೋದವರ ನರಳುಗಳನ್ನೆಲ್ಲಾ ಗದ್ಗದಿತ ಕೊರಳಿನಿಂದ ಹೇಳುತ್ತಾ ಹೋಗುತ್ತಾರೆ. ಸಂಕಲನದ ಅತ್ಯಂತ ಗಾಢ ಕತೆಯೆಂದರೆ ‘ಹಗಲು ವೇಷ’. ಮನೆ ತೊರೆದು, ಅನ್ಯ ಕೋಮಿನ ಹುಡುಗನನ್ನು ಮದುವೆಯಾಗಿ, ನರಳುವ ಹೆಣ್ಮಗಳೊಬ್ಬಳ ಚಿತ್ರಣ ಇರುವ ಆ ಕತೆಯಲ್ಲಿ ಧರ್ಮ ಅಥವಾ ದ್ವೇಷದ ಸೋಂಕು ಇಲ್ಲದೇ, ಜಡ್ಜ್ ಮೆಂಟಲ್ ಕೂಡ ಆಗದಂತೆ ಹೆಣ್ಣೊಬ್ಬಳ ಅಂತಃಕರಣದಿಂದ ಆಯೇಷಾ ಅನ್ನುವ ಪಾತ್ರವನ್ನು ಕತೆಗಾರ್ತಿ ನಿರ್ವಹಿಸಿದ ಮೆಚ್ಚುವಂತಿದೆ.
ಶುಭಶ್ರೀ ಭಟ್ಟ ಹೊಸ ಕಥಾಸಂಕಲನ “ಬಿದಿಗೆ ಚಂದ್ರಮನ ಬಿಕ್ಕು” ಕೃತಿಗೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ