Advertisement

Tag: ಕಾವ್ಯಾ ಕಡಮೆ

“ಮಿಥ್ಯಸುಖ”: ಕಾವ್ಯಾ ಕಡಮೆ ಹೊಸ ಕಾದಂಬರಿಯ ಆಯ್ದ ಭಾಗ

ಖಾಲಿ ಡಬರಿಯಲ್ಲಿ ಕಲ್ಲು ಗಲಗಲಿಸಿದಂತೆ ವಟವಟ ಎನ್ನುವ, ಹೊಕ್ಕಿದ ಕೋಣೆಯಲ್ಲೆಲ್ಲ ಹೀರೋ ಆಗುವ ಶತಪ್ರಯತ್ನ ನಡೆಸುತ್ತಲೇ ಒದ್ದಾಡುವ ಗಂಡಸರಿಂದ ನಾನು ಎಂದಿಗೂ ದೂರವೇ ಸರಿದಿದ್ದೇನೆ. ನಿಮಗೆ ನನ್ನ ಮೇಲೆ ಪ್ರಭಾವ ಬೀರುವುದಿದೆಯೇ? ಹಾಗಿದ್ದರೆ ದಯವಿಟ್ಟು ಮಾತು ನಿಲ್ಲಿಸಿ. ಪ್ರಪಂಚದಲ್ಲಿ ಹೇಳಲೇ ಬೇಕಿರೋದನ್ನೆಲ್ಲ ಶಬ್ದಗಳಿಲ್ಲದೇ ಸಂವಹಿಸಬಹುದು ಎಂಬುದನ್ನು ಮನಸಾ ಪಾಲಿಸಿದ್ದೇನೆ. ಸುಹಾಸನ ಬಳಿ ಮೊದಲ ಸಲ ಫೋನಿನಲ್ಲಿ ಮಾತನಾಡಿದಾಗ ಅವನು ಇಂಟರ್‌ವ್ಯೂಗೆ ತಯಾರಿ ಮಾಡಿಕೊಂಡು ಬಂದವನ ಹಾಗೆ ಒಂದು ಕ್ಷಣವನ್ನೂ ಬಿಡದೇ ತನ್ನ ಬದುಕಿನ ಎಲ್ಲ ಮೈಲುಗಲ್ಲುಗಳ ಪ್ರವರ ಒಪ್ಪಿಸಿದ್ದ.
ಕಾವ್ಯಾ ಕಡಮೆ ಹೊಸ ಕಾದಂಬರಿ “ಮಿಥ್ಯಸುಖ” ಇದೇ ಶನಿವಾರ ಬಿಡುಗಡೆಯಾಗಲಿದ್ದು, ಈ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ ಕೂತಿರುವಾಗ “ಮುಚ್ಚಿದ ಕಿಟಕಿಯಿಂದ…. ಸೋರಿ ಅವಳ ಕೂದಲ ಗುಂಗುರುಗಳ ಮೇಲೆ” ಹೊಳಪು ಸುರಿಯುವ ಬಿಸಿಲು ಕೋಲುಗಳು ನೀಡುವ ಹಿತವನ್ನು ಗಮನಿಸದೇ ಇರುವುದಿಲ್ಲ.
ಕಾವ್ಯಾ ಕಡಮೆ ಕಾದಂಬರಿ “ಪುನರಪಿ”ಯ ಕುರಿತು ರಾಮಪ್ರಸಾದ್ ಬಿ.ವಿ. ಬರಹ

Read More

ಹೊಸ ತಲೆಮಾರಿನ ಕಥೆಗಳು

‘ಕೊನೇ ಊಟ’ ಈ ಸಂಕಲನದ ಅತ್ಯಂತ ಮುಖ್ಯವಾದ ಅಷ್ಟೇ ಹೃದಯಸ್ಪರ್ಶಿ ಕಥೆ. ಸಂಯುಕ್ತ ಸಂಸ್ಥಾನಗಳ ನೇವಾರ್ಡ ರಾಜ್ಯದಲ್ಲಿ ಪೂರ್ವಕ್ಕಿರುವ ಕುಪ್ರಸಿದ್ಧ ಕಾರಾಗೃಹ ಈಲಿಯ ಜೈಲು. ಜೈಲಿನ ಸುತ್ತಲಿನ ಗೋಡೆಯನ್ನು ಹರಿತವಾದ ರೇಜರ್ ಬ್ಲೇಡುಗಳಿಂದ ನಿರ್ಮಿಸಿದ್ದಾರೆಂದರೆ ಒಳಗಡೆ ಇನ್ನೆಷ್ಟು ಭಯಾನಕ ಯಾತನಾಮಯ ದಬ್ಬಾಳಿಕೆ ನಡೆದಿರುತ್ತದೆಯೆಂಬುದು ಕೇವಲ ಊಹೆಗೆ ಬಿಟ್ಟ ವಿಷಯ, ಯಾವ ಕೈದಿಯೂ ಇಲ್ಲಿಂದ ಜೀವಂತ ಬಿಡುಗಡೆಯಾಗಿ ಹೊರಗೆ ಬಂದಿಲ್ಲ ಅಥವಾ ಗೋಡೆ ಜಿಗಿದು ಪಾರಾಗಿ ಓಡಿಹೋಗಿಲ್ಲ..
ಕಾವ್ಯಾ ಕಡಮೆ ಕಥಾ ಸಂಕಲನ “ಮಾಕೋನ ಏಕಾಂತ”ದ ಕುರಿತು ವಿಶ್ಲೇಷಣೆ ಬರೆದಿದ್ದಾರೆ ವ್ಯಾಸ ದೇಶಪಾಂಡೆ 

Read More

ಬರವಣಿಗೆ ಎಂಬ ಅಫೀಮು

ಎಲ್ಲರಿಗೂ ಸಮನಾಗಿ ಸಿಗುವ ಇಪ್ಪತ್ನಾಲ್ಕೇ ಘಂಟೆಗಳನ್ನು ಇವರೆಲ್ಲ ತಡೆದು ನಿಲ್ಲಿಸಿದರು ಹೇಗೆ? ಜೀವನಕ್ಕೆ ಬೇಕಾದ ಹಣ ಸಂಪಾದಿಸಿದರು ಹೇಗೆ? ಮನೆಯನ್ನು ತೂಗಿಸಿದರು ಹೇಗೆ? ಅರೆ ಹೊಟ್ಟೆ ಉಂಡೇ ಎಷ್ಟು ರಾತ್ರಿ ಕಳೆದರು? ಅಷ್ಟಾಗಿಯೂ ಒಂದೊಳ್ಳೆಯ ಪುಟ ಬರೆದ ಮೇಲೆ ಅವರ ತುಟಿಯ ಮೇಲೆ ಮೂಡಿದ ಮುಗುಳೆಂಥದು? ಅಪಹಾಸ್ಯಕ್ಕೊಳಗಾದರೇ? ಪ್ರೀತಿಸುವವರಿಂದ ದೂರವಾದರೇ? ಅವರು ತಮ್ಮ ಬರವಣಿಗೆಗಾಗಿ ತೆತ್ತ ಬೆಲೆಯೆಂಥದು? ಕಲೆಯಿಂದ ಸಿಗುವ ಸುಖ ಈ ಎಲ್ಲವನ್ನೂ ಮೀರಿದ್ದೇ?

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ