Advertisement

Tag: ಕವನ

ಸಮಕಾಲೀನ ತಲ್ಲಣಗಳಿಗೆ ಹೆಗಲುಕೊಡುವ ಕವಿತೆಗಳು

ಮನುಷ್ಯ ಮಾಗಿದಷ್ಟೂ ಅವನ ಬರಹ ಪಕ್ವವಾಗುತ್ತದೆ ಎಂಬ ಮಾತು ಕೆಲವರಿಗೆ ಅಪವಾದವಾಗುತ್ತದೆ. ಸಮಾಜದ ತಲ್ಲಣಗಳಿಗೆ ಸ್ಪಂದಿಸುವ ಕವಿ ಮತ್ತು ಆತನ ಬರವಣಿಗೆಗಳು ಇಂಥ ದುರಿತ ಕಾಲಕ್ಕೆ ಖಂಡಿತ ಅವಶ್ಯಕತೆ ಇದೆ. ವಿಶಾಲ್ ಅವರ ಬರಹದ ನಡಿಗೆಯೂ ಸಮಸಮಾಜದ ನಿರ್ಮಿತಿಯ ಕಡೆಗೇ ಇದೆ. ಒಂದೊಂದು ಕವಿತೆಯಲ್ಲೂ ಅವರೇ ಕಂಡು, ಅನುಭವಿಸಿದ ನೋವುಗಳನ್ನು ಕಾವ್ಯದ ಮೂಲಕ ಹೊರಹಾಕಿದ್ದಾರೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ವಿಶಾಲ್‌ ಮ್ಯಾಸರ್‌ ಕವನ ಸಂಕಲನ ‘ಬಟ್ಟೆಗಂಟಿದ ಬೆಂಕಿ’ಯ ಕುರಿತ ಬರಹ ಇಲ್ಲಿದೆ

Read More

ಮಾನವೀಯತೆಗಾಗಿಯೇ ಜೀವ ತೇದವರ ನೆನೆಯುತ್ತಾ…

‘ವರ್ಣ’ ಅಪ್ಪಟ ದಲಿತ ಜಗತ್ತಿನ ಪ್ರಾತಿನಿಧಿಕ ಕವಿತೆ. ಕವಿ ಸುಮ್ಮನೆ ಎಲೆಮರೆಯ ಕಾಯಿಯಂತಿದ್ದರೂ ಬಿಡದೆ ಪ್ರಚೋದಿಸಿ ಅಖಾಡಕ್ಕೆ ಕರೆದು ಕೊನೆಗೆ ಮಣ್ಣುಮುಕ್ಕುವ ಉಢಾಳರಿಗೆ ಎಚ್ಚರಿಕೆಯಂತಿದೆ ಈ ಕವಿತೆ. “ಹಸಿರು, ಕೆಂಪು, ಕಪ್ಪು, ಬಣ್ಣಗಳೊಳಗೆ ಕರಗಿಹೋದ ದಲಿತರ ನೆತ್ತರು ಮತ್ತು ಬೆವರು ಉಳ್ಳವರನ್ನು ಉಸಿರುಗಟ್ಟಿ ಸಾಯಿಸಿದರೆ ಆಶ್ಚರ್ಯಪಡಬೇಕಿಲ್ಲ”. ‘ಹಸಿವು’ ಕವಿತೆ ಅವ್ವನ ಉದಾರತನವನ್ನೂ ಆಕೆಯ ಸಂಸ್ಕಾರವನ್ನೂ ದರ್ಶಿಸಿ ದಂಗುಬಡಿಸುತ್ತದೆ. ಹಸಿವು ಎಂದು ಬಂದವರಿಗೆ ತನ್ನ ಪಾಲಿನ ತಟ್ಟೆಯಲ್ಲಿದ್ದ ಹಿಟ್ಟನ್ನು ಕೊಟ್ಟುಬಿಡುತ್ತಾಳೆ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ

Read More

ಕಾವ್ಯಮಾಲೆಯ ಕುಸುಮ: ಯಾಂವ ನನ್ನೆ ಕೇಳಾಂವ?

“ತೊಟ್ಟಿಲ ಕೂಸು ಆಡತಿರಲಿ
ತಾಯಿ ಜೋಗುಳ ಹಾಡತಿರಲಿ
ಹಕ್ಕಿದನಿಗೆ ದನಿಗೂಡಿಸಿದರು
ನಾಯಾಕ ನನ್ಹಾಡ ಹಾಡಲಿ?
ಯಾಂವ ನನ್ನ ಕೇಳಾಂವ! ॥೨॥”- ಕಾವ್ಯಮಾಲೆಯ ಕುಸುಮಯಲ್ಲಿ ಅರ್ಚಿಕ ವೆಂಕಟೇಶರು ಬರೆದ ಕವಿತೆ “ಯಾಂವ ನನ್ನೆ ಕೇಳಾಂವ?”

Read More

ಡುಂಡಿರಾಜ್ ಪುಸ್ತಕದ ಹನಿಗಳ ಕಂಪು

‘ಹನಿಗವನ ಅಂದರೇನು? ಹಿಡಿಯಲ್ಲಿ ಇಡಿ
ಅದರ ದೇಹ ಚಿಕ್ಕದು, ಆತ್ಮ ಕಿಡಿನುಡಿ’ ಎಂಬ ಸಾಲುಗಳಂತೆ  ಸಾಮಾನ್ಯವಾಗಿ ಹನಿಗವನಗಳು ಹೆಚ್ಚಾಗಿ ಏಳು ಅಥವಾ ಎಂಟು ಸಾಲುಗಳನ್ನು ಮೀರುವುದಿಲ್ಲ. ಅದಕ್ಕಿಂತ ಉದ್ದವಾದ ಕವನಗಳನ್ನು ಹನಿಗವನ ಗಳೆಂದು ಕರೆದರೆ ತಪ್ಪಾಗುತ್ತದೆ. ಏಕೆಂದರೆ ಹನಿಗವನಗಳ ಪ್ರಧಾನ ಲಕ್ಷಣವೆ ಸಂಕ್ಷಿಪ್ತತೆ. ಗ್ರೀಕ್ ಮತ್ತು ಲ್ಯಾಟಿನ್ ಭಾಷೆಯಿಂದ ಇಂಗ್ಲಿಷ್‍ಗೆ ಬಂದ ಕಿರುಗವನದ ಒಂದು ಶೈಲಿ ಎಪಿಗ್ರಾಂ. ಇದು ಕನ್ನಡದ ಹನಿಗವನವನ್ನು ಹೋಲುತ್ತದೆ.  ಏನೇ ಆಗಲಿ, ಆಕಾರ ಸಾಧ್ಯವಾದಷ್ಟು ಚಿಕ್ಕದಾಗಿರುವುದು ಮುಖ್ಯ. ಚುಟುಕು ಕವಿ ಡುಂಡಿರಾಜ್‌ ಬರೆದ “ಹನಿಗವನ; ಏನು? ಏಕೆ? ಹೇಗೆ?” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ