Advertisement

Tag: ಕಾದಂಬರಿ

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ಸೀತಾಲಕ್ಷ್ಮಿಯ ಬದುಕಿನ ಸುತ್ತ…: ವಸುಮತಿ ಉಡುಪ ಕಾದಂಬರಿಯ ಪುಟಗಳು..

ತಂಬುಳಿಗೆ ಕಲೆಸಿದ್ದ ಅಷ್ಟೂ ಅನ್ನವನ್ನು ಬದಿಗೆ ದೂಡಿ ಹುಳಿಗೆ ಅನ್ನ ಕಲೆಸಲು ಸನ್ನದ್ಧನಾದ ಶಿವರಾಮ. ಹುಳಿ ಬಡಿಸಲು ಬಂದ ಸೀತಾಲಕ್ಷ್ಮಿಯ ಕೈಗಳು ಅಕ್ಷರಶಃ ನಡುಗುತ್ತಿದ್ದುವು. ತನ್ನ ತೌರಿನಲ್ಲಿ ಇಂತಾದ್ದೆಲ್ಲಾ ಕಂಡು ಗೊತ್ತಿಲ್ಲದ ಹುಡುಗಿಗೆ ದಿಗಿಲು, ದುಃಖ. ವಾಸ್ತವವಾಗಿ ಇದು ತನ್ನ ತಲೆಕೂದಲು ಎಂದು ಅವಳಿಗೆ ಅನುಮಾನ. ಮಂಗಳವಾರ ಅವತ್ತು. ಸೀತಾಲಕ್ಷ್ಮಿ ಅತ್ತೆ ಹೇಳಿದಂತೆ ತಲೆಗೆ ಎರೆದುಕೊಂಡಿದ್ದಳು. ಒದ್ದೆ ತಲೆಕೂದಲನ್ನು ಪಾಣಿಪಂಚೆಯಿಂದ ವರೆಸಿಕೊಂಡು ತುದಿಗಂಟು ಹಾಕಿಕೊಂಡಿದ್ದರೂ ಉಟ್ಟ ಸೀರೆಯ ಮೇಲೆ ಕೂದಲು ಉದುರಿ ಬಿದ್ದಿರಬಹುದಾದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ವಸುಮತಿ ಉಡುಪ ಬರೆದ ಕಾದಂಬರಿ “ಅಂತಃಪುರ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ