Advertisement

Tag: ಕಥಾಸಂಕಲನ

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಅಪೂರ್ಣವಲ್ಲ… ಪೂರ್ಣತೆಯೆಡೆಗೆ ಸಾಗುವ ದಾರಿ

ಕೊನೆಗೌಡ ಮತ್ತು ಪ್ರೀತಿ ಎಂಬ ಕಥೆ ವಿಶಿಷ್ಟವಾದದ್ದು. ಪ್ರೀತಿ ಎನ್ನುವುದು ಕೇವಲ ಮೇಲ್ವರ್ಗದ ಸೊತ್ತಲ್ಲ, ಪ್ರೀತಿಯ ನಿಜವಾದ ರೂಪ ಕಾಣಿಸುವುದು ಸಂಸಾರ ಆರಂಭವಾದ ಮೇಲೆ ಎಂಬುದನ್ನು ಸುಂದರವಾಗಿ ತಿಳಿಸಿಕೊಡುವ ಕಥೆ. ಅನಾಥನಾಗಿದ್ದ ಕಥಾನಾಯಕ ಹೆಂಡತಿಯನ್ನೇ ಸರ್ವಸ್ವವೆಂದು ಬಗೆದು ಅವಳಿಗೆ ಪ್ರೀತಿಯನ್ನು ಧಾರೆಯೆರೆಯುವ ಪರಿ ಮನೋಜ್ಞವಾಗಿ ಚಿತ್ರಿತವಾಗಿದೆ. ವೃದ್ಧಾಪ್ಯದಲ್ಲೂ ಪ್ರೀತಿ ಬಾಡದೆ ಮಾಗುತ್ತದೆ ಎಂಬುದನ್ನು ಲೇಖಕಿ ಸಮರ್ಥವಾಗಿ ನಿರೂಪಿಸಿದ್ದಾರೆ. ಕಾಲವು ಬರುವುದು ಒಂದು ದಿನ ಎಂಬ ಕೊನೆಯ ಕಥೆ ಸಾಮಾಜಿಕ ಸುಧಾರಣೆಯನ್ನು ಮಾಡಹೋಗಿ ಬಹಿಷ್ಕಾರಕ್ಕೆ ಒಳಗಾದವನ ಕಥೆ.
ಸುಧಾ ಎಂ. ಚೊಚ್ಚಲ ಕಥಾ ಸಂಕಲನ “ಅಪೂರ್ಣವಲ್ಲ” ಕುರಿತು ಮಹಾಬಲ ಭಟ್‌ ಅವರ ಬರಹ

Read More

ನಗರ ಜೀವನದ ಬಿಕ್ಕಟ್ಟಿನ ಕತೆಗಳು…

ಮಧ್ಯಮ ವರ್ಗದ ಜನ ಚೀಟಿ ವ್ಯವಹಾರದಲ್ಲಿ ಮೋಸ ಹೋಗುವುದನ್ನು ಚಿತ್ರಿಸುವ ಕತೆ ‘ಹರಿಚಿತ್ತ’ ಆಂಧ್ರದಿಂದ ವಲಸೆ ಬಂದ ದಲಿತ ಪೆದ್ದ ಪೆಂಚಾಲಯ್ಯ, ಎಂತೆಂಥವೋ ಕೆಲಸ ಮಾಡುತ್ತಾ, ಹೋರಾಡುತ್ತಾ, ಮಗ ಪೆಂಚಾಲಯ್ಯ ನನ್ನು ಪೊಲೀಸ್ ಕೆಲಸಕ್ಕೆ ಸೇರಿಸುತ್ತಾನೆ. ರಾಜಕೀಯ ಗಲಾಟೆಯಲ್ಲಿ ಸಿಕ್ಕಿ ಹೊಡೆತ ತಿಂದು ಬಿದ್ದಾಗ, ಗಲಾಟೆ ನಿಯಂತ್ರಿಸಲು ಮಗ ಪೊಲೀಸ್ ಪೆಂಚಾಲಯ್ಯ ಬರ್ತಾನೆ. ಗಲಾಟೆಗೆ ಬಲಿಯಾಗುವವರು ಇಂತಹ ಅಮಾಯಕರೇ.. ಕೆಳ ಮಧ್ಯಮವರ್ಗದವರಿಗೆ ‘ಯಾರೂ ಕಾಯುವವರಿಲ್ಲ..’ ಎಂಬ ಸ್ಥಿತಿ.
ವಸಂತಕುಮಾರ್ ಕಲ್ಯಾಣಿ ಅವರ ಕಥಾಸಂಕಲನ “ಪರ್ಯಾಪ್ತ”ಕ್ಕೆ ಜಿಎಸ್ ಸುಶೀಲಾದೇವಿ ಆರ್ ರಾವ್ ಬರೆದ ಮುನ್ನುಡಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ