Advertisement

Tag: ಕಾದಂಬರಿ

ಹೆಣ್ತನದ ಒಳಬೇಗುದಿಯನ್ನು ಬಿಂಬಿಸುವ ಪುಟ್ಟಮ್ಮಯ್ಯ

ಬಾಲಕಿಯಾಗಿ ಏನೊಂದನ್ನೂ ಅರಿಯುವ ಮುನ್ನವೇ ಚಿಕ್ಕಾವಲ್ಲಪ್ಪನನ್ನು ಮದುವೆಯಾಗಿ ಸ್ವಂತ ಅತ್ತೆಯ ಮನೆಗೆ ಬರುವ ಪುಟ್ಟಮ್ಮ ಮನೆ ಹಾಗೂ ಹೊಲದ ಕೆಲಸಗಳ ಜವಾಬ್ದಾರಿಯನ್ನು ನಿರ್ವಹಿಸುತ್ತ ಮುಂದೆ ಕನ್ಯೆಯಾಗಿಯೂ ಗಂಡನೊಂದಿಗೆ ಸೇರಲು ಅವಕಾಶವಿರದೆ ವಯೋಸಹಜ ಕಾಮನೆಗಳನ್ನು ಹತ್ತಿಕ್ಕಿಕೊಂಡು ಸುಮಾರು ಎರೆಡು ದಶಕಗಳ ಕಾಲ ಬಂಜೆ ಎಂಬ ಹಣೆಪಟ್ಟಿ ಹೊತ್ತು ಮುಂದೊಮ್ಮೆ ತಾಯಿಯಾಗುವುದು, ಕೆಳಜಾತಿಯ ಕೆಲಸಗಾರರೊಂದಿಗೆ ಸಲುಗೆಯಿಂದ ಬೆರೆತು ಅಂದಿನ ಆಚರಣೆಯಾದ ವರ್ಣಸಂಘರ್ಷವನ್ನು ನೈತಿಕವಾಗಿ ವಿರೋಧಿಸುವುದು. ಜವಾಬ್ದಾರಿಯುತ ಸೋದರಿಯಾಗಿ ತಮ್ಮನನ್ನು ವಿದ್ಯಾವಂತನನ್ನಾಗಿ ಮಾಡುವುದು.
ಪ್ರೊ. ಕಟಾವೀರನಹಳ್ಳಿ ನಾಗರಾಜು ಬರೆದ ಕಾದಂಬರಿ “ಪುಟ್ಟಮ್ಮಯ್ಯ” ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ