Advertisement

Tag: ಕಥಾ ಸಂಕಲನ

ಸ. ಹರೀಶ್‌ ಬರೆದ ಈ ಭಾನುವಾರದ ಕತೆ

ಎಲ್ಲವನ್ನು ಕೇಳಿಸಿಕೊಂಡಿದ್ದ ಅವಿನಾಶ್ ಡಾಕ್ಟರಿಗೆ ಕೈ ಮುಗಿದ. ಅಲ್ಲಿ ಮಾಧವಿಗೆ ಮನಸ್ಸು ತೀರಾ ತಲ್ಲಣಿಸಿ ಹೋಯಿತು. ಯಾವಾಗ ಕೇರ್ ಟೇಕರ್ ತನ್ನ ಸುತ್ತಾಟ ಮುಗಿಸಿ ಮನೆ ಒಳಗೆ ಕಾಲಿಟ್ಟಳೊ, ಅವಳಿಗೆ ಮನುಷ್ಯರ ಬಗ್ಗೆ ನಂಬಿಕೆಯೇ ಹೊರಟು ಹೋಯಿತು. ಅವಳ ಮುಖದ ಮೇಲೆ ದುಡ್ಡು ಬಿಸಾಕಿ, `ಮುಖ ತೋರಿಸಬೇಡ, ನಿನಗೆ ಪೊಲೀಸಿಗೆ ಕೊಡದೇ ಬಿಟ್ಟಿದ್ದೀನಿ, ಗೆಟ್ ಲಾಸ್ಟ್’ ಅಂತ ನರನಾಡಿ ಕಿತ್ತುಬರುವಂತೆ ಅರಚಿದಳು.
ಸ. ಹರೀಶ್‌ ಕಥಾ ಸಂಕಲನ “ಅಮ್ಮ ಅಂದ್ರೆ ಭೂಮಿ”ಯ ಶೀರ್ಷಿಕೆ ಕತೆ, ನಿಮ್ಮ ಈ ಭಾನುವಾರದ ಓದಿಗೆ

Read More

ಆಶಾ ರಘು ಬರೆದ ಈ ಭಾನುವಾರದ ಕತೆ “ನೇಪಥ್ಯ”

ನಾನು ಬಣ್ಣ ಹಚ್ತಾ, ಮೊಳೆ ಹೊಡೀತಾ, ಲೈಟು ಕಟ್ತಾ ಬೆಳೆಯತೊಡಗಿದೆ. ಹರಿದ ಒಳ ಅಂಗಿಯ ಮೇಲೆ ರಾಜಕುಮಾರನ ಗರಿಗರಿ ಉಡುಪು..! ತಲ್ಲಣಗಳಲ್ಲಿ ಕುಸಿಯುವ ಮನಸ್ಸನ್ನು ಮೀರಿ ಹೊರಗೆ ಹಾಸ್ಯೋತ್ಸಾಹದ ಸಂಭಾಷಣೆಗಳ ಹೊನಲು..! ಒಮ್ಮೊಮ್ಮೆ ಇದು ತಿರುಗುಮುರುಗೂ ಆಗುವುದುಂಟು..! ನಾಟಕವಲ್ಲವೇ..!? ಎಷ್ಟೋ ಬಾರಿ ನಾನು ವಾಸ್ತವ ಸಂಗತಿಗಳಿಗೆ ಪ್ರತಿಕ್ರಿಯಿಸಿದರೆ, ಅದು ದಿಟವಾ ಅಥವಾ ನಾಟಕ ಆಡುತ್ತಿದ್ದೇನೆಯಾ ಅಂತ ನನಗೇ ಗುಮಾನಿ ಅನ್ನಿಸುವಷ್ಟು ಅಭಿನಯ ಕಲೆ ನನಗೆ ಒಲಿಯಿತು. ನಡೆಯುತ್ತಿದ್ದವನಿಗೆ ಸೈಕಲ್ ಬಂತು.
ಆಶಾ ರಘು ಬರೆದ “ಕೆಂಪು ದಾಸವಾಳ” ಕಥಾ ಸಂಕಲನದ ಕತೆ “ನೇಪಥ್ಯ” ಈ ಭಾನುವಾರದ ಬಿಡುವಿನ ಓದಿಗೆ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ ಒಡಲ ಸಂಕಟವನ್ನು ಕಲೆಯಾಗಿಸುವುದು ಸಾಧ್ಯವಾಗಿರುವುದರಿಂದಲೇ, ಈ ಕಥೆಗಳು ಓದುಗರೊಳಗೆ ತಮ್ಮ ಕಂಪನಗಳನ್ನು ವಿಸ್ತರಿಸಿಕೊಳ್ಳುವ ಕಸುವು ಹೊಂದಿವೆ.
ಗೋವಿಂದರಾಜು ಎಂ ಕಲ್ಲೂರು ಕಥಾ ಸಂಕಲನ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ