Advertisement

Tag: ಕನ್ನಡ ಸಾಹಿತ್ಯ

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ತಿರುಮಲೇಶರ ಸೀಕ್ರೆಟ್ ಸಂಚಿ

ನೆನ್ನೆ ಬೆಳಿಗ್ಗೆ ಕವಿ-ಕಥೆಗಾರ, ಭಾಷಾಶಾಸ್ತ್ರಜ್ಞ ಕೆ.ವಿ.ತಿರುಮಲೇಶ್ ತೀರಿಹೋದರು. ಇಳಿವಯಸ್ಸಿನ ಅನಾರೋಗ್ಯದ ನೆವದಲ್ಲಿ ಈ ಸೂಕ್ಷ್ಮ ಸ್ವಭಾವದ ಆರ್ದ್ರಜೀವಿ ನಮ್ಮಿಂದ ಭೌತಿಕವಾಗಿ ದೂರಹೋದರು. ಧಾವಿಸಿದರು.. ಆದರೆ ನಿಧಾನವಾಗಿ. ಅವರು ಹೋದ ಮೇಲೆ ಅವರು ಧಾವಿಸಿದರು ಎಂದು ನಮಗನ್ನಿಸುವಂತೆ ನಮ್ಮನ್ನು ಬಿಟ್ಟು ಹೋದರು.
ಕೆ.ವಿ. ತಿರುಮಲೇಶ್‌ ಅವರ ವ್ಯಕ್ತಿತ್ವ ಹಾಗೂ ಬರಹದ ಕುರಿತು ಬರೆದಿದ್ದಾರೆ ಸಿಂಧೂರಾವ್‌ ಟಿ.

Read More

ಸಮೃದ್ಧ ಜೀವನಾನುಭವವೇ ಸಾಹಿತ್ಯದ ಜೀವ: ನಾ. ಮೊಗಸಾಲೆ

ತಲೆಮಾರು ಎನ್ನುವುದು ಮುಂದುವರಿಯುತ್ತಾ ಹೋದ ಹಾಗೆ ಕೌಶಲ್ಯ ಎನ್ನುವುದು ಹಿಂದಿಗಿಂತ ಹೆಚ್ಚು ಶಕ್ತ ಅಥವಾ ಹೆಚ್ಚೋ ಎಂಬಂತೆ ಮುಂದುವರಿಯುವುದು ನಮ್ಮ ಅನುಭವ ಅಥವಾ ಪ್ರಕೃತಿ ನಿಯಮ. ಪ್ರತಿಭೆ, ಕೌಶಲ್ಯ, ಮತ್ತು ಚಿಂತನೆಗಳಲ್ಲಿ ನಾವು ನಮ್ಮ ಹಿರಿಯರಿಗಿಂತ ಮುಂದುವರಿದಿದ್ದೇವೆ ಎನ್ನುವುದನ್ನು ನಾನೂ ನೀವೂ ಒಪ್ಪಿಕೊಳ್ಳುವುದಾದರೆ ನಮ್ಮ ಮುಂದಿನ ಪೀಳಿಗೆಯೂ ಖಂಡಿತ ನಮಗಿಂತ ಮುಂದಿರುತ್ತದೆ ಎನ್ನುವುದನ್ನು ಒಪ್ಪಬೇಕು.
ಡಾ. ನಾ. ಮೊಗಸಾಲೆಯವರೊಟ್ಟಿಗೆ ನಡೆಸಿದ ಮಾತುಕತೆಯನ್ನು ಹಂಚಿಕೊಂಡಿದ್ದಾರೆ ಡಾ. ಸುಭಾಷ್ ಪಟ್ಟಾಜೆ

Read More

ಇವತ್ತಿನಿಂದ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು”

ಒಂದು ಭಾಷಣದ ಶೈಲಿಯಾಗಿ ಕೂಡ ಅಲವತ್ತುಕೊಳ್ಳುವಿಕೆ ಪರಿಣಾಮಕಾರಿಯಾದದ್ದು. ನೀವು ಸುಮ್ಮನೆ ಬೈದು ಭಾಷಣ ಮಾಡಿದರೆ, ವಿರೋಧಪಕ್ಷದ ನಾಯಕರಾಗಲು ಸಾಧ್ಯವಾಗುವುದಿಲ್ಲ. ದೇಶದ ಭವಿಷ್ಯ ಕುರಿತು, ಆಳುವಪಕ್ಷವನ್ನು ಕುರಿತು ಭೀಕರ ಭವಿಷ್ಯವನ್ನು ನುಡಿಯಬೇಕು.
ಕತೆಗಾರ ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಪ್ರಬಂಧಗಳ ಸರಣಿ

Read More

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ