Advertisement

Tag: ಕೆಂಡಸಂಪಿಗೆ

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ಜೈಲು ಮತ್ತು ಮಳೆ: ಕೆ. ಸತ್ಯನಾರಾಯಣ ಸರಣಿ

ದೂರದೃಷ್ಟಿಯುಳ್ಳ ಆಡಳಿತಗಾರರ ಲೆಕ್ಕಾಚಾರವನ್ನೂ ಮೀರಿ ಅಪರಾಧಿಗಳು, ಪಾಪಿಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಲೇ ಇತ್ತು. ನಗರವು ಬೆಳೆದಂತೆ, ಎಲ್ಲ ವರ್ಗದ ಜನರು, ತಂತ್ರಜ್ಞರು, ಪೋಲೀಸರು ಕೂಡ ಹೆಚ್ಚಾಗುತ್ತಾರೆ ಎಂಬುದು ನಿಜವಾದರೂ, ಅಪರಾಧಿಗಳ ಸಂಖ್ಯೆಯ ಬೆಳವಣಿಗೆಯ ದರ ಎಲ್ಲ ಅನುಪಾತಗಳನ್ನೂ ಮೀರಿತ್ತು. ಪೋಲೀಸರ ದಕ್ಷತೆ, ನಾಗರಿಕರ ಸಮಾಜಪ್ರಜ್ಞೆಯಿಂದಾಗಿ ಎಲ್ಲ ಠಾಣೆಗಳಲ್ಲೂ ಹೆಚ್ಚು ಹೆಚ್ಚು ದೂರುಗಳು ಬರುತ್ತಿದ್ದವು, ದಾಖಲಾಗುತ್ತಿದ್ದವು. ಕಳ್ಳರು, ಕೊಲೆಗಡುಕರು ಕೂಡ ಬೇಗ ಬೇಗ ಸಿಕ್ಕಿಹಾಕಿಕೊಳ್ಳುತ್ತಿದ್ದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಐದನೆಯ ಬರಹ ನಿಮ್ಮ ಓದಿಗೆ

Read More

ಅಡಕತ್ತರಿಯಲ್ಲಿ ನಿಂತು…: ಗುರುಪ್ರಸಾದ ಕುರ್ತಕೋಟಿ ಸರಣಿ

ಬಂದು ಆಗಲೇ ಮೂರು ದಿನಗಳಾಗಿತ್ತು. ನಾನು ತಾಳ್ಮೆ ಕಳೆದುಕೊಳ್ಳತೊಡಗಿದೆ. ಇನ್ನೂ ಎಲ್ಲಿ ಕೆಲಸಕ್ಕೆ ಹೋಗಬೇಕು ಅಂತ ನನ್ನ ದಾಸ್ ಬಾಸ್ ಯಾಕೆ ಹೇಳುತ್ತಿಲ್ಲ ಅಂತ ದಿಗಿಲು ಉಂಟಾಯಿತು. ಫೋನಾಯಿಸಿ ಕೇಳಿದೆ ಕೂಡ. ಇರಿ ಇವತ್ತು ಸಂಜೆ ನಿಮ್ಮ ಹೊಟೇಲ್ ಹತ್ತಿರ ಸಿಗುವೆ ಅಂದರು ದಾಸ್. ಸಂಜೆ ಸ್ವಲ್ಪ ತಡವಾಗಿಯೇ ಆದರೂ ಬಂದರು. ಚಳಿ ಈಗಾಗಲೇ ಶುರುವಾಗಿತ್ತು. ಹೀಗಾಗಿ ಅವರ ಕಾರ್ ಅನ್ನು ಶುರು ಇಟ್ಟುಕೊಂಡೆ ಅದರ ಒಳಗಡೆಯೇ ಮಾತಾಡಲು ಕೂತೆವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ