ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ
ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ
