Advertisement

Tag: ಕತೆಗಳು

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ

‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ

Read More

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ