Advertisement

Tag: ಕನ್ನಡದ ಕಥೆ

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ.
ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

Read More

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕತೆ

ಭಾಳ ಸಿಹಿಸುದ್ದಿಯೇನೂ ಅಲ್ಲ. ಆದರೂ, ಕಹಿಯಂತೂ ಅಲ್ಲಲ. ತೇರಿಗೆ ಹೂವುಹಣ್ಣು ಹಾಕವರಿದ್ರ ಇವತ್ತೇ ತಗೊಂಡು ತಯಾರಾಗ್ರಿ. ನಾಳೆ ಶಿಗತಾವೋ ಇಲ್ಲೋ. ಭಯಂಕರ ತುಟ್ಟಿನು ಇರತಾವು. ಬಿಸಿಲು ಏರಾಕ ಹೊಂಟೈತಿ. ಜರಾ ಚಹಾ ಕುಡೀತಿರೇನು ನೋಡ್ರಿ, ಹೇಳುತ್ತ ತಾನೂ ಹಗುರಾದಂತೆ ಬೋಲ್ಡಿ ಬಾಬಾ ಕೊಳವೆಗೆ ತಂಬಾಕು ತುಂಬಿ ಕಿಡಿ ಹಚ್ಚಿದ. ರುಕುಮವ್ವ, ಚಂದ್ರವ್ವಳನ್ನು ಕೈಯಿಂದ ಎಳೆದುಕೊಳ್ಳುತ್ತ ಬೆನ್ನು ಸವರಿ, ಸಮಾಧಾನ ಆತಿಲ್ಲವಾ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕಥೆ

Read More

ಶಿವಕುಮಾರ ಚನ್ನಪ್ಪನವರ ಬರೆದ ಈ ಭಾನುವಾರದ ಕಥೆ

ಪೀರ್ಯಾಗ ಮತ್ತ ಹುರುಪೆದ್ದು ಯೋಳ್ನೆ ಪತ್ರ ಬರದಾಕಿದ್ದ. ಮ್ಯಾಲ ಒಂದ್ಲೈನು ಸರ್ಕಾರಿ ಕೇಲ್ಸ ದೇವ್ರ ಕೇಲ್ಸ ಅಂತಾ ಬರ್ದು ಕೆಳ್ಗ ತಮ್ಮ ಕಂಪ್ನಿ ಮಂಚಪ್ಪ ಮತ್ತ ಸರ್ಕಾರಿ ಲಂಚಪ್ಪನ ಇತಿಹಾಸನ ಬರ್ದಿದ್ದ. ಜೊತಿಗಿ ಅದ್ಕ ಸಂಭಂದಪಟ್ಟಂಗ ಎಕ್ಸೇಲ್ ಸಿಟ್ ಅಟ್ಯಾಚ್ ಮಾಡಿದ್ದ. ನಿನ್ನೆ ಅದು ಕಮೀಷನರ್ರ ಕೈಗಿ ಸಿಕ್ಕು ಲಂಚ್ಮಂಚ್ಚಪ್ಪರ್ನ ಸಿಕ್ಕ ಸಿಕ್ಕಾಂಗ ಉಗದಿದ್ರನ್ನಾದು ಸಹ ಗೊಣೇಶ ತುಂಬು ಹೃದಯದಿಂದ್ಲೇ ವಿವರ್ಸಿ, ಕುಷಿ ಪಟ್ಟಿದ್ದ. ಅಂವ್ಗ ಲೆರ್ಟ ಬರಿತಾರಂತ ಗೊತ್ತು ಆದ್ರ ಇವ್ನ ಬರಿತಾನಂತ ಮಾತ್ರ ಗೊತ್ತಿರ್ಲಿಲ್ಲ. ಪೀರ್ಯಾನೂ ಹೇಳಿದ್ದಿಲ್ಲ.
ಶಿವಕುಮಾರ ಚನ್ನಪ್ಪನವರ ಬರೆದ ಕಥೆ “ಲಂಚಪ್ಗೀರಿ ಲಂಚ್ಮಂಚ್ಚಪ್ಪೋರ ಕತಿ..”

Read More

ಡಾ. ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ತುಸು ಹೊತ್ತಿನ ಬಳಿಕ ರಾತ್ರಿಯ ನೀರವವನ್ನು ಭೇದಿಸಿಕೊಂಡು ‘ಧಡ್’ ಎಂದು ಏನೋ ಬಿದ್ದ ಸದ್ದು. ಬೆನ್ನಿಗೇ ಕ್ಷೀಣವಾಗಿ, ಎದೆಯನ್ನೇ ಕೊರೆಯುವಂಥ ಬಿಕ್ಕಳಿಕೆ ಕೇಳಿಸಿದಾಗ ದಡಕ್ಕನೆ ಎದ್ದು ಕುಳಿತೆ. ಏನೂ ಅರ್ಥವಾಗಲಿಲ್ಲ. ಕಾಲುಗಳನ್ನು ನೆಲಕ್ಕಪ್ಪಳಿಸುತ್ತಾ ಹೊರಗಿಳಿದು ನಡೆಯುತ್ತಿರುವ ಅಣ್ಣನನ್ನು ಕಂಡಾಗ ಮನೆಯಲ್ಲಿ ಬೀಡುಬಿಟ್ಟಿದ್ದ ವಿಷಣ್ಣ ಭಾವ ನನ್ನೊಳಗೂ ತುಂಬತೊಡಗಿತು. ಹೊಸ ರವಿಕೆಯನ್ನು ಕಂಡ ಅಣ್ಣ ‘ಯಾರು ತಂದ್ಕೊಟ್ಟದ್ದು?’ ಎಂದು ಕೇಳಿರಬೇಕು. ಡಾ. ಸುಭಾಷ್‌ ಪಟ್ಟಾಜೆ ಬರೆದ ಕತೆ “ಗತಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ