Advertisement

Tag: ಕತೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ

ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ