Advertisement

Tag: ಕತೆ

ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ

ವೃದ್ಧಾಶ್ರಮದ ಅಂಗಳ ತಮ್ಮ ಮನೆ. ಆವತ್ತು ಭಾವನಾಳೊಡನೆ ಮನೆ ಬಿಟ್ಟು ಹೋಗುವಾಗ ಅಪ್ಪ ಆರಾಮ ಕುರ್ಚಿಯ ಮೇಲೆ ನಿರ್ಲಿಪ್ತವಾಗಿ ಕೂತಿದ್ದರು. ಅಮ್ಮ ಕಣ್ಣಿನಲ್ಲಿ ನೀರು ತುಂಬಿಕೊಂಡು ನೋಡುತ್ತ ನಿಂತಿದ್ದರು. ಹದಿಮೂರು ಜನ ವೃದ್ಧ-ವೃದ್ಧೆಯರೂ ನಮ್ಮನ್ನೆ ನೋಡುತ್ತ ನಿಂತಿದ್ದರು. ಏಕೋ ನನ್ನಲ್ಲಿ ಅಳುಕು. ಭಾವನಾ ಸರಸರನೇ ಹೆಜ್ಜೆ ಹಾಕಿ ಕಾರಿನಲ್ಲಿ ಕುಳಿತುಬಿಟ್ಟಿದ್ದಳು. ಲಚ್ಚಿ ಆಗ ಗರ್ಭಿಣಿ. ನನ್ನೆಡೆಗೆ ದುರದುರನೆ ದಿಟ್ಟಿಸುತ್ತಿದ್ದಳು.
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಕೊ ಕ್ಕೊ ಕ್ಕೊ…” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ

ವಿಶ್ವನಾಥನಿಗೆ ಸಹನೆಯ ಕಟ್ಟೆಯೊಡಯತೊಡಗಿತ್ತು. ‘ನೀವು ನಮ್ಮನ್ನು ಕರೆಸಿದ್ದು ನಿಮ್ಮ ಫೋನ್ ನಂಬರಿಗೆ ಲಾಟರಿ ಹತ್ತಿದೆ, ಬಹುಮಾನ ಗಳಿಸಿದ್ದೀರಿ ಬನ್ನಿ ಅಂತ, ಸುಮ್ಮನೇ ನಮ್ಮ ಬಹುಮಾನ ನಮಗೆ ಕೊಟ್ಟು ನಂತರ ಮಾತಾಡಿ, ನಾವು ನಮ್ಮ ಕೆಲಸ ಬೊಗಸೆ ಎಲ್ಲ ಬಿಟ್ಟು ಇಲ್ಲಿ ಬಂದಿದ್ದೇವೆ, ಕಂಪ್ಲೆಂಟು ಕೊಡ್ತೇನೆ ಕಂಪ್ಲೆಂಟು’ ಅಂತ ಎದ್ದು ನಿಂತು ದೊಡ್ಡ ದನಿಯಲ್ಲಿ ಕೂಗಾಡತೊಡಗಿದ್ದೇ, ಅಲ್ಲಿಯ ವ್ಯವಸ್ಥಾಪಕರು ಕಸಿವಿಸಿಗೊಂಡರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ “ನೀರ ಮಣಿಗಳ ಮಾಲೆ”

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ

ತನ್ನ ಮಗಳು ಕಣ್ಣೆದುರಿಗೆ ಅಳುತ್ತಿರುವುದನ್ನು ಕಂಡೂ ಯಾವುದೇ ವಿಕಾರಗಳನ್ನು ಹರಿಸದೆ ಮೌನದಿಂದ ಶೂನ್ಯವನ್ನು ದಿಟ್ಟಿಸುತ್ತಾ, ಅಜ್ಜನನ್ನು ತಬ್ಬಿಕೊಂಡ ಮಗಳನ್ನು ಮತ್ತು ಅಪ್ಪ ಶೇಖರಪ್ಪಯ್ಯರನ್ನು ನಿರ್ಭಾವದಿಂದ ನೋಡುತ್ತಿದ್ದ. ಶೇಖರಪ್ಪಯ್ಯರ ಹೊಟ್ಟೆ ಹೊತ್ತಿಯೇ ಹೋಯಿತೇನೋ ಎನ್ನುವಂತೆ ಎಡಗೈಯಿಂದ ಹೊಟ್ಟೆಯನ್ನು ಹಿಡಿದು ಹಿಚುಕುತ್ತಾ ಸವರುತ್ತಾ, ಮೊಮ್ಮಗಳನ್ನು ಬಿಗಿದಪ್ಪಿಕೊಂಡು ಮಗನೇ… ಸೂರ್ಯ…. ನಾನು ಕಣೋ ಅಪ್ಪಾ… ಮಾತಾಡೋ, ಮಾತಾಡು ಕಂದ ಎಂದು ಸೂರ್ಯನಿಗೆ ಹೇಳುತ್ತಿದ್ದರೆ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ “ಗಂಧ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ