Advertisement

Tag: ಕಾದಂಬರಿ

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು

Read More

ಇನ್ನು ಮೇಲೆ ನಾವು ಮೂವರೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೋಮಲ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೆಲ್ವಿ ತನ್ನ ಅತ್ತೆ ಕನಕಳಿಗೆ ಎಲ್ಲವನ್ನೂ ವಿವರಿಸಿ ಹೇಳಿದಳು. ಕನಕ ತನ್ನ ತವರೂರಿಗೆ ತನ್ನ ಮೊಮ್ಮಗಳನ್ನು ಕೊಡುತ್ತಿರುವುದಕ್ಕೆ ಸಂತೋಷವಾಗಿ ಹುಡುಗ ಕೂಡ ಒಳ್ಳೆಯವನು ಎಂದು ಹೇಳಿದಳು. ಅದೇ ಮಾತುಗಳನ್ನು ಮತ್ತೆ ಸೆಲ್ವಿ, ಮಣಿ ಜೊತೆಗೆ ಕನಕಳ ಮುಂದೆ ಇನ್ನೊಂದೆರಡು ಸಲ ಮಾತನಾಡಿದ ಮೇಲೆ ಅಂತಿಮವಾಗಿ ಕೋಮಲಳನ್ನು ಆರ್ಮುಗಮ್ ಕರೆದುಕೊಂಡುಬಂದಿದ್ದ ಯುವಕ ಸಂತೋಷ್‌ಗೆ ಕೊಟ್ಟು ಮದುವೆ ಮಾಡುವುದಾಗಿ ತೀರ್ಮಾನ ತೆಗೆದುಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತನೆಯ ಕಂತು ನಿಮ್ಮ ಓದಿಗೆ

Read More

ಆರಕ್ಕೇರದ ಮೂರಕ್ಕಿಳಿಯದ ಬಡವರ ಬದುಕು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿದ್ದ ಮಣಿ, “ಸರ್ ಅವರೆಲ್ಲರ ಹೆಸರುಗಳು ಏನೇನು ಅಂತ ಗೊತ್ತ ಸರ್?” ಎಂದ. ಲೋಗನಾಥನ್, “ಗೊತ್ತಿಲ್ಲ” ಎಂದ. ಮಣಿ “ಕರ್ಣನ್, ಧರ್ಮರಾಯನ್, ಭೀಮನ್, ಅರ್ಜುನನ್, ನಖುಲನ್ ಮತ್ತು ಸಹದೇವನ್” ಎನ್ನುತ್ತಿದ್ದಂತೆ, ಲೋಗನಾಥನ್ “ಇನ್ನೂ ಮೂವರ ಹೆಸರು?” ಕೇಳಿದರು. ಗೋವಿಂದ, “ಮೊದಲ ಇಬ್ಬರು ಸತ್ತೋದರಂತೆ ಸರ್. ಐದು ಜನ ಗಂಡು ಮಕ್ಕಳಾದ ಮೇಲೆ ನಾನು ಹುಟ್ಟಿ, ನನಗೆ ಗೋವಿಂದಾ ಅಂತ ಹೆಸರು ಇಟ್ಟ ಮೇಲೆ ನಮ್ಮಮ್ಮನಿಗೆ ಮಕ್ಕಳಾಗುವುದು ನಿಂತೋಯಿತಂತೆ” ಎಂದ ಗೋವಿಂದನೆ ಬಿದ್ದೂಬಿದ್ದು ನಕ್ಕ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ