Advertisement

Tag: ಕಾದಂಬರಿ

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು

Read More

ಇನ್ನು ಮೇಲೆ ನಾವು ಮೂವರೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೋಮಲ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೆಲ್ವಿ ತನ್ನ ಅತ್ತೆ ಕನಕಳಿಗೆ ಎಲ್ಲವನ್ನೂ ವಿವರಿಸಿ ಹೇಳಿದಳು. ಕನಕ ತನ್ನ ತವರೂರಿಗೆ ತನ್ನ ಮೊಮ್ಮಗಳನ್ನು ಕೊಡುತ್ತಿರುವುದಕ್ಕೆ ಸಂತೋಷವಾಗಿ ಹುಡುಗ ಕೂಡ ಒಳ್ಳೆಯವನು ಎಂದು ಹೇಳಿದಳು. ಅದೇ ಮಾತುಗಳನ್ನು ಮತ್ತೆ ಸೆಲ್ವಿ, ಮಣಿ ಜೊತೆಗೆ ಕನಕಳ ಮುಂದೆ ಇನ್ನೊಂದೆರಡು ಸಲ ಮಾತನಾಡಿದ ಮೇಲೆ ಅಂತಿಮವಾಗಿ ಕೋಮಲಳನ್ನು ಆರ್ಮುಗಮ್ ಕರೆದುಕೊಂಡುಬಂದಿದ್ದ ಯುವಕ ಸಂತೋಷ್‌ಗೆ ಕೊಟ್ಟು ಮದುವೆ ಮಾಡುವುದಾಗಿ ತೀರ್ಮಾನ ತೆಗೆದುಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ