Advertisement

Tag: ಕನ್ನಡ ಸಾಹಿತ್ಯ

ನಾಗರೇಖಾ ಗಾಂವಕರ ಬರೆದ ಈ ಭಾನುವಾರದ ಕತೆ “ಸೋಡಿನಾಟ”

ನೌಕರಿ ಸೇರಿದ ಹೊಸದರಲ್ಲಿ ಅಪ್ಪನ ಉಮೇದಿಗೆ ಕಡಿಮೆ ಇರಲಿಲ್ಲ. ಸಾಯುವವರೆಗೂ ಮನೆಯ ಜವಾಬ್ದಾರಿ ನಿಭಾಯಿಸುತ್ತಾ ಬದುಕಿದ ಜೀವ ತನ್ನಪ್ಪ. ಸಾಯುವ ಹಿಂದಿನ ದಿನವೂ “ಅಪ್ಪಾ!! ಸುಸ್ತಾಗಿದೆ ನಿಂಗೆ. ಮನಿಕಾ” ಎಂದು ಹಾಸಿಗೆ ಜಾಡಿಸಿ ತಲೆದಿಂಬು ಸರಿ ಮಾಡಿಕೊಟ್ಟರೆ “ಮಾಬ್ಲೂ ಮಲಗುಲಾ ಮನೇ!! ಆ ಹಾಳೆ ಕಟ್ಟು ತಕಂಡ ಬಾ!!” ಎಂದು ತಮ್ಮ ಲೆಕ್ಕದ ಪುಸ್ತಕ ತರಿಸಿಕೊಂಡು ಆ ವರ್ಷದ ಖರ್ಚು ವೆಚ್ಚ ಬರೆದುದನ್ನು ಮತ್ತೊಮ್ಮೆ ಚೆಕ್ ಮಾಡಿದ್ದರು. “ಮಾಬ್ಲು ಗಿಡವಕ್ಕೆ ಈ ಸಲ ಗೊಬ್ಬರ ಹಾಕಬೇಕಾಗತ. ಯಾರಿಗರೂ ಹೇಳ.
ನಾಗರೇಖಾ ಗಾಂವಕರ ಬರೆದ ಕತೆ “ಸೋಡಿನಾಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು”

ನೆತ್ತಿಯ ಮೇಲಿನ ಕಣ್ಣ ಸ್ವಾಮೀಜಿ ಈಗ ಸಮಾಧಾನದಲ್ಲಿದ್ದು ಬೆವರುವುದನ್ನು ನಿಲ್ಲಿಸಿದ್ದರು. ಉಂಗುರಗಳನ್ನು ಹಾಕಿದ್ದ ಹಿತ್ತಾಳೆ ಚೊಂಬಿನ ನೀರನ್ನು ಇಬ್ಬರಿಗೂ ತೀರ್ಥದಂತೆ ಕೊಟ್ಟು ತಾವೂ ಬಲಗೈ ಗೆ ಬಗ್ಗಿಸಿಕೊಂಡರು. ಸ್ವಾಮೀಜಿ ಏನು ಮಾಡುತ್ತಾರೋ ಅದನ್ನೇ ಮಾಡಲು ತಯಾರಾದ ದಂಪತಿಗಳು ಅವರನ್ನೇ ನೋಡುತ್ತಿದ್ದರು. ಸ್ವಾಮೀಜಿ ನೀರಿದ್ದ ಕೈಯನ್ನು ಎರಡೂ ಕಣ್ಣುಗಳಿಗೆ ಒತ್ತಿಕೊಂಡು ಗಟಕ್ಕೆಂದು ಆ ನೀರನ್ನು ಕುಡಿದರು. ನಂತರ ಅಂಗೈಯನ್ನು ಮುಂಡಾಸಿನ ಬಳಿ ತಗೊಂಡುಹೋದರು.
ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು” ನಿಮ್ಮ ಓದಿಗೆ

Read More

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಕ್ರಮ ತಪ್ಪಿದ ನಗರ”

“ನೀವು ಎಂದಾದರೂ ಆಕಾಶದ ನಕ್ಷತ್ರಗಳನ್ನು ಗಮನಿಸಿದ್ದೀರಾ?” ಅವನು ಕೇಳಿದ. ಅವನ ಧ್ವನಿ ಹಳೆಯ ರೇಡಿಯೋ ಸ್ಟೇಷನ್‌ನಿಂದ ಬರುವ ಸಿಗ್ನಲ್‌ನಂತೆ ಇತ್ತು. ಅದಕುತ್ತರವಾಗಿ “ಹೌದು, ನೋಡಿದ್ದೇನೆ.” ಎಂದೆ. “ಆಕಾಶದಲ್ಲಿ ನಕ್ಷತ್ರಗಳು ಸುಮ್ಮನೆ ಬಿದ್ದಿಲ್ಲ” ಅವನು ಹೇಳುತ್ತಾ ಒಂದು ನೋಟಿನ ಮೇಲೆ ಒಂದು ನಾಣ್ಯವನ್ನು ಇಟ್ಟ. “ಅವುಗಳಿಗೊಂದು ಕ್ರಮವಿದೆ. ಆ ಕ್ರಮ ತಪ್ಪಿದರೆ ಈ ಜಗತ್ತು ಕುಸಿದು ಬೀಳುತ್ತದೆ. ಈ ಸ್ಕೈವಾಕ್ ಕೆಳಗೆ ಹರಿಯುವ ಸಾವಿರಾರು ಕಾರುಗಳು, ಈ ದೊಡ್ಡ ದೊಡ್ಡ ಬಿಲ್ಡಿಂಗ್‌ಗಳು, ನಿಮ್ಮ ಕೈಯಲ್ಲಿರುವ ಈ ಕಾಫಿ ಕಪ್… ಎಲ್ಲವೂ ಒಂದು ನಿಖರವಾದ ಜಾಗದಲ್ಲಿ ಇರಬೇಕು.”
ಕಾರ್ತಿಕ್ ಕೃಷ್ಣ ಬರೆದ ಕತೆ “ಕ್ರಮ ತಪ್ಪಿದ ನಗರ” ನಿಮ್ಮಈ ಭಾನುವಾರದ ಬಿಡುವಿನ ಓದಿಗೆ

Read More

ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಸಾಂಗತ್ಯ”

ಯಶೋದಳಿಗೆ ಮುಂದೆ ಮಾತನಾಡಲು ಆಗಲಿಲ್ಲ. ಅವಳು ಬಿಕ್ಕಿದಳು. ಅವಳ ಕಣ್ಣಿನಿಂದ ಒಂದೇಸಮನೆ ನೀರು ಇಳಿಯುತ್ತಿತ್ತು. ಅಷ್ಟರಲ್ಲಿ ಮಗುವನ್ನು ಕರೆದುಕೊಂಡು ಮಾದೇವಿ ಬಂದಳು. ಮಗುವನ್ನು ಎತ್ತಿಕೊಂಡ ಯಶೋದ ಮಗುವನ್ನು ಹೆಗಲಿಗೆ ಹಾಕಿಕೊಂಡು ಎದ್ದು ನಿಂತಳು. ಅವಳನ್ನು ಒಳಗೆ ಕರೆದುಕೊಂಡು ಹೋಗುವಂತೆ ಪ್ರಕಾಶ ಮಾದೇವಿಗೆ ಸೂಚಿಸಿದ. ಕೀಕೊಟ್ಟ ಬೊಂಬೆಯಂತೆ ಯಶೋದ ಮಾದೇವಿಯನ್ನು ಅನುಸರಿಸಿದಳು. ಅವಳಿಗೆ ಯಾವುದೋ ಆಘಾತವಾಗಿರಬೇಕು ಎಂದು ಪ್ರಕಾಶ ತರ್ಕಿಸಿದ. ನಿಧಾನವಾಗಿ ಅದನ್ನು ಹೊರತೆಗೆಯಬೇಕು. ಒಂದೆರಡು ದಿನದವರೆಗ ಕಾಯಬೇಕು.
ಚಂದ್ರಮತಿ ಸೋಂದಾ ಬರೆದ ಕತೆ “ಸಾಂಗತ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ