Advertisement

Tag: ಕತೆ

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಧುಸೂದನ ವೈ. ಎನ್. ಕತೆ

ಅವಳು ಚಡಪಡಿಸಿದಳು. ಮುಷ್ಠಿ ಬಿಗಿ ಹಿಡಿದಳು. ಉಗಿದು ಅವನನ್ನು ಓಡಿಸುವುದೋ, ಅಥವಾ ಕಿರುಚಿಕೊಳ್ಳುವುದೋ ಗೊತ್ತಾಗಲಿಲ್ಲ. ಸುಮ್ಮನೆ ನಿರ್ಲಕ್ಷಿಸಿ ನಿಂತರೆ ಹೇಗೆ, ಯೋಚಿಸಿದಳು. ಅವನು ಇದಾವುದರ ಪರಿವೆಯೆ ಇಲ್ಲದಂತೆ ಬಜ್ಜಿ ತಿನ್ನುತ್ತಲೆ ಇದ್ದ. ಅವಕಾಶ ಸಿಕ್ಕಂತೆಲ್ಲ ಅವನು ಹತ್ತಿರ ಸರಿಯುತ್ತಿರುವುದು ಅವಳಿಗೆ ಸ್ಪಷ್ಟವಾಗಿ ಗೊತ್ತಾಗುತ್ತಿತ್ತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಮಧುಸೂದನ ವೈ. ಎನ್. ಬರೆದ ಕತೆ “ಬೋಣಿ”

Read More

ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ಈಗ ಗೋಡೆಯ ಮೇಲಿನ ಚಿತ್ರಗಳು ಬದಲಾಗಿ ವಿಶಾಲವಾದ ಸಮುದ್ರ ಗೋಚರಿಸತೊಡಗಿದೆ. ಸಮುದ್ರದ ನಟ್ಟನಡುವೆ ಹಡಗಿನಲ್ಲಿ ರಮೇಶ, ಶೇಖರ ಹಾಗೂ ಹೆಂಗಸೊಬ್ಬಳು ನಿಂತಿದ್ದಾರೆ! ಹೆಂಗಸಿನ ಅಣತಿಯನ್ನು ಶಿರಸಾವಹಿಸಿ ಪಾಲಿಸುವಂತೆ ರಮೇಶ, ಶೇಖರನನ್ನು ಹಡಗಿನಿಂದ ಸಮುದ್ರಕ್ಕೆ ದೂಡಿದ! ಉರವಣಿಸಿ ಬಂದ ಅಲೆಗಳು ಶೇಖರನನ್ನು ತಮ್ಮೊಳಗೆ ಕರಗಿಸಿಕೊಂಡವು. ಶೇಖರ ಇನ್ನಿಲ್ಲವಾದ! ‘ಇಲ್ಲಾ, ಇಲ್ಲಾ! ನಾನು ಮದುವೇನೇ ಆಗಲ್ಲ!’ ಎಂದು ಚೀರಿ ಕನಸಿನ ಭ್ರಮಾಲೋಕದಿಂದ ವಾಸ್ತವ ಪ್ರಪಂಚಕ್ಕೆ ಮರಳಿದ ರಮೇಶ!
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ “ಸಹೋದರರ ಕನಸು” ಹೊಸ ವರ್ಷದ ಮೊದಲ ಓದಿಗೆ

Read More

ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ರೂಡಿ ಯಾರು, ಏನು, ಎತ್ತ ಎಂಬುವುದು ಗೊತ್ತೇ ಇರದಿದ್ದರೂ ಯಾವುದೋ ಅಸಹಾಯಕತೆಯೊಂದು ಅವನನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಅವಳಿಗೆ ಆಗಾಗ ಅನ್ನಿಸುತ್ತಿತ್ತು. ಪ್ರತಿ ಬೆಳಗೂ ‘ಈವತ್ತು ಹೇಗಾದರೂ ಸರಿ, ಅವನನ್ನು ಕೇಳಲೇಬೇಕು’ ಎಂಬ ಪ್ರತಿಜ್ಞೆಯೊಂದಿಗೆ ಹಾಸಿಗೆಯಿಂದ ಏಳುತ್ತಿದ್ದಳು. ಆದರೆ ಹಾಗೆ ಕೇಳಬೇಕೆಂದು ಹೊರಟಾಗೆಲ್ಲಾ ಗಂಟಲಲ್ಲಿ ಒಂದು ಮುಳ್ಳು ಸಿಕ್ಕಿಹಾಕಿಕೊಂಡಂತಾಗಿ ಕೇಳಲಾಗದೆ ಇದ್ದುಬಿಡುತ್ತಿದ್ದಳು. ಹೋಗಲಿ, ತಾನು‌ ನಲವತ್ತರ ಹೊಸ್ತಿಲು ದಾಟಿದವಳು…
ಫಾತಿಮಾ ರಲಿಯಾ ಬರೆದ ಕತೆ “ರೂಡಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಒಂದೇ ಮನೆಯ ಹಲವು ಮನಗಳು….

ಫೋನಿನಲ್ಲಿ ವಿನಯನ ಜತೆ ಮಾತಾಡುತ್ತಿದ್ದವನು ಅಲಿಶಾ ಉಸಿರಾಡುತ್ತಿದ್ದಾಳಾ? ಆಕೆ ಮಾತಾಡುತ್ತಿದ್ದಾಳಾ? ಮೂವತ್ತು ಸೆಕಂಡುಗಳ ಕಾಲ ಆಕೆಯ ಉಸಿರಾಟ ಮತ್ತು ನಾಡಿಬಡಿತ ನೋಡಿ ಹೇಳು ಎಂದು ಅವನ ಪ್ರೋಟೊಕಾಲಿನಲ್ಲಿದ್ದಂತೆ ವಿನಯನಿಗೆ ಹೇಳುತ್ತಿದ್ದ. ವಿನಯ ‘ನಾನೂ ಒಬ್ಬ ಡಾಕ್ಟರು. ನನ್ನ ಹೆಂಡತಿಯೂ ಡಾಕ್ಟರು. ಅವಳಿಗೇನೂ ಆಗಿಲ್ಲ. ಅವಳಿಗೆ ತಕ್ಷಣ ಹೆರಿಗೆಯಾಗಬೇಕು. ನೀನು ತಕ್ಷಣ ಆ್ಯಂಬುಲೆನ್ಸ್ ಕಳಿಸಲಿಲ್ಲ ಎಂದರೆ ನಾನೇ ಡ್ರೈವ್ ಮಾಡಿಕೊಂಡು ಆಸ್ಪತ್ರೆಗೆ ಹೋಗುತ್ತೇನೆ’…
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಏಳನೆಯ ಕಂತು ನಿಮ್ಮ ಓದಿಗಾಗಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ