Advertisement

Tag: ಕನ್ನಡ ಸಾಹಿತ್ಯ

ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ

“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

Read More

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ