Advertisement

Tag: ಕೆಂಡಸಂಪಿಗೆ

ರಾಜ್ಕುಮಾರ್ ಅಂದ್ರ ಏನಂದ್ಕಂಡೆ?: ಎಂ. ಜವರಾಜ್‌ ಹೊಸ ಕಾದಂಬರಿಯ ಆಯ್ದ ಭಾಗ

ಪಂಚಾಯ್ತಿ ಆಫೀಸ್ ಮಗ್ಗುಲು ಬೀದಿಲಿದ್ದ ಕುಂಟ ಸಿದ್ದಪ್ಪನ ಮನೆಯ ಅಂಗಳದಲ್ಲಿ ಒಂದಷ್ಟು ಜನ ಮಾತಾಡ್ತ ನಿಂತಿದ್ದರು. ಅಲ್ಲಿಗೆ ನಾಕಾರು ಪೇಪರು ಬರುತ್ತಿದ್ದವು. ಕುಂಟ ಸಿದ್ದಪ್ಪ ಬಿಳಿಪಂಚೆ ಬಿಳಿ ಶರ್ಟು ಹಾಕೊಂಡು ಕ್ರಾಪ್ ತಲೆ ಬಾಚ್ಕೊಂಡು ಕಾಲಿನ ಮೇಲೆ ಕಾಲು ಹಾಕಿಕೊಂಡು “ಇದು ಗೋಕಾಕ್ ಚಳುವಳಿ ಅಂತ. ಅವ್ರೊಬ್ಬ ದೊಡ್ ಕವಿ. ಅವ್ರು ಸರ್ಕಾರಕ್ಕೆ ಬರ್ದ ಪತ್ರನ ಇಟ್ಕೊಂಡು ನಡಿತಿರ ಹೋರಾಟ ಇದು. ಏಯ್‌ ನೋಡ್ರಪ್ಪ, ಬಾಯಿಲ್ಲಿ” ಅಂತ ಕರೆದು, “ನೀನು ಐದ್ನೆ ಕ್ಲಾಸಾ? ನಾಕ್ನೆ ಕ್ಲಾಸಾ?” ಅಂದ. ನಾನು, ʼಹುʼ” ಎನ್ನುವವನಂತೆ ತಲೆದೂಗಿದೆ. “ಹೌದಾ? ಹೋಗು, ಇನ್ಮೇಲ ಇಂಗ್ಲಿಸ್ ಗಿಂಗ್ಲಿಸ್ ಓದಂಗಿಲ್ಲ, ಬರೀ ಕನ್ನಡ. ನಿನ್ತವು ಇಂಗ್ಲಿಸ್ ಬುಕ್ಸ್ ಇದ್ರ ತೂದು ಬಿಸಾಕಿ ಕನ್ನಡ ಇಟ್ಗ” ಅಂದ. ಅಲ್ಲೊಬ್ಬ ಕೇಳ್ತಿದ್ದವನು “ಇದ್ಕ ರಾಜ್ಕುಮಾರ್ ಯಾಕ್ ಮದ್ಯಕ್ ಬಂದ?” ಅಂತ ಕೇಳಿದ.
ಎಂ. ಜವರಾಜ್‌ ಹೊಸ ಕಾದಂಬರಿ “ಪೋಸ್ಟ್‌ಮ್ಯಾನ್‌ ಗಂಗಣ್ಣ” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

 ಬದಲಾಗಿದೆ ಕನ್ನಡ ನಾಡು, ಡಿಜಿಟಲ್ ಕರ್ನಾಟಕದ ಹಾಡು ಪಾಡು: ಎಲ್.ಜಿ.ಮೀರಾ ಅಂಕಣ

ಇಪ್ಪತ್ತೊಂದನೇ ಶತಮಾನದ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಎಲ್ಲ ನಾಡುಗಳಂತೆ ನಮ್ಮ ಕನ್ನಡ ನಾಡು ಸಹ ಬದಲಾಗುತ್ತಿದೆ. ನಮಗೆ ಬೇಕೋ ಬೇಡವೊ ನಮಗೆ ಪರಿಚಿತವಾಗಿದ್ದ ಬದುಕಿನ ಲಯಗಳು ನಿಧಾನವಾಗಿ ಮರೆಯಾಗುತ್ತಾ, ಅಪರಿಚಿತ, ನೂತನ ಲಯಗಳು ನಮ್ಮ ದಾರಿಯಲ್ಲಿ ಪ್ರತ್ಯಕ್ಷವಾಗುತ್ತಿವೆ. `ಅಯ್ಯೋ, ಹೇಗಿದ್ದದ್ದು ಹೇಗಾಯ್ತಪ್ಪ! ಎಲ್ಲ ಹಾಳಾಗಿ ಹೋಯಿತಲ್ಲ! ಮನುಷ್ಯ ಪ್ರಪಂಚ ಇನ್ನು ಮುಳುಗಿ ಹೋಗುತ್ತೆ! ಪ್ರಳಯವಾಗುತ್ತೆ!!’ ಎಂದು ಗೋಳಾಡುತ್ತಾ ಕೂರುವುದು ವಿವೇಕದ ಆಯ್ಕೆಯಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೆರಡನೆಯ ಬರಹ

Read More

ಜಗತ್ತಿನ ಅತ್ಯಂತ ಸುಂದರ ಫೋಟೋ(2):ಶೇಷಾದ್ರಿ ಗಂಜೂರು ಸರಣಿ

ಈ ಆಲೋಚನೆ ಹೊಳೆದ ರಾತ್ರಿ ಅವನಿಗೆ ನಿದ್ದೆಯೇ ಬರಲಿಲ್ಲ. ಕಾಲೇಜಿನ ಇನ್ನೊಬ್ಬ ಪ್ರೊಫೆಸರ್ ಕೊಟ್ಟಿದ್ದ ಹೋಂ ವರ್ಕ್ ಮಾಡಲೂ ಸಹ ಮನಸು ಬರಲಿಲ್ಲ. ಬದಲಿಗೆ, ಹಾಸಿಗೆಯಿಂದೆದ್ದು, ಇಲ್ಲಿಯವರೆಗೆ ಕಲೆ ಹಾಕಿದ್ದ ಅಂಕಿ-ಸಂಖ್ಯೆಗಳು-ಮಾಹಿತಿಗಳನ್ನೆಲ್ಲಾ ಮತ್ತೆ-ಮತ್ತೆ ನೋಡಿ, ಸಣ್ಣ ಕಾಗದದ ಮೇಲೊಂದು ದಾರದಂತೆ ಗೆರೆಯೊಂದನ್ನು ಎಳೆದು ಅದರ ಮೇಲೆ, ತನ್ನ ಲೆಕ್ಕಾಚಾರ ಬಳಸಿ ಬಿಳಿಗಣ್ಣು, ಹಳದಿ ಬಣ್ಣ, ಕಿರು ರೆಕ್ಕೆ, ಹಾರೆಗಣ್ಣು ಇತ್ಯಾದಿ ಜೀನುಗಳನ್ನು ಮಾರ್ಕ್ ಮಾಡಿದ. ವಂಶವಾಹಿ ಗುಣಗಳು ಒಂದು ಪೀಳಿಗೆಯಿಂದ ಇನ್ನೊಂದಕ್ಕೆ ಹೇಗೆ ಸಂವಹಿಸುತ್ತದೆ ಎಂದು ತೋರುವ “ಜೀನ್ ಮ್ಯಾಪ್” ಒಂದು ಹೀಗೆ ಮಾನವ ಇತಿಹಾಸದಲ್ಲೇ ಮೊದಲ ಬಾರಿಗೆ ಸಿದ್ಧವಾಯಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಮಳೆ, ನೆನಪು ಮತ್ತು ಸಂಬಂಧ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಯಾವುದೂ ಕಳೆದು ಹೋಗದ ಹೊರತಾಗಿ ಅದರ ಮೌಲ್ಯ ನಮಗೆ ಗೊತ್ತಾಗುವುದಿಲ್ಲ ಅನ್ನುವುದೇ ಈ ಬದುಕಿನ ಅತಿದೊಡ್ಡ ವಿಪರ್ಯಾಸ. ಪ್ರತೀ ಕ್ಷಣವನ್ನೂ ಉತ್ಕಟವಾಗಿ ಜೀವಿಸಬೇಕು ಅಂದುಕೊಳ್ಳುವ ಒಂದು ಫಿಲಾಸಫಿ ಶುರು ಆಗುವುದೇ ಈ ಕಳೆದುಹೋದ ಫೀಲ್ ಬಂದ ನಂತರವೇ. ಅಷ್ಟರಲ್ಲಾಗಲೇ ನಮ್ಮ ಅರ್ಧ ಆಯುಷ್ಯ ಮುಗಿದುಹೋಗಿರುತ್ತದೆ. ಇನ್ನು ದಿನಗಳು ಕಮ್ಮಿ ಅನ್ನುವ ಅರಿವಾಗುವಾಗ ಈ ಪ್ರತೀಕ್ಷಣವನ್ನೂ ಉತ್ಕಟವಾಗಿ ಬದುಕುವ ಆಸೆಯೊಂದು ಹುಟ್ಟಿಕೊಳ್ಳುತ್ತದೆ. ಆದರೆ ಹಾಗೆ ಬದುಕುತ್ತೇವಾ? ಹೇರಿಕೊಂಡ ಜವಾಬ್ದಾರಿಯ ಮೂಟೆಗಳನ್ನು ಇಳಿಸಿ ಹಗುರ ಆಗುವುದು ಸಾಧ್ಯನಾ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಮೂರನೆಯ ಬರಹ

Read More

ನಮಗೊಂದು ಸೊಸೆ ಬೇಕು: ಕೆ. ಸತ್ಯನಾರಾಯಣ ಹೊಸ ಕಾದಂಬರಿಯ ಆಯ್ದ ಭಾಗ

ಸತೀಶ ದುರ್ದಾನ ತೆಗೆದುಕೊಂಡವನಂತೆ ರೂಮಿಗೆ ಹೋಗಿ ಬಾಗಿಲನ್ನು ಪಟಾರನೆ ಹಾಕಿಕೊಂಡ. ಹಾಲ್‌ನಲ್ಲೇ ಉಳಿದಿದ್ದ ಮೂರ್ತಿ-ಅನಿತಾ ಕೂಡ ಕಾಲೆಳೆದುಕೊಂಡು ರೂಮಿಗೆ ಹೋದರು. ಇಬ್ಬರೂ ಮಂಚದ ಮೇಲೆ ನೀಟಾಗಿ ಹಾಸಿದ್ದ ಹಾಸಿಗೆಯ ಮೇಲೆ ಕುಳಿತುಕೊಂಡು ಒಬ್ಬರನ್ನೊಬ್ಬರು ನೋಡುತ್ತಲೇ ಇದ್ದರು. ಮಾತೇ ಹೊರಡಲಿಲ್ಲ. ಅನಿತಾ ಹತ್ತು ಸಲ ಬಚ್ಚಲು ಮನೆಗೆ ಹೋಗಿ ಬಂದರು. ಮೂರ್ತಿ ಒಂದಿಪ್ಪತ್ತು ಸಲ ಕೂದಲನ್ನು ಕಿತ್ತು ಹಾಕಿದರು. ಬಲಗೈ ಮಧ್ಯ ಬೆರಳಿನ ಉಗುರನ್ನು ಕಡಿಯುತ್ತಲೇ ಇದ್ದರು. ದೀಪ ಆರಿಸಿ ಮಲಗಲು ಇಬ್ಬರಿಗೂ ಭಯವಾಯಿತು. ಬಲ್ಬ್‌ ಪ್ರತಿದಿವಸವೂ ಹೊರಡಿಸುವುದಕ್ಕಿಂತ ಹೆಚ್ಚಿನ ಕಾಂತಿಯನ್ನು ಹೊರಡಿಸುತ್ತಿದೆ ಅನಿಸಿತು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ನಮಗೊಂದು ಸೊಸೆ ಬೇಕು” ಕೃತಿಯ ಆಯ್ದ ಭಾಗ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ