Advertisement

Tag: ಕಾದಂಬರಿ

ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅಯ್ಯಪ್ಪ ಮತ್ತೆ ಹೊರಕ್ಕೆ ಬಂದು ಕಲ್ಲು ಬಂಡೆಯ ಮೇಲೆ ಕುಳಿತುಕೊಂಡು ಅಂಗೈಯಿಂದ ಜೋರಾಗಿ ಕಲ್ಲು ಬಂಡೆಗೆ ಹೊಡೆದು ಕೈಕೈ ಹಿಸುಕಿಕೊಂಡರು. ರಾತ್ರಿ ಊಟದ ಸಮಯವಾಗಿ ವಿಜಯ ಊಟದ ತಟ್ಟೆ ಮತ್ತು ನೀರು ಅಯ್ಯಪ್ಪನಿಗೆ ತಂದುಕೊಟ್ಟು ಬಾಗಿಲು ಮುಂದೆ ಕೆಳಗಡೆ ಕುಳಿತುಕೊಂಡಳು. ಅಯ್ಯಪ್ಪ ಊಟ ಮಾಡುತ್ತ, “ಈ ಹುಡುಗಿ ಕಾಲೇಜ್ ಓದು ಮುಗಿದಂತೆಯೇ. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಇದುವರೆಗೂ ಯಾರೂ ಓದಿರಲಿಲ್ಲ. ಈ ಹುಡುಗಿಯನ್ನಾದರೂ ಚೆನ್ನಾಗಿ ಓದಿಸೋಣ ಅಂದುಕೊಂಡಿದ್ದೆ” ಎಂದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಒಳಗೊಂದು ಪರಿಸ್ಥಿತಿ.. ಹೊರಗೊಂದು ಪರಿಸ್ಥಿತಿ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ, “ಸೆಲ್ವಿ ನನ್ನ ಮಾತು ಕೇಳು. ಅಬಾರ್ಶನ್ ಮಾಡಿಕೊಂಡರೆ ಎಲ್ಲವೂ ಸರಿಯೋಗುತ್ತದೆ. ಮುಂದೆ ಅಂತಹ ತಪ್ಪು ನಡೆಯದಂತೆ ನೋಡಿಕೊಳ್ಳೋಣ. ನೀನು ಮುಂದಕ್ಕೆ ಓದಬಹುದು. ನಾನೂ ಹೇಗಾದರು ಮಾಡಿ ರಾತ್ರಿ ತರಗತಿಗಳಿಗೆ ಹೋಗಿ ಡಿಗ್ರಿ ಮುಗಿಸಬಹುದು. ಕಾಲೇಜಿನಲ್ಲಿ ಹೇಗೊ ರಾತ್ರಿಯೊತ್ತು ಆರ್ಟ್ ತರಗತಿಗಳಿಗೆ ಪಾಠ ಮಾಡ್ತಾರೆ” ಎಂದ. ಸೆಲ್ವಿ, “ಇಲ್ಲ ನಾನು ಅಬಾರ್ಶನ್ ಮಾತ್ರ ಮಾಡಿಕೊಳ್ಳುವುದಿಲ್ಲ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಕಾಣುತ್ತಿಲ್ಲವೇ ಅಲ್ಲಿ ಗೋದಿನಾಗರ…: ಡಾ. ಕೆ.ಬಿ. ಶ್ರೀಧರ್ ಕಾದಂಬರಿಯ ಪುಟಗಳು

ಪಲ್ಲವಿಯು ಮುಟ್ಟಿದಲ್ಲೆಲ್ಲಾ ರೋಹಿಣಿಯು ಸಡಿಲಗೊಂಡಳು. ಗಟ್ಟಿಯಾದ ಮೇಣವು ಬೆಂಕಿಯ ಕಾವಿಗೆ ಮೆತ್ತಗಾಗುವಂತೆ… ಗೌತಮನಿಗೆ ನಂಬಲಾಗಲಿಲ್ಲ, ಅರ್ಥವೂ ಆಗಲಿಲ್ಲ. ತನಗರಿಯದ ಯಾವುದೋ ಭಾಷೆಯಲ್ಲಿ ಇವರಿಬ್ಬರು ಸಂವಹಿಸುತ್ತಿದ್ದಾರೆ ಎಂದೆನಿಸಿತು. ಬಗೆಹರಿದಂತೆ ಕಂಡಿದ್ದ ಅನುಮಾನವು ಬುಗ್ಗೆಂದು ಹೊತ್ತಿಕೊಂಡಿತು. ಮೂತ್ರಕ್ಕೆ ಅವಸರವಾದಂತಾಗಿ ಬಚ್ಚಲ ಮನೆಗೆ ಓಡಿದ. ಪಲ್ಲವಿಯು ಮೆಲ್ಲಮೆಲ್ಲನೆ ರೋಹಿಣಿಯನ್ನು ನಡೆಸುತ್ತಾ ಮನೆಯೊಳಗೆ ಕರೆದುಕೊಂಡು ಬಂದು, ಸೋಫಾ ಮೇಲೆ ಕೂರಿಸಿದಳು.
ಡಾ. ಕೆ.ಬಿ. ಶ್ರೀಧರ್ ಹೊಸ ಕಾದಂಬರಿ “ಅನೂಹ್ಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ