Advertisement

Tag: ಕಥಾಸಂಕಲನ

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

“ಗೇದುಣ್ಣುವವರೇ ಬದುಕದ ಕಾಲದಲ್ಲಿ ಹುಟ್ಟುವ ಕತೆಗಳಾದರೂ ಉಳಿಯುತ್ತವೆ”: ಹೃದಯ ಶಿವ ಕಥಾಸಂಕಲನಕ್ಕೆ ಸ್ವಾಮಿ ಪೊನ್ನಾಚಿ ಬರಹ

ಹೃದಯಶಿವ ಅವರ ಕಥೆಗಳನ್ನು ಓದುವ ಕುತೂಹಲದ ಮಜವೇ ಬೇರೆ. ಕನಕಪುರದ ಕೆಬ್ಬರೆ ಗ್ರಾಮದಲ್ಲಿ ಶುರುವಾದ ಕಥೆ ಬೆಂಗಳೂರಿನ ಸಿನಿಮಾರಂಗದಲ್ಲಿ ಬಂದು ನಿಲ್ಲುತ್ತದೆ. ವೈಯಕ್ತಿಕ ದನಿಯ ಆಚೆಗೆ ಕತೆಗಳು ವಿಸ್ತಾರಗೊಳ್ಳುತ್ತಾ ಸಮಷ್ಟಿಯೆಡೆಗೆ ಹೋಗುತ್ತವೆ. ಬದುಕಿನ ಪರಸ್ಪರ ವೈರುಧ್ಯಗಳೇ ಹೆಚ್ಚು ಕಥೆಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕಥೆ ಓದುವಾಗ ಶುರುವಾಗುವ ನೆಗೆಟಿವ್ ಕಾಂಪ್ಲೆಕ್ಸ್ ಕೊನೆಯಲ್ಲಿ ಪಾಸಿಟಿವ್ ಆಗಿರುತ್ತದೆ. ಭರವಸೆ, ಆಶಾಭಾವ ಕಥೆಗಳಲ್ಲಿ ವ್ಯಕ್ತವಾಗುತ್ತವೆ.
ಹೃದಯ ಶಿವ ಹೊಸ ಕಥಾಸಂಕಲನ “ಸೂಪರ್ ಗಾಡ್ ಸಣ್ಣಯ್ಯ” ಕೃತಿಗೆ ಸ್ವಾಮಿ ಪೊನ್ನಾಚಿ ಮುನ್ನುಡಿ

Read More

ದುಃಖಾಂತ ಪಾತ್ರಗಳ ಬಿಕ್ಕುಗಳ ಸಂಕಲನ: ಶುಭಶ್ರೀ ಕಥಾಸಂಕಲನಕ್ಕೆ ವಿಕಾಸ ನೇಗಿಲೋಣಿ ಮುನ್ನುಡಿ

ಶುಭಶ್ರೀ ಬಳಸುವ ಭಾಷೆ ಬಹುತೇಕ ಉತ್ತರ ಕನ್ನಡದ ಕೆಳ ಸಮುದಾಯದ್ದು. ಜೊತೆಗೆ ಮಕ್ಕಳಾಗದವರ ಬಿಕ್ಕು, ಗಂಡನ ದೌರ್ಬಲ್ಯದ ನೆರಳಲ್ಲಿ ನರಳುವ ಹೆಣ್ಮಕ್ಕಳ ಬಿಕ್ಕು, ಮನೆ ತೊರೆದು ಹೋದವರ ನರಳುಗಳನ್ನೆಲ್ಲಾ ಗದ್ಗದಿತ ಕೊರಳಿನಿಂದ ಹೇಳುತ್ತಾ ಹೋಗುತ್ತಾರೆ. ಸಂಕಲನದ ಅತ್ಯಂತ ಗಾಢ ಕತೆಯೆಂದರೆ ‘ಹಗಲು ವೇಷ’. ಮನೆ ತೊರೆದು, ಅನ್ಯ ಕೋಮಿನ ಹುಡುಗನನ್ನು ಮದುವೆಯಾಗಿ, ನರಳುವ ಹೆಣ್ಮಗಳೊಬ್ಬಳ ಚಿತ್ರಣ ಇರುವ ಆ ಕತೆಯಲ್ಲಿ ಧರ್ಮ ಅಥವಾ ದ್ವೇಷದ ಸೋಂಕು ಇಲ್ಲದೇ, ಜಡ್ಜ್ ಮೆಂಟಲ್ ಕೂಡ ಆಗದಂತೆ ಹೆಣ್ಣೊಬ್ಬಳ ಅಂತಃಕರಣದಿಂದ ಆಯೇಷಾ ಅನ್ನುವ ಪಾತ್ರವನ್ನು ಕತೆಗಾರ್ತಿ ನಿರ್ವಹಿಸಿದ ಮೆಚ್ಚುವಂತಿದೆ.
ಶುಭಶ್ರೀ ಭಟ್ಟ ಹೊಸ ಕಥಾಸಂಕಲನ “ಬಿದಿಗೆ ಚಂದ್ರಮನ ಬಿಕ್ಕು” ಕೃತಿಗೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More
  • 1
  • 2

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ