Advertisement

Tag: ಕಾದಂಬರಿ

‘ಕಾಲಾಯಾತಸ್ಮೈ ನಮಃ’: ಕೆ ಸತ್ಯನಾರಾಯಣ ಕಾದಂಬರಿಯ ಕುರಿತು ಸಿ ಬಿ ಶೈಲಾ ಜಯಕುಮಾರ್ ಬರಹ

ಮಕ್ಕಳಿಗೆ ಯಾವ ಹಂತದಲ್ಲಿ ತಾಯಿ ತಂದೆಯರು ಬೇಕೆನಿಸುವುದಿಲ್ಲ ಅಥವಾ ಸಾಕೆನಿಸುತ್ತಾರೆ? ಎಂಬ ಗೊಂದಲದ ಆದರೆ ಪ್ರಸ್ತುತ ಪ್ರಶ್ನೆಯೂ ಇಲ್ಲಿದೆ! ನಮ್ಮ ತಲೆಮಾರಿನವರು ತಂದೆ ತಾಯಿಯರ ಮಾನಸಿಕ ಜಗತ್ತಿನಿಂದ ಕ್ರಮೇಣ ದೂರವಾದರೆ, ಇಂದಿನವರದು ಧಿಡೀರ್ ದೂರವಾಗುವಿಕೆ! ಭಾವನೆಗಳ ಘರ್ಷಣೆ! ಕೋಚಿಂಗ್ ಸೆಂಟರಿನಲ್ಲಿ ಡೆಪ್ಯೂಟಿ ಕರೆಸ್ಪಾಂಡೆಂಟ್ ಆಗಿದ್ದ ಮೇಲ್ ಮಧ್ಯಮ ವರ್ಗದ ರಂಗನಾಥ್ ಮತ್ತು ಶಿಕ್ಷಕಿ ಸುಧಾ ದಂಪತಿಗಳ ಮಕ್ಕಳು ವಿಕ್ರಮ್ ಹಾಗೂ ಪ್ರಾರ್ಥನಾ.
ಕೆ ಸತ್ಯನಾರಾಯಣ ಕಾದಂಬರಿ “ಕಾಲಜಿಂಕೆ”ಯ ಕುರಿತು ಸಿ ಬಿ ಶೈಲಾ ಜಯಕುಮಾರ್ ಬರಹ

Read More

ರಾಜ್ಕುಮಾರ್ ಅಂದ್ರ ಏನಂದ್ಕಂಡೆ?: ಎಂ. ಜವರಾಜ್‌ ಹೊಸ ಕಾದಂಬರಿಯ ಆಯ್ದ ಭಾಗ

ಪಂಚಾಯ್ತಿ ಆಫೀಸ್ ಮಗ್ಗುಲು ಬೀದಿಲಿದ್ದ ಕುಂಟ ಸಿದ್ದಪ್ಪನ ಮನೆಯ ಅಂಗಳದಲ್ಲಿ ಒಂದಷ್ಟು ಜನ ಮಾತಾಡ್ತ ನಿಂತಿದ್ದರು. ಅಲ್ಲಿಗೆ ನಾಕಾರು ಪೇಪರು ಬರುತ್ತಿದ್ದವು. ಕುಂಟ ಸಿದ್ದಪ್ಪ ಬಿಳಿಪಂಚೆ ಬಿಳಿ ಶರ್ಟು ಹಾಕೊಂಡು ಕ್ರಾಪ್ ತಲೆ ಬಾಚ್ಕೊಂಡು ಕಾಲಿನ ಮೇಲೆ ಕಾಲು ಹಾಕಿಕೊಂಡು “ಇದು ಗೋಕಾಕ್ ಚಳುವಳಿ ಅಂತ. ಅವ್ರೊಬ್ಬ ದೊಡ್ ಕವಿ. ಅವ್ರು ಸರ್ಕಾರಕ್ಕೆ ಬರ್ದ ಪತ್ರನ ಇಟ್ಕೊಂಡು ನಡಿತಿರ ಹೋರಾಟ ಇದು. ಏಯ್‌ ನೋಡ್ರಪ್ಪ, ಬಾಯಿಲ್ಲಿ” ಅಂತ ಕರೆದು, “ನೀನು ಐದ್ನೆ ಕ್ಲಾಸಾ? ನಾಕ್ನೆ ಕ್ಲಾಸಾ?” ಅಂದ. ನಾನು, ʼಹುʼ” ಎನ್ನುವವನಂತೆ ತಲೆದೂಗಿದೆ. “ಹೌದಾ? ಹೋಗು, ಇನ್ಮೇಲ ಇಂಗ್ಲಿಸ್ ಗಿಂಗ್ಲಿಸ್ ಓದಂಗಿಲ್ಲ, ಬರೀ ಕನ್ನಡ. ನಿನ್ತವು ಇಂಗ್ಲಿಸ್ ಬುಕ್ಸ್ ಇದ್ರ ತೂದು ಬಿಸಾಕಿ ಕನ್ನಡ ಇಟ್ಗ” ಅಂದ. ಅಲ್ಲೊಬ್ಬ ಕೇಳ್ತಿದ್ದವನು “ಇದ್ಕ ರಾಜ್ಕುಮಾರ್ ಯಾಕ್ ಮದ್ಯಕ್ ಬಂದ?” ಅಂತ ಕೇಳಿದ.
ಎಂ. ಜವರಾಜ್‌ ಹೊಸ ಕಾದಂಬರಿ “ಪೋಸ್ಟ್‌ಮ್ಯಾನ್‌ ಗಂಗಣ್ಣ” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಕರ್ವಾಲೋ ಮರು ಓದು, ಒಂದು ಧ್ಯಾನ: ದೇವಿಕಾ ನಾಗೇಶ್‌ ಬರಹ

ಇರುವೆಯಿಂದ ರಕ್ಷಿಸಿಕೊಳ್ಳಲು ಆ ಪ್ರಾಣಿ ಇದ್ದಕ್ಕಿದ್ದಂತೆ ಪಕ್ಕದ ದೊಡ್ಡ ಮರಕ್ಕೆ ಹಾರಿ ಮರ ಕೂತು ತನ್ನ ದೇಹಕ್ಕೆ ಅಂಟಿಕೊಂಡಿದ್ದ ಕೆಂಪಿರುವೆಗಳನ್ನು ತಿನ್ನತೊಡಗಿತು. ಇದು ಕಂಡು ಆಶ್ಚರ್ಯ ಚಕಿತರಾದ ಲೇಖಕರು ಹಾರೋ ಓತಿಕ್ಯಾತ ಇದು ಎಂದು ಖಾತ್ರಿಯಾದ ಖುಷಿಯಲ್ಲಿ ತನ್ನ ತಂಡದವರನ್ನು ಕೂಗಿ ಕರೆದರು. ಆದರೆ ಹಾರುವ ಓತಿಕ್ಯಾತ ಇದ್ದಲ್ಲಿ ನಿಲ್ಲುತ್ತದೆಯೇ? ಲೇಖಕರು ಅದನ್ನೇ ತದೇಕ ಚಿತ್ತರಾಗಿ ಕಣ್ಣಲ್ಲೇ ಹಿಂಬಾಲಿಸುತ್ತ ತಾವು ಕಂಡ ಈ ಅದ್ಭುತ ಸರೀಸೃಪವನ್ನು ತನ್ನ ತಂಡದವರಿಗೆ ಪರಿಚಯಿಸುವ ಆತುರದಲ್ಲಿದ್ದರು…
ಪೂರ್ಣಚಂದ್ರ ತೇಜಸ್ವಿಯವರ ಪ್ರಮುಖ ಕಾದಂಬರಿ “ಕರ್ವಾಲೋ”ದ ಮರು ಓದು, ದೇವಿಕಾ ನಾಗೇಶ್ ಬರಹ

Read More

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ